AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಗಂಟೆಯೊಳಗೆ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ ಮಂಜೂರು, ಇದು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ?

ಕಾಂಗ್ರೆಸ್​ನ ಆಪರೇಷನ್​ ಹಸ್ತ ಬಿರುಗಾಳಿ ಮಧ್ಯೆ ಶಾಸಕ ಎಸ್​ಟಿ ಸೋಮಶೇಖರ್​ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು. ಭೇಟಿಯಾಗಿ 24 ಗಂಟೆ ಕಳೆದಿಲ್ಲ ಆಗಲೇ ಸೋಮಶೇಖರ್​ಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸೋಮಶೇಖರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರುತ್ತಾರೆ ಎನ್ನುವ ಸದ್ದು ಗದ್ದಲ ಮಧ್ಯೆ ಈ ಬಂಪರ್​ ಅನುದಾನ ಮಂಜೂರು ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

24 ಗಂಟೆಯೊಳಗೆ ಬಿಜೆಪಿ ಶಾಸಕ ಎಸ್​ಟಿ ಸೋಮಶೇಖರ್​ ಕ್ಷೇತ್ರಕ್ಕೆ ಭರ್ಜರಿ ಅನುದಾನ ಮಂಜೂರು, ಇದು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ?
ಎಸ್​ಟಿ ಸೋಮಶೇಖರ್, ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Edited By: |

Updated on: Aug 22, 2023 | 11:05 AM

Share

ಬೆಂಗಳೂರು, (ಆಗಸ್ಟ್ 22): ಯಶವಂತಪುರ ಶಾಸಕ ಎಸ್​ಟಿ ಸೋಮಶೇಖರ್​ (ST Somashekhar) ಬಿಜೆಪಿ ತೊರೆದು ವಾಪಸ್​ ಕಾಂಗ್ರೆಸ್ (Congress) ಸೇರುತ್ತಾರೆ ಎನ್ನುವ ಸದ್ದು ಗದ್ದಲ ಜೋರಾಗಿದೆ. ಕಳೆದ ನಾಲ್ಕೈದು ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇದರ ಮಧ್ಯೆ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಭರಪೂರ ಅನುದಾನ ನೀಡಲಾಗಿದೆ.  ದಾಸರಹಳ್ಳಿ, ಯಲಹಂಕ, ಬೆಂಗಳೂರು ದಕ್ಷಿಣ ಕ್ಷೇತ್ರಗಳಿಗೆ ಕಡಿಮೆ ಅನುದಾನ ನೀಡಲಾಗಿದೆ. ಆದ್ರೆ, ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ರಪೂರ ಅನುದಾನ ಬಿಡುಗಡೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಕಾಂಗ್ರೆಸ್ ಸೇರ್ಪಡೆ ಚರ್ಚೆ ಬೆನ್ನಲ್ಲೇ ಸೋಮಶೇಖರ್ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮಂಜೂರು ಮಾಡಿರುವುದು ಭಾರೀ ಚರ್ಚೆಗೆ ಹಾಗೂ ಕುತೂಹಲ ಮೂಡಿಸಿದೆ. ಅಲ್ಲದೇ ಅನುದಾನ ನಿಡುವ ಮೂಲಕ ಅವರನ್ನು ಕಾಂಗ್ರೆಸ್​ಗೆ ಸೆಳೆಯುವ ತಂತ್ರವೇ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಬಿಜೆಪಿ ಶಾಸಕ S​.T.ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ಕ್ಷೇತ್ರಕ್ಕೆ ಬಿಬಿಎಂಪಿಯಿಂದ ಒಟ್ಟು 7 ಕೋಟಿ 63 ಲಕ್ಷ ರೂ. ಅನುದಾನ ಮಂಜೂರು ಮಾಡಿದೆ. ಹೇರೋಹಳ್ಳಿ ಹಾಗೂ ಕೆಂಗೇರಿ ಭಾಗಕ್ಕೆ ಸೇರಿದಂತೆ ಕುಡಿಯುವ ನೀರಿನ ಯೋಜನೆಗಾಗಿ 7.63 ಕೋಟಿ ಅನುದಾನ ನೀಡಲಾಗಿದೆ. ನೀರು ಪೂರೈಸುವ ಟ್ಯಾಂಕರ್‌ಗಳಿಗೆ 1 ಕೋಟಿ 63 ಲಕ್ಷ ರೂ. ಮೀಸಲಿಡಲಾಗಿದೆ. ಹೊಸದಾಗಿ ಬೋರ್​ವೆಲ್ ಕೊರೆಸಲು 4 ಕೋಟಿ ರೂಪಾಯಿ ಮೀಸಲು ಹಾಗೂ ನಿರ್ವಹಣೆ ಮಾಡಲು 2 ಕೋಟಿ ರೂಪಾಯಿ ಅನುದಾನ ಮೀಸಲು ಇಡಲಾಗಿದೆ.

ಇದನ್ನೂ ಓದಿ: ಆಪರೇಷನ್ ಹಸ್ತ​ ಸದ್ದು-ಗದ್ದಲದ ಮಧ್ಯೆ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್

ಸೋಮಶೇಖರ್​ ಕ್ಷೇತ್ರಕ್ಕೆ ಡಿಸಿಎಂ ಭೇಟಿ

ಇನ್ನು ಎಸ್​ಟಿ ಸೋಮಶೇಖರ್ ಅವರನ್ನು ಕಾಂಗ್ರೆಸ್​ಗೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಇದರ ಮಧ್ಯೆ ಇದೀಗ ಅನುದಾನ ನೀಡಿದಲ್ಲದೇ ಖುದ್ದು ಡಿಕೆ ಶಿವಕುಮಾರ್ ಅವರು ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಲು ಮುಂದಾಗಿದ್ದಾರೆ. ಹೌದು…ಇದೇ ಆಗಸ್ಟ್​ 26ರಂದು ಯಶವಂತಪುರ ಕ್ಷೇತ್ರಕ್ಕೆ ಡಿಸಿಎಂ ಡಿಕೆಶಿ ಭೇಟಿ ನೀಡಲಿದ್ದು, ಕ್ಷೇತ್ರದಲ್ಲಿ ನೀರಿನ ಸಮಸ್ಯೆ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದ ಸೋಮಶೇಖರ್​

ಯಶವಂತಪುರ ಕ್ಷೇತ್ರದಲ್ಲಿ ಕೆಲ ಮೂಲ ಬಿಜೆಪಿಗರ ನಡೆಯಿಂದ ಬೇಸತ್ತು ಅಸಮಾಧಾನಗೊಂಡಿರುವ ಶಾಸಕ ಎಸ್​ಟಿ ಸೋಮಶೇಖರ್​ ನಿನ್ನೆ ಅಷ್ಟೇ (ಆಗಸ್ಟ್ 21) ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದರು. ಬೆಂಗಳೂರಿನಲ್ಲಿ ಸಿಎಂ ಅಧಿಕೃತ ‌ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಯಶವಂತಪುರ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ್ದರು. ಈ ವೇಳೆ ತಮ್ಮ ಕ್ಷೇತ್ರದ ಕಾರ್ಯಗಳ ಬಗ್ಗೆ ಒಟ್ಟು ಎರಡು ಮನವಿ ಪತ್ರ ಸಲ್ಲಿಸಿದ್ದರು. ಭೇಟಿಯಾದ 24 ಗಂಟೆಗಳಲ್ಲೇ ಸೋಮಶೇಖರ್​ ಕ್ಷೇತ್ರದಕ್ಕೆ ಅನುದಾನ ಹರಿದುಬಂದಿದ್ದು, ಅಚ್ಚರಿಕೆ ಕಾರಣವಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ