AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ

‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ
ಮೊಹಾಲಿಯಲ್ಲಿ ರಾಕೆಟ್​ ದಾಳಿ ನಡೆದಿದೆ.
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 10, 2022 | 8:07 AM

Share

ಮೊಹಾಲಿ: ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ಕಚೇರಿಯ ಮೇಲೆ ರಾಕೆಟ್ ದಾಳಿ ನಡೆದಿದೆ. ರಾಕೆಟ್ ಪ್ರೊಪೆಲ್​ಡ್ ಗ್ರೆನೇಡ್ (rocket-propelled grenade – RPG) ಮೂಲಕ ನಡೆದಿರುವ ಗ್ರೆನೇಡ್ ದಾಳಿಯಲ್ಲಿ ಗುಪ್ತಚರ ಇಲಾಖೆ ಕಟ್ಟಡದ ಗಾಜು ಒಡೆದು, ಪುಡಿಯಾಗಿದೆ. ಯಾವುದೇ ಜೀವಹಾನಿಯಾಗಿಲ್ಲ. ದಾಖಲೆಗಳು ಹಾಳಾಗಿಲ್ಲ. ‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಹಾಲಿಯ ಸೆಕ್ಟರ್ 77ರಲ್ಲಿರುವ ಎಸ್​ಎಎಸ್ ನಗರ ಪ್ರದೇಶದಲ್ಲಿರುವ ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ಇಲಾಖೆ ಮುಖ್ಯ ಕಚೇರಿಯ ಮೇಲೆ ರಾತ್ರಿ 7.45ಕ್ಕೆ ರಾಕೆಟ್ ದಾಳಿ ನಡೆದಿದೆ. ದಾಳಿಯಲ್ಲಿ ಯಾವುದೇ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಧಿವಿಜ್ಞಾನ ತಜ್ಞರೂ ಸ್ಥಳಕ್ಕೆ ಧಾವಿಸಿದ್ದು, ವಿಸ್ತೃತ ತನಿಖೆಗೆ ಆದೇಶ ನೀಡಲಾಗಿದೆ ಎಂದು ಮೊಹಾಲಿ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾಕೆಟ್​ ದಾಳಿ ಮಾದರಿಯ ಸ್ಫೋಟ ಸಂಭವಿಸಿದ್ದು, ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚಂಡಿಗಡದಿಂದ ಪೊಲೀಸ್ ಕ್ಷಿಪ್ರ ಕಾರ್ಯಪಡೆಯು ಮೊಹಾಲಿಗೆ ಭೇಟಿ ನೀಡಿದ್ದು, ಸ್ಥಳೀಯ ಪೊಲೀಸ್ ಸಿಬ್ಬಂದಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಇದನ್ನೂ ಓದಿ: ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿ ಬಾಂಬ್ ಸ್ಫೋಟಿಸಿದ ಮಹಿಳಾ ಬಾಂಬರ್ ಎಂಫಿಲ್ ವಿದ್ಯಾರ್ಥಿನಿ; ಆಕೆಯ ಕೃತ್ಯ ಬಗ್ಗೆ ಹೆಮ್ಮೆಯಿಂದ ಬೀಗುತ್ತಿರುವೆ ಎಂದ ಪತಿ

Published On - 8:06 am, Tue, 10 May 22

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?