AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​

ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜ ಹಾಕಿಕೊಂಡ ಆರ್​ಎಸ್​ಎಸ್​
ಆರ್​ಎಸ್​ಎಸ್​ ಸೋಷಿಯಲ್ ಮೀಡಿಯಾ ಪೇಜ್​ನಲ್ಲಿ ರಾಷ್ಟ್ರ ಧ್ವಜ
TV9 Web
| Edited By: |

Updated on: Aug 13, 2022 | 11:09 AM

Share

ನವದೆಹಲಿ: ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಕರೆಗೆ ಸ್ಪಂದಿಸಿದ ಆರ್‌ಎಸ್‌ಎಸ್ (RSS) ಶುಕ್ರವಾರ ತನ್ನ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಫೋಟೋಗೆ ರಾಷ್ಟ್ರಧ್ವಜವನ್ನು ಹಾಕಿಕೊಂಡಿದೆ. 52 ವರ್ಷಗಳಿಂದ ಭಾರತದ ರಾಷ್ಟ್ರಧ್ವಜವನ್ನು ವಿರೋಧಿಸಿದ್ದ ಆರ್​ಎಸ್​ಎಸ್​ ಪ್ರಧಾನಿ ಮೋದಿಯವರ ಕರೆಗೆ ಬದ್ಧವಾಗಿಲ್ಲ ಎಂದು ಕಾಂಗ್ರೆಸ್ ಆರ್‌ಎಸ್‌ಎಸ್ ಮೇಲೆ ವಾಗ್ದಾಳಿ ನಡೆಸಿತ್ತು. ಅದಾದ ನಂತರ ಆರ್‌ಎಸ್‌ಎಸ್ ತನ್ನ ಸಾಮಾಜಿಕ ಮಾಧ್ಯಮ ಫೋಟೋಗಳನ್ನು ಬದಲಾಯಿಸಿದೆ. ಆರೆಸ್ಸೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂದು ‘ಹರ್ ಘರ್ ತಿರಂಗ’ (Har Ghar Tiranga) ಘೋಷಣೆಗಳನ್ನು ಕೂಗುತ್ತಿರುವವರು 52 ವರ್ಷಗಳಿಂದ ತ್ರಿವರ್ಣ ಧ್ವಜವನ್ನು ಹಾರಿಸಲು ನಿರಾಕರಿಸಿದ ‘ದೇಶ ವಿರೋಧಿ’ ಸಂಘಟನೆಯಿಂದ ಬಂದವರು ಎಂದು ಹೇಳಿದ್ದರು.

ಕಾಂಗ್ರೆಸ್‌ನ ದಾಳಿಯನ್ನು ಟೀಕಿಸಿದ ಆರ್‌ಎಸ್‌ಎಸ್, ರಾಹುಲ್ ಗಾಂಧಿ ಈಗಾಗಲೇ ಹರ್ ಘರ್ ತಿರಂಗ ಮತ್ತು ಆಜಾದಿ ಕಾ ಅಮೃತ್ ಮಹೋತ್ಸವ ಕಾರ್ಯಕ್ರಮಗಳಿಗೆ ಬೆಂಬಲ ನೀಡಿದ್ದಾರೆ, ಸಾಮಾಜಿಕ ಮಾಧ್ಯಮದ ಫೋಟೋಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಹೇಳಿದೆ. ಶುಕ್ರವಾರ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ಬದಲಾಯಿಸಲಾಗಿದ್ದು, ಕಾರ್ಯಕರ್ತರು ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ ಎಂದು ಆರ್​ಎಸ್​ಎಸ್​ ಸಂಘಟನೆಯ ಪ್ರಚಾರ ವಿಭಾಗವು ಹೇಳಿದೆ. ಮೋಹನ್ ಭಾಗವತ್ ಮತ್ತು ಇತರ ಆರ್‌ಎಸ್‌ಎಸ್ ನಾಯಕರು ರಾಷ್ಟ್ರ ಧ್ವಜಾರೋಹಣ ಮಾಡುತ್ತಿರುವ ವಿಡಿಯೋಗಳನ್ನು ಆರ್‌ಎಸ್‌ಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ.

ಇದನ್ನೂ ಓದಿ: Azadi Ka Amrit Mahotsav: 10 ದಿನಗಳಲ್ಲಿ 1 ಕೋಟಿಗೂ ಅಧಿಕ ರಾಷ್ಟ್ರಧ್ವಜವನ್ನು ಮಾರಾಟ ಮಾಡಿದ ಅಂಚೆ ಇಲಾಖೆ

ಪ್ರಧಾನಿ ಮೋದಿಯವರ ಮನವಿಯ ನಂತರ ಎಲ್ಲಾ ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮದ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ವಿಭಿನ್ನ ಫೋಟೋಗಳನ್ನು ಹಾಕಿಕೊಂಡಿದ್ದಾರೆ. ಪಂಡಿತ್ ಜವಾಹರಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಬೀಸುತ್ತಿರುವ ಫೋಟೋವನ್ನು ಕಾಂಗ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದ್ದು, ರಾಹುಲ್ ಗಾಂಧಿಯವ ಪಕ್ಷದ ಸದಸ್ಯರು ತಮ್ಮ ಫೋಟೋಗಳನ್ನು ತ್ರಿವರ್ಣ ಧ್ವಜದೊಂದಿಗೆ ಹಾಕಿಕೊಳ್ಳಲು ಕೂಡ ನಾಯಕರ ಅನುಮತಿ ಪಡೆಯಬೇಕು ಎಂದು ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ