AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ […]

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?
ಸಾಧು ಶ್ರೀನಾಥ್​
|

Updated on: Sep 09, 2020 | 6:14 PM

Share

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ ಕಾರ್ಯದರ್ಶಿ ಗಗನ್‌ದೀಪ್ ಸಿಂಗ್ ಬೇಡಿ ಹೇಳಿದ್ದಾರೆ.

ಇಲಾಖೆ ನಡೆಸಿದ ತನಿಖೆಯ ಪ್ರಕಾರ, 13 ಜಿಲ್ಲೆಗಳಿಂದ ಸುಮಾರು 5.5 ಲಕ್ಷ ಅನರ್ಹ ವ್ಯಕ್ತಿಗಳು ಸುಳ್ಳು ಮಾಹಿತಿ ನೀಡುವ ಮೂಲಕ ನಗದು ಸಹಾಯಧನವನ್ನು ಪಡೆದಿದ್ದಾರೆ. ಕಲ್ಲಕುರಿಚಿ ಮತ್ತು ವಿಲ್ಲುಪುರಂ ಜಿಲ್ಲೆಗಳು ಚೆಂಗಲ್ಪಟ್ಟು, ಕಡಲೂರು, ಧರ್ಮಪುರಿ, ಕಾಂಚೀಪುರಂ, ಕೃಷ್ಣಗಿರಿ, ರಾಣಿಪೇಟೆ, ಸೇಲಂ, ತಿರುವಣ್ಣಾಮಲೈ ಮತ್ತು ವೆಲ್ಲೂರು ಈ ಹಗರಣದ “ಕೇಂದ್ರಬಿಂದು” ಎಂದು ವರದಿಯಾಗಿದೆ.

ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ಶಾಖೆ-ಅಪರಾಧ ತನಿಖಾ ಇಲಾಖೆ (ಸಿಬಿಸಿಐಡಿ) 18 ಜನರನ್ನು ಬಂಧಿಸಿದೆ. ಹಾಗೂ ಹಗರಣಕ್ಕೆ ಸಂಬಂಧಿಸಿದಂತೆ 80 ಕ್ಕೂ ಹೆಚ್ಚು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಪಿಎಂ-ಕಿಸಾನ್ ಯೋಜನೆಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ಹೇಳಿದ್ದಾರೆ. ಈ ಯೋಜನೆಯಡಿ ಕೆಲವರು ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅವರಿಂದ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ