AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ

Mohan Bhagwat: ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಬೇಕು ಎಂಬುದು ಆರ್​ಎಸ್​ಎಸ್​ನ ಬಹುದಿನಗಳ ಬೇಡಿಕೆಯಾಗಿತ್ತು. ಅದರಂತೆ 2019ರಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದನ್ನು ರದ್ದುಗೊಳಿಸಿದೆ.

ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಜಮ್ಮು ಪ್ರವಾಸ ಇಂದಿನಿಂದ; ವಿಶೇಷ ಸ್ಥಾನಮಾನ ರದ್ದು ಬಳಿಕ ಮೊದಲ ಬಾರಿಗೆ ಭೇಟಿ
ಮೋಹನ್ ಭಾಗವತ್​
TV9 Web
| Edited By: |

Updated on: Sep 30, 2021 | 9:41 AM

Share

ಜಮ್ಮು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS)ದ ಮುಖ್ಯಸ್ಥ ಮೋಹನ್​ ಭಾಗವತ್ (RSS chief Mohan Bhagwat)​ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ಜಮ್ಮು ಪ್ರವಾಸ ಹಮ್ಮಿಕೊಂಡಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ 2019ರಲ್ಲಿ ವಿಶೇಷ ಸ್ಥಾನಮಾನ (ಆರ್ಟಿಕಲ್​ 370 ಮತ್ತು 35 ಎ) ನ್ನು ರದ್ದುಗೊಳಿಸಿದ ಮೇಲೆ ಇದೇ ಮೊದಲ ಬಾರಿಗೆ ಮೋಹನ್​ ಭಾಗವತ್​ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಅಂದರೆ 2016ರಲ್ಲಿ ಭೇಟಿ ನೀಡಿದ ಬಳಿಕ ಅವರು ಮತ್ತೆ ಅಲ್ಲಿಗೆ ಹೋಗಿರಲಿಲ್ಲ. ಈ ನಾಲ್ಕು ದಿನಗಳ ಪ್ರವಾಸದಲ್ಲಿ ಮೋಹನ್​ ಭಾಗವತ್​ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.  

ಅಕ್ಟೋಬರ್​ 2ರಂದು ಭಾಗವತ್​ ಜಮ್ಮುವಿನ ಜೋರಾವರ್​ ಸಿಂಗ್​ ಸಭಾಂಗಣದಲ್ಲಿ ಸೆಮಿನಾರ್​ನಲ್ಲಿ ಮಾತನಾಡುವರು. ನಂತರ ಜಮ್ಮು-ಕಾಶ್ಮೀರದಲ್ಲಿ, ಶಿಕ್ಷಣ, ಸಾರ್ವಜನಿಕ ಜಾಗೃತಿ, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪರಿಸರ ವಿಜ್ಞಾನ, ಜಲ ಸಂರಕ್ಷಣೆ, ಸಾಮಾಜಿಕ ಸಮಾನತೆ ಸೇರಿ ಹಲವು ಕ್ಷೇತ್ರಗಳಲ್ಲಿ ಆರ್​ಎಸ್​ಎಸ್​ ಅಭಿವೃದ್ಧಿ ಕಾರ್ಯಗಳನ್ನು ನಡೆಸುತ್ತಿದ್ದು, ಅದರ ಪ್ರಗತಿ ಪರಿಶೀಲನೆಯನ್ನು ನಡೆಸಲಿದ್ದಾರೆ.

ಆರ್​ಎಸ್​ಎಸ್​ ಕಾರ್ಯಕರ್ತರನ್ನುದ್ದೇಶಿಸಿ ಮಾತು ಅಕ್ಟೋಬರ್​ 3ರಂದು ಮೋಹನ್​​ ಭಾಗವತ್​ ಅವರು ಜಮ್ಮವಿನಲ್ಲಿ ಆರ್​ಎಸ್​ಎಸ್​ ಪ್ರಚಾರಕ್​​​ಗಳ ಜತೆಗೆ ಸಭೆ ನಡೆಸಲಿದ್ದು, ಅಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆರ್​ಎಸ್​ಎಸ್​ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನುಬರುವವರ್ಷ ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಕೂಡ ಯೋಜನಾಧಿಕಾರಿಗಳೊಂದಿಗೆ ಮೋಹನ್​ ಭಾಗವತ್​ ಚರ್ಚಿಸಲಿದ್ದಾರೆ ಎಂದೂ ಹೇಳಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಬೇಕು ಎಂಬುದು ಆರ್​ಎಸ್​ಎಸ್​ನ ಬಹುದಿನಗಳ ಬೇಡಿಕೆಯಾಗಿತ್ತು. ಅದರಂತೆ 2019ರಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅದನ್ನು ರದ್ದುಗೊಳಿಸಿದೆ. ನಂತರ ಜಮ್ಮು-ಕಾಶ್ಮೀರ ಮತ್ತು ಲಡಾಕ್​ನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ರೂಪಿಸಿದೆ. ಈ ನಿರ್ಧಾರವನ್ನು ಅತ್ಯಂತ ಖುಷಿಯಿಂದ ಸ್ವಾಗತಿಸಿದ್ದ ಆರ್​ಎಸ್​ಎಸ್​ ಪ್ರಧಾನಕಾರ್ಯದರ್ಶಿ  ಸುರೇಶ್ ಭಯ್ಯಾಜಿ ಜೋಶಿ, ರಾಜ್ಯದ ಏಕೀಕರಣದ ಕನಸು ಈಗ ಸಾಕಾರಗೊಂಡಿದೆ ಎಂದು ಹೇಳಿದ್ದರು.

ಇದನ್ನೂ ಓದಿ: Shocking Video: ಅಡುಗೆ ಮನೆಯಲ್ಲಿ ಕೆಲಸ ಮಾಡುವಾಗ ಇದ್ದಕ್ಕಿದ್ದಂತೆಯೇ ತಲೆ ಕೂದಲಿಗೆ ಆವರಿಸಿಕೊಂಡ ಬೆಂಕಿ; ಮಹಿಳೆ ಕಂಗಾಲು

ಯಡಿಯೂರಪ್ಪ ಆಪ್ತರಿಗೆ ಆಯಕಟ್ಟಿನ ಸ್ಥಾನಮಾನ: ಮುಖ್ಯಮಂತ್ರಿ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳಾಗಿ ಇಬ್ಬರ ನೇಮಕ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್