AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ

‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಂಜಾಬ್​​​ನ ಮೊಹಾಲಿಯಲ್ಲಿ ರಾಕೆಟ್​ ದಾಳಿ: ಪೊಲೀಸ್ ಗುಪ್ತಚರ ವಿಭಾಗದ ಕಟ್ಟಡಕ್ಕೆ ಹಾನಿ
ಮೊಹಾಲಿಯಲ್ಲಿ ರಾಕೆಟ್​ ದಾಳಿ ನಡೆದಿದೆ.
TV9 Web
| Edited By: |

Updated on:May 10, 2022 | 8:07 AM

Share

ಮೊಹಾಲಿ: ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ಕಚೇರಿಯ ಮೇಲೆ ರಾಕೆಟ್ ದಾಳಿ ನಡೆದಿದೆ. ರಾಕೆಟ್ ಪ್ರೊಪೆಲ್​ಡ್ ಗ್ರೆನೇಡ್ (rocket-propelled grenade – RPG) ಮೂಲಕ ನಡೆದಿರುವ ಗ್ರೆನೇಡ್ ದಾಳಿಯಲ್ಲಿ ಗುಪ್ತಚರ ಇಲಾಖೆ ಕಟ್ಟಡದ ಗಾಜು ಒಡೆದು, ಪುಡಿಯಾಗಿದೆ. ಯಾವುದೇ ಜೀವಹಾನಿಯಾಗಿಲ್ಲ. ದಾಖಲೆಗಳು ಹಾಳಾಗಿಲ್ಲ. ‘ಇದೊಂದು ಸಣ್ಣ ಪ್ರಮಾಣದ ದಾಳಿಯಾಗಿದ್ದು, ಹೆಚ್ಚೇನೂ ನಷ್ಟವಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೊಹಾಲಿಯ ಸೆಕ್ಟರ್ 77ರಲ್ಲಿರುವ ಎಸ್​ಎಎಸ್ ನಗರ ಪ್ರದೇಶದಲ್ಲಿರುವ ಪಂಜಾಬ್ ಪೊಲೀಸ್ ಇಲಾಖೆಯ ಗುಪ್ತಚರ ಇಲಾಖೆ ಮುಖ್ಯ ಕಚೇರಿಯ ಮೇಲೆ ರಾತ್ರಿ 7.45ಕ್ಕೆ ರಾಕೆಟ್ ದಾಳಿ ನಡೆದಿದೆ. ದಾಳಿಯಲ್ಲಿ ಯಾವುದೇ ನಷ್ಟವಾಗಿರುವ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿಧಿವಿಜ್ಞಾನ ತಜ್ಞರೂ ಸ್ಥಳಕ್ಕೆ ಧಾವಿಸಿದ್ದು, ವಿಸ್ತೃತ ತನಿಖೆಗೆ ಆದೇಶ ನೀಡಲಾಗಿದೆ ಎಂದು ಮೊಹಾಲಿ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಪ್ರದೇಶದಲ್ಲಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ರಾಕೆಟ್​ ದಾಳಿ ಮಾದರಿಯ ಸ್ಫೋಟ ಸಂಭವಿಸಿದ್ದು, ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಚಂಡಿಗಡದಿಂದ ಪೊಲೀಸ್ ಕ್ಷಿಪ್ರ ಕಾರ್ಯಪಡೆಯು ಮೊಹಾಲಿಗೆ ಭೇಟಿ ನೀಡಿದ್ದು, ಸ್ಥಳೀಯ ಪೊಲೀಸ್ ಸಿಬ್ಬಂದಿಗೆ ಅಗತ್ಯ ನೆರವು ಒದಗಿಸುತ್ತಿದೆ.

ಇದನ್ನೂ ಓದಿ: ಉಕ್ರೇನ್​ನ ಶಾಲೆ ಮೇಲೆ ರಷ್ಯಾದಿಂದ ಬಾಂಬ್ ದಾಳಿ; 60ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಇದನ್ನೂ ಓದಿ: ಕರಾಚಿ ವಿಶ್ವವಿದ್ಯಾಲಯದಲ್ಲಿ ಬಾಂಬ್ ಸ್ಫೋಟಿಸಿದ ಮಹಿಳಾ ಬಾಂಬರ್ ಎಂಫಿಲ್ ವಿದ್ಯಾರ್ಥಿನಿ; ಆಕೆಯ ಕೃತ್ಯ ಬಗ್ಗೆ ಹೆಮ್ಮೆಯಿಂದ ಬೀಗುತ್ತಿರುವೆ ಎಂದ ಪತಿ

Published On - 8:06 am, Tue, 10 May 22

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​