AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ […]

ರೈತರ ಹಣವನ್ನೂ ಬಿಡದ ರಕ್ಕಸರು, ನುಂಗಿದ ಹಣವೆಷ್ಟು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 09, 2020 | 6:14 PM

Share

ಚೆನ್ನೈ: ಪಿಎಂ-ಕಿಸಾನ್ ಯೋಜನೆಯಡಿ 5.5 ಲಕ್ಷ ಅನರ್ಹ ಜನರ ಬ್ಯಾಂಕ್ ಖಾತೆಗಳಿಗೆ 110 ಕೋಟಿ ರೂಪಾಯಿ ಸಂದಾಯ ಮಾಡಿ ಭಾರೀ ವಂಚನೆ ಮಾಡಲಾಗಿದೆ ಎಂದು ತಮಿಳುನಾಡು ಸರ್ಕಾರ ಹೇಳಿದೆ.

ಅನರ್ಹ ಅಭ್ಯರ್ಥಿಗಳನ್ನು ಯೋಜನೆಯ ಫಲಾನುಭವಿಗಳಾಗಿ ಸೇರಿಸಲು ಸರ್ಕಾರಿ ಅಧಿಕಾರಿಗಳು ಹಾಗೂ ದಲ್ಲಾಳಿಗಳಿಗೆ ಸಹಾಯ ಮಾಡಿದ್ದಾರೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಈ ಮಧ್ಯೆ, ವಂಚಕರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಇದುವರೆಗೆ ಸುಮಾರು 10 ದಿನಗಳಲ್ಲಿ 32 ಕೋಟಿ ರೂ. ವಸೂಲಿ ಮಾಡಲು ರಾಜ್ಯಕ್ಕೆ ಸಾಧ್ಯವಾಗಿದೆ ಎಂದು ಕೃಷಿ ಕಾರ್ಯದರ್ಶಿ ಗಗನ್‌ದೀಪ್ ಸಿಂಗ್ ಬೇಡಿ ಹೇಳಿದ್ದಾರೆ.

ಇಲಾಖೆ ನಡೆಸಿದ ತನಿಖೆಯ ಪ್ರಕಾರ, 13 ಜಿಲ್ಲೆಗಳಿಂದ ಸುಮಾರು 5.5 ಲಕ್ಷ ಅನರ್ಹ ವ್ಯಕ್ತಿಗಳು ಸುಳ್ಳು ಮಾಹಿತಿ ನೀಡುವ ಮೂಲಕ ನಗದು ಸಹಾಯಧನವನ್ನು ಪಡೆದಿದ್ದಾರೆ. ಕಲ್ಲಕುರಿಚಿ ಮತ್ತು ವಿಲ್ಲುಪುರಂ ಜಿಲ್ಲೆಗಳು ಚೆಂಗಲ್ಪಟ್ಟು, ಕಡಲೂರು, ಧರ್ಮಪುರಿ, ಕಾಂಚೀಪುರಂ, ಕೃಷ್ಣಗಿರಿ, ರಾಣಿಪೇಟೆ, ಸೇಲಂ, ತಿರುವಣ್ಣಾಮಲೈ ಮತ್ತು ವೆಲ್ಲೂರು ಈ ಹಗರಣದ “ಕೇಂದ್ರಬಿಂದು” ಎಂದು ವರದಿಯಾಗಿದೆ.

ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ಶಾಖೆ-ಅಪರಾಧ ತನಿಖಾ ಇಲಾಖೆ (ಸಿಬಿಸಿಐಡಿ) 18 ಜನರನ್ನು ಬಂಧಿಸಿದೆ. ಹಾಗೂ ಹಗರಣಕ್ಕೆ ಸಂಬಂಧಿಸಿದಂತೆ 80 ಕ್ಕೂ ಹೆಚ್ಚು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಪಿಎಂ-ಕಿಸಾನ್ ಯೋಜನೆಯಲ್ಲಿ ಅಕ್ರಮಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಸೋಮವಾರ ಹೇಳಿದ್ದಾರೆ. ಈ ಯೋಜನೆಯಡಿ ಕೆಲವರು ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಅವರಿಂದ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಹೇಳಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ