AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Recruitment 2026: ಆರ್‌ಆರ್‌ಬಿಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ಜರಿ ನೇಮಕಾತಿ; ಪದವೀಧರರು ಅರ್ಹರು!

ರೈಲ್ವೇ ನೇಮಕಾತಿ ಮಂಡಳಿಯು (RRB) ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ 119 ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ ಮಾಸಿಕ 35,400 ರೂ.ನಿಂದ ಆರಂಭವಾಗುತ್ತದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಜುಲೈ 15 ರಿಂದ ಆಗಸ್ಟ್ 14 ರವರೆಗೆ. ಯುವಕ-ಯುವತಿಯರಿಗೆ ಇದು ಸುವರ್ಣಾವಕಾಶ, ಕೂಡಲೇ ಅರ್ಜಿ ಸಲ್ಲಿಸಿ ರೈಲ್ವೇಯಲ್ಲಿ ಉದ್ಯೋಗ ಪಡೆಯಿರಿ.

RRB Recruitment 2026: ಆರ್‌ಆರ್‌ಬಿಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ಭರ್ಜರಿ ನೇಮಕಾತಿ; ಪದವೀಧರರು ಅರ್ಹರು!
ರೈಲ್ವೇ ಇಲಾಖೆಯಲ್ಲಿ ಉದ್ಯೋಗImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jun 30, 2026 | 3:00 PM

Share

ಮುಖ್ಯಾಂಶಗಳು

  • ರೈಲ್ವೇ ನೇಮಕಾತಿ ಮಂಡಳಿಯಲ್ಲಿ ಸೆಕ್ಷನ್ ಕಂಟ್ರೋಲರ್ ಹುದ್ದೆಗಳಿಗೆ 119 ನೇಮಕಾತಿ
  • ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
  • ವೇತನ ಶ್ರೇಣಿ ಮಾಸಿಕ 35,400 ರೂ.ನಿಂದ ಆರಂಭವಾಗುತ್ತದೆ.

ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ-ಯುವತಿಯರಿಗೆ ಇಲ್ಲಿದೆ ಒಂದು ಸುವರ್ಣಾವಕಾಶ. ರೈಲ್ವೇ ನೇಮಕಾತಿ ಮಂಡಳಿಯು (RRB) ಈ ವರ್ಷದ ಮೂರನೇ ಕೇಂದ್ರೀಕೃತ ಉದ್ಯೋಗ ಅಧಿಸೂಚನೆಯನ್ನು (ಸಿಇಎನ್-2) ಹೊರಡಿಸಲು ಸಿದ್ಧತೆ ನಡೆಸಿದ್ದು, ಸೆಕ್ಷನ್ ಕಂಟ್ರೋಲರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇದಕ್ಕಾಗಿ ಇನ್ನೆರಡು ದಿನಗಳಲ್ಲಿ ಕಿರು ಅಧಿಸೂಚನೆಯು ಪ್ರಕಟವಾಗುವ ನಿರೀಕ್ಷೆಯಿದೆ. ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಆರ್‌ಆರ್‌ಬಿ ವಲಯಗಳಲ್ಲೂ ಒಟ್ಟಾರೆ 119 ಹುದ್ದೆಗಳನ್ನು ಇದಕ್ಕಾಗಿ ಗುರುತಿಸಲಾಗಿದೆ.

ಶೈಕ್ಷಣಿಕ ಅರ್ಹತೆ ಮತ್ತು ಆಕರ್ಷಕ ವೇತನ ಶ್ರೇಣಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ವಿಭಾಗದಲ್ಲಿ ಪದವಿ (Degree) ಮುಗಿಸಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಇದು 6ನೇ ಹಂತದ ವೇತನ ಶ್ರೇಣಿಯ ಹುದ್ದೆಗಳಾಗಿದ್ದು, ಆರಂಭಿಕ ವೇತನವು ಮಾಸಿಕ 35,400ರೂ. ಆಗಿರಲಿದೆ.

ವಯೋಮಿತಿ ಮತ್ತು ಸಡಿಲಿಕೆ ವಿವರಗಳು:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 33 ವರ್ಷ ವಯೋಮಾನವನ್ನು ನಿಗದಿಪಡಿಸಲಾಗಿದೆ. ಇದರೊಂದಿಗೆ ಸರ್ಕಾರದ ನಿಯಮಾವಳಿಗಳ ಪ್ರಕಾರ ವಯೋಸಡಿಲಿಕೆಯನ್ನು ಸಹ ನೀಡಲಾಗಿದೆ:

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (SC/ST): 5 ವರ್ಷ ಸಡಿಲಿಕೆ.
  • ಒಬಿಸಿ (OBC) ಅಭ್ಯರ್ಥಿಗಳಿಗೆ: 3 ವರ್ಷ ಸಡಿಲಿಕೆ.
  • ಅಂಗವಿಕಲ (PwBD) ಅಭ್ಯರ್ಥಿಗಳಿಗೆ: 10 ವರ್ಷ ಸಡಿಲಿಕೆ.
  • ಒಬಿಸಿ ವರ್ಗದ ಅಂಗವಿಕಲರಿಗೆ: 13 ವರ್ಷ ಸಡಿಲಿಕೆ.
  • ಪರಿಶಿಷ್ಟ ಜಾತಿ/ಪಂಗಡದ ಅಂಗವಿಕಲರಿಗೆ: 15 ವರ್ಷಗಳ ವಯೋಸಡಿಲಿಕೆ ಇರಲಿದೆ.

ಅರ್ಜಿ ಶುಲ್ಕದ ವಿವರ:

ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಮಹಿಳೆ, ಪರಿಶಿಷ್ಟ ಜಾತಿ/ಪಂಗಡ, ಮಾಜಿ ಸೈನಿಕರು, ಅಂಗವಿಕಲರು, ತೃತೀಯ ಲಿಂಗಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ (EBC) 250 ರೂ. ಅರ್ಜಿ ಶುಲ್ಕ ಇರಲಿದೆ. ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 500ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಆಯ್ಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಅರ್ಹ ಅಭ್ಯರ್ಥಿಗಳನ್ನು ಒಟ್ಟು ಮೂರು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ನಡೆಸಲಾಗುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಪ್ರಮುಖವಾಗಿ ಸಾಮಾನ್ಯ ಜ್ಞಾನ, ಸಾಮಾನ್ಯ ಗಣಿತ, ಲಾಜಿಕಲ್ ಮತ್ತು ಮೆಂಟಲ್ ರೀಸನಿಂಗ್ ವಿಷಯಗಳ ಕುರಿತಾದ ಪ್ರಶ್ನೆಗಳು ಇರಲಿವೆ. ಇದರಲ್ಲಿ ತೇರ್ಗಡೆಯಾದವರಿಗೆ ತದನಂತರ ದಾಖಲೆಗಳ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆ (Medical Examination) ನಡೆಯಲಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಮುಖ್ಯವಾಗಿ ದೃಷ್ಟಿ ಪರೀಕ್ಷೆಗಳನ್ನು (Eye Test) ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳು:

ಅಭ್ಯರ್ಥಿಗಳು ಕೇವಲ ಒಂದು ಆರ್‌ಆರ್‌ಬಿ ಮಂಡಳಿಯಿಂದ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆನ್‌ಲೈನ್ ಲಿಂಕ್ ಮೂಲಕ ಲಾಗಿನ್ ಆಗಿ ಮೊದಲು ಒಂದು ಬಾರಿಯ ನೋಂದಣಿ (One Time Registration) ಪೂರ್ಣಗೊಳಿಸಬೇಕು. ನಂತರ ಆನ್‌ಲೈನ್ ಅರ್ಜಿಯಲ್ಲಿ ಕೇಳಲಾಗಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳಿಗೆ ಆಧಾರ್ ಧೃಢೀಕರಣ ವಿಧಾನವನ್ನು ಅನುಸರಿಸಲು ಸಲಹೆ ನೀಡಲಾಗಿದೆ. ಜುಲೈ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇರಲಿದ್ದು, ಆಸಕ್ತರು ಆಗಸ್ಟ್ 14 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!
ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!