Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯೊಳಗೆ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ ಮಂಜೂರು, ಇದು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ?

ಕಾಂಗ್ರೆಸ್​ನ ಆಪರೇಷನ್​ ಹಸ್ತ ಬಿರುಗಾಳಿ ಮಧ್ಯೆ ಶಾಸಕ ಎಸ್​ಟಿ ಸೋಮಶೇಖರ್​ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು. ಭೇಟಿಯಾಗಿ 24 ಗಂಟೆ ಕಳೆದಿಲ್ಲ ಆಗಲೇ ಸೋಮಶೇಖರ್​ಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸೋಮಶೇಖರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸದ್ದು ಗದ್ದಲ ಮಧ್ಯೆ ಈ ಬಂಪರ್​ ಅನುದಾನ ಮಂಜೂರು ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

24 ಗಂಟೆಯೊಳಗೆ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ ಮಂಜೂರು, ಇದು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ?
ಎಸ್​ಟಿ ಸೋಮಶೇಖರ್, ಸಿದ್ದರಾಮಯ್ಯ
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Aug 22, 2023 | 11:05 AM

ಬೆಂಗಳೂರು, (ಆಗಸ್ಟ್ 22): ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್​ (ST Somashekhar) ಬಿಜೆಪಿ ತೊರೆದು ವಾಪಸ್​ ಕಾಂಗ್ರೆಸ್ (Congress) ಸೇರುತ್ತಾರೆ ಎನ್ನುವ ಸದ್ದು ಗದ್ದಲ ಜೋರಾಗಿದೆ. ಕಳೆದ ನಾಲ್ಕೈದು ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರಪೂರ ಅನುದಾನ ನೀಡಲಾಗಿದೆ.  ದಾಸರಹಳ್ಳಿ, ಯಲಹಂಕ, ಬೆಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಕಡಿಮೆ ಅನುದಾನ ನೀಡಲಾಗಿದೆ. ಆದ್ರೆ, ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ರಪೂರ ಅನುದಾನ ಬಿಡುಗಡೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಕಾಂಗ್ರೆಸ್ ಸೇರ್ಪಡೆ ಚರ್ಚೆ ಬೆನ್ನಲ್ಲೇ ಸೋಮಶೇಖರ್ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮಂಜೂರು ಮಾಡಿರುವುದು ಭಾರೀ ಚರ್ಚೆಗೆ ಹಾಗೂ ಕುತೂಹಲ ಮೂಡಿಸಿದೆ. ಅಲ್ಲದೇ ಅನುದಾನ ನಿಡುವ ಮೂಲಕ ಅವರನ್ನು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬಿಜೆಪಿ ಶಾಸಕ S​.T.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಒಟ್ಟು 7 ಕೋಟಿ 63 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಾಗಿ 7.63 ಕೋಟಿ ಅನುದಾನ ನೀಡಲಾಗಿದೆ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ 1 ಕೋಟಿ 63 ಲಕ್ಷ ರೂ. ಮೀಸಲಿಡಲಾಗಿದೆ. ಹೊಸದಾಗಿ ಬೋರ್​ವೆಲ್ ಕೊರೆಸಲು 4 ಕೋಟಿ ರೂಪಾಯಿ ಮೀಸಲು ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ.

ಇದನ್ನೂ ಓದಿ: ಆಪರೇಷನ್ ಹಸ್ತ​ ಸದ್ದು-ಗದ್ದಲದ ಮಧ್ಯೆ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್

ಸೋಮಶೇಖರ್​ ಕ್ಷೇತ್ರಕ್ಕೆ ಡಿಸಿಎಂ ಭೇಟಿ

ಇನ್ನು ಎಸ್​ಟಿ ಸೋಮಶೇಖರ್ ಅವರನ್ನು ಕಾಂಗ್ರೆಸ್​ಗೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ಇದೀಗ ಅನುದಾನ ನೀಡಿದಲ್ಲದೇ ಖುದ್ದು ಡಿಕೆ ಶಿವಕುಮಾರ್ ಅವರು ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಹೌದು…ಇದೇ ಆಗಸ್ಟ್​ 26ರಂದು ಯಶವಂತಪುರ ಕ್ಷೇತ್ರಕ್ಕೆ ಡಿಸಿಎಂ ಡಿಕೆಶಿ ಭೇಟಿ ನೀಡಲಿದ್ದು, ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದ ಸೋಮಶೇಖರ್​

ಯಶವಂತಪುರ ಕ್ಷೇತ್ರದಲ್ಲಿ ಕೆಲ ಮೂಲ ಬಿಜೆಪಿಗರ ನಡೆಯಿಂದ ಬೇಸತ್ತು ಅಸಮಾಧಾನಗೊಂಡಿರುವ ಶಾಸಕ ಎಸ್​ಟಿ ಸೋಮಶೇಖರ್​ ನಿನ್ನೆ ಅಷ್ಟೇ (ಆಗಸ್ಟ್ 21) ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು. ಬೆಂಗಳೂರಿನಲ್ಲಿ ಸಿಎಂ ಅಧಿಕೃತ ‌ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ್ದರು. ಈ ವೇಳೆ ತಮ್ಮ ಕ್ಷೇತ್ರದ ಕಾರ್ಯಗಳ ಬಗ್ಗೆ ಒಟ್ಟು ಎರಡು ಮನವಿ ಪತ್ರ ಸಲ್ಲಿಸಿದ್ದರು. ಭೇಟಿಯಾದ 24 ಗಂಟೆಗಳಲ್ಲೇ ಸೋಮಶೇಖರ್​ ಕ್ಷೇತ್ರದಕ್ಕೆ ಅನುದಾನ ಹರಿದುಬಂದಿದ್ದು, ಅಚ್ಚರಿಕೆ ಕಾರಣವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು