AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದರ ನಿಧನಕ್ಕೆ ಆರ್​ಎಸ್​ಎಸ್​ ಸಂತಾಪ

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ(Swami Smaranananda) ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್​) ಸಂತಾಪ ವ್ಯಕ್ತಪಡಿಸಿದೆ. ಸರಸಂಘ ಚಾಲಕ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದರ ನಿಧನಕ್ಕೆ ಆರ್​ಎಸ್​ಎಸ್​ ಸಂತಾಪ
ಸ್ವಾಮಿ ಸ್ಮರಣಾನಂದ
ನಯನಾ ರಾಜೀವ್
|

Updated on: Mar 27, 2024 | 2:03 PM

Share

ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ(Swami Smaranananda) ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್​ಎಸ್​ಎಸ್​) ಸಂತಾಪ ವ್ಯಕ್ತಪಡಿಸಿದೆ. ಸರಸಂಘ ಚಾಲಕ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಬಳಿಕ  ಶ್ರೇಷ್ಠ ಮತ್ತು ಸ್ಫೂರ್ತಿದಾಯಕ ಸಂಪ್ರದಾಯದಲ್ಲಿ ಮಿಷನ್ ಹಾಗೂ ಮಠವನ್ನು ಹೇಗೆ ಮುನ್ನಡೆಸಿದರು ಎಂಬುದನ್ನು ನೆನಪಿಸಿಕೊಂಡರು. ರಾಮಕೃಷ್ಣ ಮಠದ ಮಹತ್ಕಾರ್ಯ ನಿರಂತರವಾಗಿ ಬೆಳೆಯಲಿ ಎಂದು ಹಾರೈಸಿದರು. ಪ್ರಧಾನಿ ಮೋದಿ, ಮಮತಾ ಬ್ಯಾನರ್ಜಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸ್ವಾಮಿ ಸ್ಮರಣಾನಂದರು 1929ರಲ್ಲಿ ತಮಿಳುನಾಡಿನ ತಾಂಜಾವೂರು ಜಿಲ್ಲೆಯ ಅಂಡಮಿ ಗ್ರಾಮದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ತಾಯಿಯನ್ನು ಕಳೆದುಕೊಂಡರು. 1946ರಲ್ಲಿ ಅವರು ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ನಾಸಿಕ್​ನಿಂದ ವಾಣಿಜ್ಯದಲ್ಲಿ ಡಿಪ್ಲೊಮಾ ಮಾಡಿದರು. 1949ರಲ್ಲಿ ಮುಂಬೈಗೆ ಸ್ಥಳಾಂತರಗೊಂಡರು.

ರಾಮಕೃಷ್ಣ ಮತ್ತು ಸ್ವಾಮಿ ವಿವೇಕಾನಂದರ ವಿಚಾರಧಾರೆಯಿಂದ ಪ್ರೇರಿತರಾಗಿ ಮುಂಬೈನ ರಾಮಕೃಷ್ಣ ಮಿಷನ್​ಗೆ ಸೇರಿದರು. 1952ರಲ್ಲಿ ತಮ್ಮ 22ನೇ ವಯಸ್ಸಿನಲ್ಲಿ ಸ್ವಾಮಿಗಳು ಶಂಕರಾನಂದರಿಂದ ಧೀಕ್ಷೆ ಪಡೆದರು. ಸ್ವಾಮಿ ಸ್ಮರಣಾನಂದರು 1956ರಲ್ಲಿ ಬ್ರಹ್ಮಚರ್ಯವನ್ನು ಸ್ವೀಕರಿಸಿದರು.

ಮತ್ತಷ್ಟು ಓದಿ: Swami Smaranananda Demise: ರಾಮಕೃಷ್ಣ ಮಿಷನ್ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ನಿಧನ, ಪ್ರಧಾನಿ ಮೋದಿ ಸಂತಾಪ

1958ರಲ್ಲಿ ಅವರು ಅದ್ವೈತ ಆಶ್ರಮದ ಕೋಲ್ಕತ್ತಾ ಶಾಖೆಯನ್ನು ತಲುಪಿದರು, ಅದ್ವೈತ ಶ್ರಮದ ವಿವಿಧ ಶಾಖೆಗಳಲ್ಲಿ 18 ವರ್ಷಗಳ ಕಾಲ ಕೆಲಸ ಮಾಡಿದರು. ವಿವೇಕಾನಂದರು ಆರಂಭಿಸಿದ್ದ ಪ್ರಬುದ್ಧ ಭಾರತ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿ ಕೆಲವ ವರ್ಷಗಳ ಕಾಲ ಕೆಲಸ ಮಾಡಿದ್ದರು.

ಸುಮಾರು 15 ವರ್ಷಗಳ ಕಾಲ ಕಾಮಕೃಷ್ಣ ಮಿಷನ್ ಶರದಾಪೀಠದ ಕಾರ್ಯದರ್ಶಿಯಾಗಿದ್ದರು. 1983ರಲ್ಲಿ ಅವರು ರಾಮಕೃಷ್ಣ ಮಿಷನ್​ನ ಆಡಳಿತ ಮಂಡಳಿಯ ಸದಸ್ಯರಾದರು. ಅವರು 1991ರಲ್ಲಿ ಚೆನ್ನೈನ ರಾಮಕೃಷ್ಣ ಮಿಷನ್ ಮುಖ್ಯಸ್ಥರಾಗಿ ನೇಮಕಗೊಂಡರು.

ರಾಮಕೃಷ್ಣ ಮಠ ಮತ್ತು ಧರ್ಮ ಪ್ರಚಾರದ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಅವರು ಇಹಲೋಕ ತ್ಯಜಿಸಿರುವ ಸುದ್ದಿ ಕೇಳಿ ರಾಮಕೃಷ್ಣ ಮಠದ ಅಸಂಖ್ಯಾತ ಭಕ್ತರು ತೀವ್ರ ದುಃಖಿತರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ