AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRB Technician Recruitment 2026: ರೈಲ್ವೆಯಲ್ಲಿ ಬಂಪರ್​​​ ನೇಮಕಾತಿ; ಅರ್ಜಿ ಸಲ್ಲಿಸಲು ಕೊನೆಯ 2 ದಿನಗಳು ಮಾತ್ರ ಬಾಕಿ!

ರೈಲ್ವೆ ನೇಮಕಾತಿ ಮಂಡಳಿಯು ದೇಶಾದ್ಯಂತ ಒಟ್ಟು 6,557 ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. SSLC, ITI, ಡಿಪ್ಲೊಮಾ ಮತ್ತು ಬಿ.ಎಸ್ಸಿ ಮುಗಿಸಿದ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 31, 2026 ಕೊನೆಯ ದಿನಾಂಕವಾಗಿದೆ. ವಯೋಮಿತಿ, ಪರೀಕ್ಷಾ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.

RRB Technician Recruitment 2026: ರೈಲ್ವೆಯಲ್ಲಿ ಬಂಪರ್​​​ ನೇಮಕಾತಿ; ಅರ್ಜಿ ಸಲ್ಲಿಸಲು ಕೊನೆಯ 2 ದಿನಗಳು ಮಾತ್ರ ಬಾಕಿ!
ರೈಲ್ವೆಯಲ್ಲಿ ನೇಮಕಾತಿImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 29, 2026 | 1:13 PM

Share

ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಇರುವ ತನ್ನ ವಿವಿಧ ವಲಯಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ತಂತ್ರಜ್ಞ (Technician) ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ರೈಲ್ವೆಯಲ್ಲಿ ಉದ್ಯೋಗ ಪಡೆಯಲು ಬಯಸುವ ಅರ್ಹ ಅಭ್ಯರ್ಥಿಗಳಿಗೆ ಇದೊಂದು ಅತ್ಯುತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಪ್ರಸ್ತುತ ಚಾಲ್ತಿಯಲ್ಲಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಇನ್ನು ಕೇವಲ 2 ದಿನಗಳು ಮಾತ್ರ ಬಾಕಿ ಉಳಿದಿದ್ದು, ಆಸಕ್ತ ಅಭ್ಯರ್ಥಿಗಳು ತಕ್ಷಣವೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಖಾಲಿ ಹುದ್ದೆಗಳ ವರ್ಗೀಕರಣ ಮತ್ತು ವಿಭಾಗಗಳು:

ಈ ನೇಮಕಾತಿ ಅಭಿಯಾನದ ಮೂಲಕ ದೇಶಾದ್ಯಂತ ಒಟ್ಟು 6,557 ತಂತ್ರಜ್ಞ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಪೈಕಿ 323 ತಂತ್ರಜ್ಞ ಗ್ರೇಡ್ 1 (ಸಿಗ್ನಲ್) ಹುದ್ದೆಗಳು ಮತ್ತು 6,234 ತಂತ್ರಜ್ಞ ಗ್ರೇಡ್ 3 ಹುದ್ದೆಗಳಿವೆ. ಈ ಹುದ್ದೆಗಳನ್ನು ಟ್ರ್ಯಾಕ್ ಮೆಷಿನ್, ಬ್ರಿಡ್ಜ್, ಡೀಸೆಲ್ ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, TRS, EMU, ಫಿಟ್ಟರ್, ವೆಲ್ಡರ್, ಕಾರ್ಪೆಂಟರ್ ಸೇರಿದಂತೆ ಹಲವು ಪ್ರಮುಖ ತಾಂತ್ರಿಕ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಹುದ್ದೆಗಳು ಲಭ್ಯವಿರುವ ಪ್ರಮುಖ ವಲಯಗಳು:

ಸಿಕಂದರಾಬಾದ್ ಹಾಗೂ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಹಮದಾಬಾದ್, ಅಜ್ಮೀರ್, ಭೋಪಾಲ್, ಭುವನೇಶ್ವರ, ಬಿಲಾಸ್‌ಪುರ್, ಚಂಡೀಗಢ, ಚೆನ್ನೈ, ಗುವಾಹಟಿ, ಜಮ್ಮು-ಶ್ರೀನಗರ, ಕೋಲ್ಕತ್ತಾ, ಮಾಲ್ಡಾ, ಮುಂಬೈ, ಮುಜಾಫರ್‌ಪುರ, ಪಾಟ್ನಾ, ಪ್ರಯಾಗರಾಜ್, ರಾಂಚಿ, ಸಿಲಿಗುರಿ, ತಿರುವನಂತಪುರಂ ಮತ್ತು ಗೋರಖ್‌ಪುರ ಪ್ರದೇಶಗಳಲ್ಲಿ ಈ ಖಾಲಿ ಹುದ್ದೆಗಳು ಲಭ್ಯವಿವೆ.

ಶೈಕ್ಷಣಿಕ ಅರ್ಹತೆಯ ವಿವರಗಳು:

ತಂತ್ರಜ್ಞ ಗ್ರೇಡ್ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10 ನೇ ತರಗತಿ (SSLC/Matriculation) ಉತ್ತೀರ್ಣರಾಗಿರಬೇಕು ಮತ್ತು ಸಂಬಂಧಿತ ಟ್ರೇಡ್‌ನಲ್ಲಿ ITI ಅಥವಾ ACT ಅಪ್ರೆಂಟಿಸ್‌ಶಿಪ್ ಪೂರ್ಣಗೊಳಿಸಿರಬೇಕು. ತಂತ್ರಜ್ಞ ಗ್ರೇಡ್ 1 (ಸಿಗ್ನಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿ.ಎಸ್ಸಿ (B.Sc) ಅಥವಾ ಸಂಬಂಧಿತ ಎಂಜಿನಿಯರಿಂಗ್ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಮತ್ತು ಸಡಿಲಿಕೆ:

ಅಭ್ಯರ್ಥಿಗಳ ವಯಸ್ಸಿನ ಮಿತಿಯನ್ನು ಗ್ರೇಡ್-I ಹುದ್ದೆಗಳಿಗೆ 18 ರಿಂದ 33 ವರ್ಷಗಳು ಹಾಗೂ ಗ್ರೇಡ್-III ಹುದ್ದೆಗಳಿಗೆ 18 ರಿಂದ 30 ವರ್ಷಗಳು ಎಂದು ನಿಗದಿಪಡಿಸಲಾಗಿದೆ. ಸರ್ಕಾರಿ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಮೀಸಲಾತಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ ಮತ್ತು ಶುಲ್ಕ ಮರುಪಾವತಿ:

ಸಾಮಾನ್ಯ, ಒಬಿಸಿ (OBC) ಮತ್ತು ಇಡಬ್ಲ್ಯೂಎಸ್ (EWS) ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 500 ಆಗಿರುತ್ತದೆ. ಎಸ್‌ಸಿ, ಎಸ್‌ಟಿ, ಮಹಿಳೆಯರು, ಮಾಜಿ ಸೈನಿಕರು, ಪಿಡಬ್ಲ್ಯೂಬಿಡಿ, ಟ್ರಾನ್ಸ್‌ಜೆಂಡರ್ ಮತ್ತು ಇಬಿಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 250 ನಿಗದಿಪಡಿಸಲಾಗಿದೆ. CBT ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಬ್ಯಾಂಕ್ ಶುಲ್ಕಗಳನ್ನು ಹೊರತುಪಡಿಸಿ ರೂ. 400 ರವರೆಗೆ ಶುಲ್ಕವನ್ನು ವಾಪಸ್ (Refund) ಮಾಡಲಾಗುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನಾಂಕ ಜುಲೈ 31 ಆಗಿದೆ.

ಇದನ್ನೂ ಓದಿ: ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ; ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ!

ಆಯ್ಕೆ ಪ್ರಕ್ರಿಯೆ ಮತ್ತು ಪರೀಕ್ಷಾ ಮಾದರಿ:

ಅಂತಿಮ ಆಯ್ಕೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದಾಖಲೆ ಪರಿಶೀಲನೆ (Document Verification) ಮತ್ತು ವೈದ್ಯಕೀಯ ಪರೀಕ್ಷೆಯ (Medical Exam) ಆಧಾರದ ಮೇಲೆ ನಡೆಸಲಾಗುತ್ತದೆ. CBT ಪರೀಕ್ಷೆಯನ್ನು ಒಟ್ಟು 100 ಪ್ರಶ್ನೆಗಳಿಗೆ 90 ನಿಮಿಷಗಳ ಕಾಲ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative Marking) ಇದ್ದು, ಪ್ರತಿ ತಪ್ಪು ಉತ್ತರಕ್ಕೂ 1/3 ಅಂಕಗಳನ್ನು ಕಳೆಯಲಾಗುತ್ತದೆ.

ವೇತನ ಶ್ರೇಣಿಯ ವಿವರಗಳು:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಂತ್ರಜ್ಞ ಗ್ರೇಡ್-I ಹುದ್ದೆಗಳಿಗೆ ಮಾಸಿಕ ಆರಂಭಿಕ ಮೂಲ ವೇತನ ರೂ. 29,200 ದೊರೆಯಲಿದೆ. ತಂತ್ರಜ್ಞ ಗ್ರೇಡ್-III ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ಮೂಲ ವೇತನ ರೂ. 19,900 ರೊಂದಿಗೆ ನಿಯಮಾನುಸಾರ ಇತರ ಕೇಂದ್ರ ಸರ್ಕಾರಿ ಭತ್ಯೆಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು ಮತ್ತು ಅರ್ಜಿ ತಿದ್ದುಪಡಿ:

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 31 ರ ರಾತ್ರಿ 11.59 ರವರೆಗೆ ಅವಕಾಶವಿರುತ್ತದೆ. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ಯಾವುದೇ ತಿದ್ದುಪಡಿಗಳು ಅಥವಾ ಪರಿಷ್ಕರಣೆಗಳನ್ನು ಮಾಡಬೇಕಿದ್ದರೆ, ಆಗಸ್ಟ್ 1 ರಿಂದ ಆಗಸ್ಟ್ 10 ರವರೆಗೆ ತಿದ್ದುಪಡಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ