AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ

‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ
ಮೊಹಾಲಿಯಲ್ಲಿ ರಾಕೆಟ್​ ದಾಳಿ ನಡೆದಿದೆ.
TV9 Web
| Edited By: |

Updated on:May 10, 2022 | 8:07 AM

Share

ಮೊಹಾಲಿ: ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ಕಚೇರಿಯ ಮೇಲೆ ರಾಕೆಟ್ ದಾಳಿ ನಡೆದಿದೆ. ರಾಕೆಟ್ ಪ್ರೊಪೆಲ್​ಡ್ ಗ್ರೆನೇಡ್ (rocket-propelled grenade – RPG) ಮೂಲಕ ನಡೆದಿರುವ ಗ್ರೆನೇಡ್ ದಾಳಿಯಲ್ಲಿ ಗುಪ್ತಚರ ಇಲಾಖೆ ಕಟ್ಟಡದ ಗಾಜು ಒಡೆದು, ಪುಡಿಯಾಗಿದೆ. ಯಾವುದೇ ಜೀವಹಾನಿಯಾಗಿಲ್ಲ. ದಾಖಲೆಗಳು ಹಾಳಾಗಿಲ್ಲ. ‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಹಾಲಿಯ ಸೆಕ್ಟರ್ 77ರಲ್ಲಿರುವ ಎಸ್​ಎಎಸ್ ನಗರ ಪ್ರದೇಶದಲ್ಲಿರುವ ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ಇಲಾಖೆ ಮುಖ್ಯ ಕಚೇರಿಯ ಮೇಲೆ ರಾತ್ರಿ 7.45ಕ್ಕೆ ರಾಕೆಟ್ ದಾಳಿ ನಡೆದಿದೆ. ದಾಳಿಯಲ್ಲಿ ಯಾವುದೇ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಧಿವಿಜ್ಞಾನ ತಜ್ಞರೂ ಸ್ಥಳಕ್ಕೆ ಧಾವಿಸಿದ್ದು, ವಿಸ್ತೃತ ತನಿಖೆಗೆ ಆದೇಶ ನೀಡಲಾಗಿದೆ ಎಂದು ಮೊಹಾಲಿ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾಕೆಟ್​ ದಾಳಿ ಮಾದರಿಯ ಸ್ಫೋಟ ಸಂಭವಿಸಿದ್ದು, ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚಂಡಿಗಡದಿಂದ ಪೊಲೀಸ್ ಕ್ಷಿಪ್ರ ಕಾರ್ಯಪಡೆಯು ಮೊಹಾಲಿಗೆ ಭೇಟಿ ನೀಡಿದ್ದು, ಸ್ಥಳೀಯ ಪೊಲೀಸ್ ಸಿಬ್ಬಂದಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಇದನ್ನೂ ಓದಿ: ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿ ಬಾಂಬ್ ಸ್ಫೋಟಿಸಿದ ಮಹಿಳಾ ಬಾಂಬರ್ ಎಂಫಿಲ್ ವಿದ್ಯಾರ್ಥಿನಿ; ಆಕೆಯ ಕೃತ್ಯ ಬಗ್ಗೆ ಹೆಮ್ಮೆಯಿಂದ ಬೀಗುತ್ತಿರುವೆ ಎಂದ ಪತಿ

Published On - 8:06 am, Tue, 10 May 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ