AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​

ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​
ಆರ್​ಎಸ್​ಎಸ್​ ಸೋಷಿಯಲ್ ಮೀಡಿಯಾ ಪೇಜ್​ನಲ್ಲಿ ರಾಷ್ಟ್ರ ಧ್ವಜ
TV9 Web
| Edited By: |

Updated on: Aug 13, 2022 | 11:09 AM

Share

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆಗೆ ಸ್ಪಂದಿಸಿದ ಆರ್‌ಎಸ್‌ಎಸ್ (RSS) ಶುಕ್ರವಾರ ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜವನ್ನು ಹಾಕಿಕೊಂಡಿದೆ. 52 ವರ್ಷಗಳಿಂದ ಭಾರತದ ರಾಷ್ಟ್ರಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಪ್ರಧಾನಿ ಮೋದಿಯವರ ಕರೆಗೆ ಬದ್ಧವಾಗಿಲ್ಲ ಎಂದು ಕಾಂಗ್ರೆಸ್ ಆರ್‌ಎಸ್‌ಎಸ್ ಮೇಲೆ ವಾಗ್ದಾಳಿ ನಡೆಸಿತ್ತು. ಅದಾದ ನಂತರ ಆರ್‌ಎಸ್‌ಎಸ್ ತನ್ನ ಸಾಮಾಜಿಕ ಮಾಧ್ಯಮ ಫೋಟೋಗಳನ್ನು ಬದಲಾಯಿಸಿದೆ. ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು ‘ಹರ್ ಘರ್ ತಿರಂಗ’ (Har Ghar Tiranga) ಘೋಷಣೆಗಳನ್ನು ಕೂಗುತ್ತಿರುವವರು 52 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ಹಾರಿಸಲು ನಿರಾಕರಿಸಿದ ‘ದೇಶ ವಿರೋಧಿ’ ಸಂಘಟನೆಯಿಂದ ಬಂದವರು ಎಂದು ಹೇಳಿದ್ದರು.

ಕಾಂಗ್ರೆಸ್‌ನ ದಾಳಿಯನ್ನು ಟೀಕಿಸಿದ ಆರ್‌ಎಸ್‌ಎಸ್, ರಾಹುಲ್ ಗಾಂಧಿ ಈಗಾಗಲೇ ಹರ್ ಘರ್ ತಿರಂಗ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮಗಳಿಗೆ ಬೆಂಬಲ ನೀಡಿದ್ದಾರೆ, ಸಾಮಾಜಿಕ ಮಾಧ್ಯಮದ ಫೋಟೋಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ಬದಲಾಯಿಸಲಾಗಿದ್ದು, ಕಾರ್ಯಕರ್ತರು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ಆರ್​ಎಸ್​ಎಸ್​ ಸಂಘಟನೆಯ ಪ್ರಚಾರ ವಿಭಾಗವು ಹೇಳಿದೆ. ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Azadi Ka Amrit Mahotsav: 10 ದಿನಗಳಲ್ಲಿ 1 ಕೋಟಿಗೂ ಅಧಿಕ ರಾಷ್ಟ್ರಧ್ವಜವನ್ನು ಮಾರಾಟ ಮಾಡಿದ ಅಂಚೆ ಇಲಾಖೆ

ಪ್ರಧಾನಿ ಮೋದಿಯವರ ಮನವಿಯ ನಂತರ ಎಲ್ಲಾ ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ವಿಭಿನ್ನ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಬೀಸುತ್ತಿರುವ ಫೋಟೋವನ್ನು ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದ್ದು, ರಾಹುಲ್ ಗಾಂಧಿಯವ ಪಕ್ಷದ ಸದಸ್ಯರು ತಮ್ಮ ಫೋಟೋಗಳನ್ನು ತ್ರಿವರ್ಣ ಧ್ವಜದೊಂದಿಗೆ ಹಾಕಿಕೊಳ್ಳಲು ಕೂಡ ನಾಯಕರ ಅನುಮತಿ ಪಡೆಯಬೇಕು ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ