ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ. ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ […]

ಮಾ‍ತು ತಪ್ಪದ ಜಗನ್ ಮೋಹನ್, ಸಂತ್ರಸ್ತರಿಂದ ಸೈ ಅನ್ನಿಸ್ಕೊಂಡ್ರು
ಜಗನ್ ಮೋಹನ್ ರೆಡ್ಡಿ
ಸಾಧು ಶ್ರೀನಾಥ್​

Updated on: May 12, 2020 | 8:51 AM

ಹೈದರಾಬಾದ್: ಆಂಧ್ರದ ವಿಶಾಖಪಟ್ಟಣಂ ಜಿಲ್ಲೆಯ ಎಲ್.ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ಸಂಭವಿಸಿದ್ದ ವಿಷಾನಿಲ ಸೋರಿಕೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರವನ್ನು ನೀಡುವುದಾಗಿ ಸಿಎಂ ಜಗನ್ ಮೋಹನ್ ರೆಡ್ಡಿ ಘೋಷಿಸಿದ್ದರು. ಮಾತಿನಂತೆಯೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಿಗೆ ತಲಾ 1 ಕೋಟಿ ರೂಪಾಯಿಯ ಚೆಕ್ ನೀಡಿದ್ದಾರೆ.

ಮುತ್ತಮ್‌ ಶೆಟ್ಟಿ ಶ್ರೀನಿವಾಸ ರಾವ್, ಎಂ. ವಿ.ವಿ ಸತ್ಯನಾರಾಯಣ, ಕುರಸಲ ಕಣ್ಣ ಬಾಬು ಮತ್ತು ಧರ್ಮನಾ ಕೃಷ್ಣ ದಾಸ್ ಸೇರಿದಂತೆ ಮಂತ್ರಿಗಳ ಗುಂಪು ಸೋಮವಾರ ದುರಂತಕ್ಕೀಡಾದ ಕುಟುಂಬ ಸದಸ್ಯರಿಗೆ ಜಾರ್ಜ್ ಆಸ್ಪತ್ರೆಯಲ್ಲಿ ಪರಿಹಾರವನ್ನು ಹಸ್ತಾಂತರಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಶುಕ್ರವಾರ 30 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us