AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

Mohan Bhagwat: ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಬೇಕು ಎಂಬುದು ಆರ್​ಎಸ್​ಎಸ್​ನ ಬಹುದಿನಗಳ ಬೇಡಿಕೆಯಾಗಿತ್ತು. ಅದರಂತೆ 2019ರಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದನ್ನು ರದ್ದುಗೊಳಿಸಿದೆ.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ
ಮೋಹನ್ ಭಾಗವತ್​
TV9 Web
| Edited By: |

Updated on: Sep 30, 2021 | 9:41 AM

Share

ಜಮ್ಮು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್​ ಭಾಗವತ್ (RSS chief Mohan Bhagwat)​ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಜಮ್ಮು ಪ್ರವಾಸ ಹಮ್ಮಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ವಿಶೇಷ ಸ್ಥಾನಮಾನ (ಆರ್ಟಿಕಲ್​ 370 ಮತ್ತು 35 ಎ) ನ್ನು ರದ್ದುಗೊಳಿಸಿದ ಮೇಲೆ ಇದೇ ಮೊದಲ ಬಾರಿಗೆ ಮೋಹನ್​ ಭಾಗವತ್​ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಅಂದರೆ 2016ರಲ್ಲಿ ಭೇಟಿ ನೀಡಿದ ಬಳಿಕ ಅವರು ಮತ್ತೆ ಅಲ್ಲಿಗೆ ಹೋಗಿರಲಿಲ್ಲ. ಈ ನಾಲ್ಕು ದಿನಗಳ ಪ್ರವಾಸದಲ್ಲಿ ಮೋಹನ್​ ಭಾಗವತ್​ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  

ಅಕ್ಟೋಬರ್​ 2ರಂದು ಭಾಗವತ್​ ಜಮ್ಮುವಿನ ಜೋರಾವರ್​ ಸಿಂಗ್​ ಸಭಾಂಗಣದಲ್ಲಿ ಸೆಮಿನಾರ್​ನಲ್ಲಿ ಮಾತನಾಡುವರು. ನಂತರ ಜಮ್ಮು-ಕಾಶ್ಮೀರದಲ್ಲಿ, ಶಿಕ್ಷಣ, ಸಾರ್ವಜನಿಕ ಜಾಗೃತಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪರಿಸರ ವಿಜ್ಞಾನ, ಜಲ ಸಂರಕ್ಷಣೆ, ಸಾಮಾಜಿಕ ಸಮಾನತೆ ಸೇರಿ ಹಲವು ಕ್ಷೇತ್ರಗಳಲ್ಲಿ ಆರ್​ಎಸ್​ಎಸ್​ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದು, ಅದರ ಪ್ರಗತಿ ಪರಿಶೀಲನೆಯನ್ನು ನಡೆಸಲಿದ್ದಾರೆ.

ಆರ್​ಎಸ್​ಎಸ್​ ಕಾರ್ಯಕರ್ತರನ್ನುದ್ದೇಶಿಸಿ ಮಾತು ಅಕ್ಟೋಬರ್​ 3ರಂದು ಮೋಹನ್​​ ಭಾಗವತ್​ ಅವರು ಜಮ್ಮವಿನಲ್ಲಿ ಆರ್​ಎಸ್​ಎಸ್​ ಪ್ರಚಾರಕ್​​​ಗಳ ಜತೆಗೆ ಸಭೆ ನಡೆಸಲಿದ್ದು, ಅಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್​ಎಸ್​ಎಸ್​ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನುಬರುವವರ್ಷ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಕೂಡ ಯೋಜನಾಧಿಕಾರಿಗಳೊಂದಿಗೆ ಮೋಹನ್​ ಭಾಗವತ್​ ಚರ್ಚಿಸಲಿದ್ದಾರೆ ಎಂದೂ ಹೇಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಬೇಕು ಎಂಬುದು ಆರ್​ಎಸ್​ಎಸ್​ನ ಬಹುದಿನಗಳ ಬೇಡಿಕೆಯಾಗಿತ್ತು. ಅದರಂತೆ 2019ರಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದನ್ನು ರದ್ದುಗೊಳಿಸಿದೆ. ನಂತರ ಜಮ್ಮು-ಕಾಶ್ಮೀರ ಮತ್ತು ಲಡಾಕ್​ನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದೆ. ಈ ನಿರ್ಧಾರವನ್ನು ಅತ್ಯಂತ ಖುಷಿಯಿಂದ ಸ್ವಾಗತಿಸಿದ್ದ ಆರ್​ಎಸ್​ಎಸ್​ ಪ್ರಧಾನಕಾರ್ಯದರ್ಶಿ  ಸುರೇಶ್ ಭಯ್ಯಾಜಿ ಜೋಶಿ, ರಾಜ್ಯದ ಏಕೀಕರಣದ ಕನಸು ಈಗ ಸಾಕಾರಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್