AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ […]

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 09, 2020 | 6:14 PM

Share

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ ಕಾರ್ಯದರ್ಶಿ ಗಗನ್‌ದೀಪ್ ಸಿಂಗ್ ಬೇಡಿ ಹೇಳಿದ್ದಾರೆ.

ಇಲಾಖೆ ನಡೆಸಿದ ತನಿಖೆಯ ಪ್ರಕಾರ, 13 ಜಿಲ್ಲೆಗಳಿಂದ ಸುಮಾರು 5.5 ಲಕ್ಷ ಅನರ್ಹ ವ್ಯಕ್ತಿಗಳು ಸುಳ್ಳು ಮಾಹಿತಿ ನೀಡುವ ಮೂಲಕ ನಗದು ಸಹಾಯಧನವನ್ನು ಪಡೆದಿದ್ದಾರೆ. ಕಲ್ಲಕುರಿಚಿ ಮತ್ತು ವಿಲ್ಲುಪುರಂ ಜಿಲ್ಲೆಗಳು ಚೆಂಗಲ್ಪಟ್ಟು, ಕಡಲೂರು, ಧರ್ಮಪುರಿ, ಕಾಂಚೀಪುರಂ, ಕೃಷ್ಣಗಿರಿ, ರಾಣಿಪೇಟೆ, ಸೇಲಂ, ತಿರುವಣ್ಣಾಮಲೈ ಮತ್ತು ವೆಲ್ಲೂರು ಈ ಹಗರಣದ “ಕೇಂದ್ರಬಿಂದು” ಎಂದು ವರದಿಯಾಗಿದೆ.

ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ಶಾಖೆ-ಅಪರಾಧ ತನಿಖಾ ಇಲಾಖೆ (ಸಿಬಿಸಿಐಡಿ) 18 ಜನರನ್ನು ಬಂಧಿಸಿದೆ. ಹಾಗೂ ಹಗರಣಕ್ಕೆ ಸಂಬಂಧಿಸಿದಂತೆ 80 ಕ್ಕೂ ಹೆಚ್ಚು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಪಿಎಂ-ಕಿಸಾನ್ ಯೋಜನೆಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ಹೇಳಿದ್ದಾರೆ. ಈ ಯೋಜನೆಯಡಿ ಕೆಲವರು ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅವರಿಂದ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!