ವಿಜಯ್ ಮಲ್ಯ, ನೀರವ್ ಮೋದಿ, ಚೋಕ್ಸಿಯಿಂದ ಬ್ಯಾಂಕ್​ಗಳಿಗೆ 18,000 ಕೋಟಿ ರೂ. ಹಿಂತಿರುಗಿಸಲಾಗಿದೆ; ಸುಪ್ರೀಂ ಕೋರ್ಟ್​​ಗೆ ಸರ್ಕಾರ ಮಾಹಿತಿ

| Updated By: ಸುಷ್ಮಾ ಚಕ್ರೆ

Updated on: Feb 23, 2022 | 6:28 PM

ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಪ್ರಕರಣದಲ್ಲಿ 18,000 ಕೋಟಿ ರೂ.ಗಳನ್ನು ಬ್ಯಾಂಕ್‌ಗಳಿಗೆ ಹಿಂತಿರುಗಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು (ಬುಧವಾರ) ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ವಿಜಯ್ ಮಲ್ಯ, ನೀರವ್ ಮೋದಿ, ಚೋಕ್ಸಿಯಿಂದ ಬ್ಯಾಂಕ್​ಗಳಿಗೆ 18,000 ಕೋಟಿ ರೂ. ಹಿಂತಿರುಗಿಸಲಾಗಿದೆ; ಸುಪ್ರೀಂ ಕೋರ್ಟ್​​ಗೆ ಸರ್ಕಾರ ಮಾಹಿತಿ
ವಿಜಯ್ ಮಲ್ಯ, ಮೆಹುಲ್ ಚೋಕ್ಸಿ, ನೀರವ್ ಮೋದಿ
Follow us on

ನವದೆಹಲಿ: ವಿಜಯ್ ಮಲ್ಯ (Vijay Mallya), ನೀರವ್ ಮೋದಿ (Nirav Modi) ಮತ್ತು ಮೆಹುಲ್ ಚೋಕ್ಸಿ (Mehul Choksi)ಯಿಂದ 18,000 ಕೋಟಿ ರೂ. ಹಣವನ್ನು ಬ್ಯಾಂಕ್‌ಗಳಿಗೆ ಹಿಂತಿರುಗಿಸಲಾಗಿದೆ ಎಂದು ಕೇಂದ್ರ ಸರ್ಕಾರ ಇಂದು ಸುಪ್ರೀಂ ಕೋ,.ರ್ಟ್‌ಗೆ ತಿಳಿಸಿದೆ. ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿ ವಾದ ಮಂಡಿಸಿದ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ನೇತೃತ್ವದ ಪೀಠದ ಮುಂದೆ ವಿವರಗಳನ್ನು ಸಲ್ಲಿಸಿದರು. ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಪ್ರಕರಣಗಳಲ್ಲಿನ ಅಪರಾಧಗಳ ಒಟ್ಟು ಆದಾಯ 67,000 ಕೋಟಿ ರೂ. ಆಗಿದೆ.

ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಪ್ರಕರಣದಲ್ಲಿ 18,000 ಕೋಟಿ ರೂ.ಗಳನ್ನು ಬ್ಯಾಂಕ್‌ಗಳಿಗೆ ಹಿಂತಿರುಗಿಸಲಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇಂದು (ಬುಧವಾರ) ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ. ಪಿಎಂಎಲ್‌ ಕಾಯ್ದೆಯ ಅಡಿಯಲ್ಲಿ ಅಪರಾಧದ ಹುಡುಕಾಟ, ವಶಪಡಿಸಿಕೊಳ್ಳುವಿಕೆ, ತನಿಖೆ ಮತ್ತು ಲಗತ್ತಿಸಲು ಜಾರಿ ನಿರ್ದೇಶನಾಲಯಕ್ಕೆ ಲಭ್ಯವಿರುವ ವ್ಯಾಪಕ ಅಧಿಕಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿದೆ.

ಇಲ್ಲಿಯವರೆಗೆ ಜಾರಿ ನಿರ್ದೇಶನಾಲಯವು 4,700 ಪ್ರಕರಣಗಳನ್ನು ತನಿಖೆ ನಡೆಸುತ್ತಿದೆ ಮತ್ತು ಕಳೆದ 5 ವರ್ಷಗಳಲ್ಲಿ ಪ್ರತಿ ವರ್ಷ ತನಿಖೆಗೆ ತೆಗೆದುಕೊಂಡ ಪ್ರಕರಣಗಳ ಸಂಖ್ಯೆಯು 2015-16ರಲ್ಲಿ 111 ಪ್ರಕರಣಗಳಿಂದ 2020-21ರಲ್ಲಿ 981ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ಕಳೆದ ಐದು ವರ್ಷಗಳಲ್ಲಿ (2016-17 ರಿಂದ 2020-21), ಪೊಲೀಸರು ಮತ್ತು ಇತರ ಸಂಸ್ಥೆಗಳಿಂದ ಪೂರ್ವಭಾವಿ ಅಪರಾಧಗಳಿಗಾಗಿ ಅಂದಾಜು 33 ಲಕ್ಷ ಎಫ್‌ಐಆರ್‌ಗಳನ್ನು ದಾಖಲಿಸಿದ್ದು, ಪಿಎಂಎಲ್‌ಎ ಅಡಿಯಲ್ಲಿ ಕೇವಲ 2,086 ಪ್ರಕರಣಗಳನ್ನು ತನಿಖೆಗೆ ತೆಗೆದುಕೊಳ್ಳಲಾಗಿದೆ.

ಕಳೆದ ಕೆಲವು ವಾರಗಳಲ್ಲಿ, ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹಟಗಿ, ಸಿದ್ಧಾರ್ಥ್ ಲೂಥ್ರಾ, ಅಮಿತ್ ದೇಸಾಯಿ ಮತ್ತು ಇತರರು ಸೇರಿದಂತೆ ಹಿರಿಯ ವಕೀಲರು, ಪಿಎಂಎಲ್‌ಎ ನಿಬಂಧನೆಗಳ ದುರುಪಯೋಗದ ಸಾಧ್ಯತೆಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಕೆಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: ಕೋವಿಡ್​​ನಿಂದಾಗಿ ಮನೆ ಬಿಡಲು ಸಾಧ್ಯವಾಗ್ತಿಲ್ಲ ಎಂದು ಸಬೂಬು ಹೇಳಿಕೊಂಡು ಬಂದಿದ್ದ ವಿಜಯ್ ಮಲ್ಯ ಇನ್ನು ಲಂಡನ್​ ಮನೆ ಬಿಡಲೇಬೇಕು!

Vijay Mallya: ವಿಜಯ್ ಮಲ್ಯ ದಿವಾಳಿ ಎಂದ ಬ್ರಿಟನ್ ಕೋರ್ಟ್

Published On - 6:27 pm, Wed, 23 February 22