AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Recruitment 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 3,993 ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆಯು RRB ಮೂಲಕ 3,993 ಜೂನಿಯರ್ ಇಂಜಿನಿಯರ್ (JE) ಮತ್ತು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್, ಡಿಪ್ಲೊಮಾ, B.Sc ಪದವೀಧರರಿಗೆ ಇದೊಂದು ಸುವರ್ಣಾವಕಾಶ. ಉತ್ತಮ ವೇತನ ಮತ್ತು ಭದ್ರತೆ ಹೊಂದಿರುವ ಈ ಹುದ್ದೆಗಳಿಗೆ ಆಗಸ್ಟ್ 14 ರಿಂದ ಸೆಪ್ಟೆಂಬರ್ 13 ರವರೆಗೆ ಅರ್ಜಿ ಸಲ್ಲಿಸಬಹುದು. ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ ಮತ್ತು ಪ್ರಮುಖ ದಿನಾಂಕಗಳ ವಿವರಗಳನ್ನು ಪರಿಶೀಲಿಸಿ.

RRB Recruitment 2026: ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ; 3,993 ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on: Aug 16, 2026 | 2:34 PM

Share

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ರೈಲ್ವೆ ನೇಮಕಾತಿ ಮಂಡಳಿಯು (RRB) ಕೇಂದ್ರೀಕೃತ ಉದ್ಯೋಗ ಅಧಿಸೂಚನೆ (CEN 04/2026) ಮೂಲಕ ಜೂನಿಯರ್ ಎಂಜಿನಿಯರ್ (JE) ಹಾಗೂ ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS) ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 3,993 ಹುದ್ದೆಗಳು ಖಾಲಿಯಿದ್ದು, ಅದರಲ್ಲಿ ಸಿಕಂದರಾಬಾದ್ ರೈಲ್ವೆ ವಲಯಕ್ಕೆ 110 ಹುದ್ದೆಗಳನ್ನು ಹಂಚಿಕೆ ಮಾಡಲಾಗಿದೆ. ಎಂಜಿನಿಯರಿಂಗ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿವಿಲ್, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಐಟಿ ವಿಭಾಗದಲ್ಲಿ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಬಹುದು.

ಹುದ್ದೆಯ ವಿವರಗಳು ಮತ್ತು ವೇತನ ಶ್ರೇಣಿ:

ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನ ಮತ್ತು ಸವಲತ್ತುಗಳು ದೊರೆಯಲಿವೆ. ಜೂನಿಯರ್ ಎಂಜಿನಿಯರ್ ಮತ್ತು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ 7ನೇ ವೇತನ ಆಯೋಗದ ಪ್ರಕಾರ ಆರಂಭಿಕ ಮೂಲ ವೇತನ ತಿಂಗಳಿಗೆ 35,400ರೂ. ಆಗಿರುತ್ತದೆ. ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಮನೆ ಬಾಡಿಗೆ ಭತ್ಯೆ (HRA), ತುಟ್ಟಿಭತ್ಯೆ (DA) ಸೇರಿದಂತೆ ವಿವಿಧ ಭತ್ಯೆಗಳು ಮತ್ತು ಉದ್ಯೋಗ ಭದ್ರತೆಯ ಸವಲತ್ತುಗಳು ಲಭ್ಯವಿರುತ್ತವೆ.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ಸಡಿಲಿಕೆ:

ಅಭ್ಯರ್ಥಿಗಳು ಜನವರಿ 1, 2027 ರ ವೇಳೆಗೆ 18 ರಿಂದ 33 ವರ್ಷ ವಯಸ್ಸಿನವರಾಗಿರಬೇಕು. ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದ್ದು, OBC ಅಭ್ಯರ್ಥಿಗಳಿಗೆ 3 ವರ್ಷ ಹಾಗೂ SC/ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ. PwBD ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ನಿಯಮಗಳ ಪ್ರಕಾರ ಹೆಚ್ಚುವರಿ ವಿನಾಯಿತಿ ಇರುತ್ತದೆ. ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತೆ, ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ, ಎಂಜಿನಿಯರಿಂಗ್ ಪದವಿ (B.E/B.Tech) ಅಥವಾ B.Sc ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ವಿಧಾನ:

ಅಭ್ಯರ್ಥಿಗಳ ಆಯ್ಕೆಯನ್ನು ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳು (CBT-I ಮತ್ತು CBT-II), ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಮಾಡಲಾಗುತ್ತದೆ. ಮೊದಲ ಹಂತದ CBT-I ಪರೀಕ್ಷೆಯು 90 ನಿಮಿಷಗಳ ಅವಧಿಯದ್ದಾಗಿದ್ದು, ಗಣಿತ (30), ಸಾಮಾನ್ಯ ವಿಜ್ಞಾನ (30), ಸಾಮಾನ್ಯ ಬುದ್ಧಿಮತ್ತೆ & ತಾರ್ಕಿಕತೆ (25) ಮತ್ತು ಸಾಮಾನ್ಯ ಅರಿವು (15) ಒಳಗೊಂಡ ಒಟ್ಟು 100 ಅಂಕಗಳ 100 ಪ್ರಶ್ನೆಗಳನ್ನು ಹೊಂದಿರುತ್ತದೆ. ಎರಡನೇ ಹಂತದ CBT-II ಪರೀಕ್ಷೆಯು 2 ಗಂಟೆಗಳ ಅವಧಿಯದ್ದಾಗಿದ್ದು, ತಾಂತ್ರಿಕ ಸಾಮರ್ಥ್ಯ (100), ಭೌತಶಾಸ್ತ್ರ & ರಸಾಯನಶಾಸ್ತ್ರ (15), ಸಾಮಾನ್ಯ ಅರಿವು (15), ಕಂಪ್ಯೂಟರ್ ಬೇಸಿಕ್ಸ್ (10) ಮತ್ತು ಪರಿಸರ & ಮಾಲಿನ್ಯ ನಿಯಂತ್ರಣ (10) ಒಳಗೊಂಡ ಒಟ್ಟು 150 ಅಂಕಗಳ 150 ಪ್ರಶ್ನೆಗಳನ್ನು ಹೊಂದಿರುತ್ತದೆ. ಎರಡೂ ಪರೀಕ್ಷೆಗಳಲ್ಲಿ ಪ್ರತಿ ತಪ್ಪು ಉತ್ತರಕ್ಕೆ 1/3 ಋಣಾತ್ಮಕ ಅಂಕಗಳಿರುತ್ತವೆ.

ಇದನ್ನೂ ಓದಿ: ಬೆಂಗಳೂರು ದಕ್ಷಿಣ ಜಿಲ್ಲೆ;102 ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ಮತ್ತು ಮರುಪಾವತಿ ವಿವರಗಳು:

ಸಾಮಾನ್ಯ, OBC ಮತ್ತು EWS ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500ರೂ. ನಿಗದಿಪಡಿಸಲಾಗಿದೆ. ಈ ಅಭ್ಯರ್ಥಿಗಳು CBT-I ಪರೀಕ್ಷೆಗೆ ಹಾಜರಾದ ನಂತರ 400ರೂ. ಮರುಪಾವತಿಯಾಗುತ್ತದೆ. ಇನ್ನು SC, ST, ಮಹಿಳೆಯರು, ಟ್ರಾನ್ಸ್‌ಜೆಂಡರ್, ಮಾಜಿ ಸೈನಿಕರು, EBC ಹಾಗೂ ದಿವ್ಯಾಂಗ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕವಿದ್ದು, ಇವರು CBT-I ಪರೀಕ್ಷೆ ಬರೆದರೆ ₹250 ಶುಲ್ಕದ ಪೂರ್ಣ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಸಲ್ಲಿಸುವ ವಿಧಾನ:

ಆನ್‌ಲೈನ್ ಅರ್ಜಿ ಸಲ್ಲಿಕೆಯು ಆಗಸ್ಟ್ 14 ರಿಂದ ಪ್ರಾರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 13 ಕೊನೆಯ ದಿನಾಂಕವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಸೆಪ್ಟೆಂಬರ್ 15 ರವರೆಗೆ ಕಾಲಾವಕಾಶವಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಯ ಆಯಾ RRB ಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ