AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದುತ್ವದ ಹೆಸರಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದ ಮೆಹಬೂಬಾ ಮುಫ್ತಿ; ಬಿಜೆಪಿ, ಆರ್​ಎಸ್​ಎಸ್​ ವಿರುದ್ಧ ಟೀಕೆ

ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಿಸಿರುವ ಆರ್​ಎಸ್​ಎಸ್​ಗಳು ಹಿಂದುತ್ವವನ್ನು ಎತ್ತಿಹಿಡಿಯುತ್ತಿವೆ ಎಂದು ಜನರು ಭಾವಿಸಿದ್ದಾರೆ. ಆದರೆ ವಾಸ್ತವದಲ್ಲಿ ಇವೆರಡೂ ಕೂಡ ಹಿಂದುತ್ವವನ್ನು ಪ್ರಚಾರ ಮಾಡುತ್ತಿಲ್ಲ ಎಂದು ಮುಫ್ತಿ ಹೇಳಿದ್ದಾರೆ.

ಹಿಂದುತ್ವದ ಹೆಸರಲ್ಲಿ ಮತ್ತೊಂದು ವಿವಾದ ಸೃಷ್ಟಿಸಿದ ಮೆಹಬೂಬಾ ಮುಫ್ತಿ; ಬಿಜೆಪಿ, ಆರ್​ಎಸ್​ಎಸ್​ ವಿರುದ್ಧ ಟೀಕೆ
ಮೆಹಬೂಬಾ ಮುಫ್ತಿ
TV9 Web
| Edited By: |

Updated on: Nov 13, 2021 | 4:17 PM

Share

ಕಾಂಗ್ರೆಸ್​ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್​ ತಮ್ಮ ಸನ್​ರೈಸ್​ ಓವರ್ ಅಯೋಧ್ಯಾ ಎಂಬ ಪುಸ್ತಕದಲ್ಲಿ ಹಿಂದುತ್ವವನ್ನು ಉಗ್ರಸಂಘಟನೆಗಳಾದ ಐಸಿಸ್​ ಮತ್ತು ಬೋಕೊ ಹರಾಮ್​ಗೆ ಹೋಲಿಸುವ ಮೂಲಕ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಿಜೆಪಿ ಮತ್ತು ಅದರ ಮಾರ್ಗದರ್ಶಕವಾಗಿರುವ ಆರ್​ಎಸ್​ಎಸ್​ ಸಂಘಟನೆಗಳು ಹಿಂದುತ್ವ ಮತ್ತು ಹಿಂದೂವಾದವನ್ನು ಅಪಹರಿಸಿವೆ ಎಂದು ಹೇಳಿದ್ದಾರೆ.

ಬಿಜೆಪಿ ತಾನು ಎಲ್ಲರನ್ನೂ ಒಳಗೊಳ್ಳುವುದಾಗಿ ಹೇಳಿಕೊಳ್ಳುತ್ತದೆ. ಆದರೆ ಈ ಪಕ್ಷ ಸನಾತನ ಧರ್ಮಕ್ಕೆ ವಿರೋಧವಾಗಿದೆ.  ಬಿಜೆಪಿ ಮತ್ತು ಅದರ ಸೈದ್ಧಾಂತಿಕ ಮಾರ್ಗದರ್ಶಕ ಎನ್ನಿಸಿರುವ ಆರ್​ಎಸ್​ಎಸ್​ಗಳು ಹಿಂದುತ್ವವನ್ನು ಎತ್ತಿಹಿಡಿಯುತ್ತಿವೆ ಎಂದು ಜನರು ಭಾವಿಸಿದ್ದಾರೆ. ಆದರೆ ವಾಸ್ತವದಲ್ಲಿ ಇವೆರಡೂ ಕೂಡ ಹಿಂದುತ್ವವನ್ನು ಪ್ರಚಾರ ಮಾಡುತ್ತಿಲ್ಲ ಎಂದು ಮೆಹಬೂಬಾ ಮುಫ್ತಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇಷ್ಟೇ ಅಲ್ಲ, ಸನಾತನ ಧರ್ಮ ಎಂದಿಗೂ ಕೋಮುವಾದವನ್ನು ಸಾರುವುದಿಲ್ಲ. ಆದರೆ ಬಿಜೆಪಿ ಮತ್ತು ಆರ್​ಎಸ್​ಎಸ್​ ಕೋಮುವಾದದ ಕೊಳ್ಳಿ ಇಟ್ಟು ಜನರು ಕಚ್ಚಾಡುವಂತೆ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

ಕೋಮುವಾದಿ ಪಕ್ಷಗಳನ್ನು ಖಂಡಿತವಾಗಿಯೂ ಐಸಿಸ್​​ನೊಂದಿಗೆ ಹೋಲಿಸಬಹುದು. ಯಾಕೆಂದರೆ ಅವರೆಲ್ಲ ಧರ್ಮದ ಹೆಸರಿನಲ್ಲಿ ಹಿಂದೂ-ಮುಸ್ಲಿಮರು ಜಗಳವಾಡುವಂತೆ ಮಾಡುವವರು. ಐಸಿಸ್​ ಧರ್ಮದ ಹೆಸರಿನಲ್ಲಿ ಜನರನ್ನು ಕೊಲ್ಲುತ್ತದೆ. ಅದರಂತೆ ನಡೆದುಕೊಳ್ಳುವ ಯಾವುದೇ ಪಕ್ಷ, ಸಂಘಟನೆಗಳೂ ಕೂಡ ಐಸಿಸ್​ನಂತೆಯೇ ಎನ್ನುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ನಿರಂತರವಾಗಿ ಚಳಿ ಹಾಗೂ ಮಳೆ; ಡೆಂಗ್ಯೂ, ಚಿಕನ್ ಗುನ್ಯಾ ಕೇಸ್ ಹೆಚ್ಚಳ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌