AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್

RSS Chief Mohan Bhagwat: OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್
ಮೋಹನ್ ಭಾಗವತ್​
TV9 Web
| Edited By: |

Updated on: Oct 11, 2021 | 11:15 AM

Share

ದೇಶದೆಲ್ಲೆಡೆ ಈಗ ಮತಾಂತರದ್ದೇ ಸುದ್ದಿ. ಎಲ್ಲ ಪಕ್ಷಗಳೂ, ನಾಯಕರೂ ಮತಾಂತರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸರದಿ. ಮತಾಂತರದ ಕುರಿತು ಖಾರದ ಮಾತನ್ನಾಡಿರುವ ಮೋಹನ್ ಭಾಗವತ್ ಮಹಿಳೆಯರು ಮದುವೆಯಾಗಲೆಂದೇ ಇತರ ಧರ್ಮಗಳಿಗೆ ಮತಾಂತರಗೊಳ್ಳುವುದು ತಪ್ಪು ಎಂದಿದ್ದಾರೆ. ತಾಯಂದಿರು ಮಕ್ಕಳಿಗೆ ಹಿಂದೂ ಧರ್ಮದ ಪರಂಪರೆ ಮತ್ತು ಉದಾತ್ತತೆಯನ್ನು ಬಾಲ್ಯದಿಂದಲೇ ಕಲಿಸುತ್ತಿಲ್ಲ. ಹೀಗಾಗಿ ಚಿಕ್ಕ ಪುಟ್ಟ ಸ್ವಹಿತದ ಕಾರಣಗಳಿಗಾಗಿ ಮತಾಂತರ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಅವರ ಕುಟುಂಬಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಮತಾಂತರ ಹೇಗೆ ನಡೆಯುತ್ತದೆ? ಎಂದು ಪ್ರಶ್ನಿಸಿರುವ ಅವರು, ಹಿಂದೂ ಹುಡುಗಿಯರು ಮತ್ತು ಹುಡುಗರು ಇತರ ಧರ್ಮವನ್ನು ಏಕೆ ಸ್ವೀಕರಿಸುತ್ತಾರೆ? ಮದುವೆಯೆಂಬ ಸಣ್ಣ ಸ್ವಾರ್ಥಕ್ಕಾಗಿ. ನಾವು ಮಕ್ಕಳಿಗೆ ಮನೆಯಲ್ಲಿ ನಮ್ಮ ಧರ್ಮದ ಮೌಲ್ಯಗಳನ್ನು ಕಲಿಸಬೇಕಾಗಿದೆ. ನಮ್ಮ ಸ್ವಭಾವ, ನಮ್ಮ ಧರ್ಮ ಮತ್ತು ನಮ್ಮ ಪ್ರಾರ್ಥನಾ ಸಂಪ್ರದಾಯಗಳಲ್ಲಿ ಗೌರವವನ್ನು ಬೆಳೆಸಬೇಕಿದೆ ಎಂದು ಕರೆ ನೀಡಿದ್ದಾರೆ.

ಆರ್‌ಎಸ್‌ಎಸ್‌ನ ಗುರಿ ಹಿಂದೂ ಸಮಾಜವನ್ನು ಸಂಘಟಿಸುವುದು. ಆದರೆ ನಾವು ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಪುರುಷರನ್ನು ಮಾತ್ರ ಈಗ ನಾವು ಇಡೀ ಸಮಾಜವನ್ನು ಸಂಘಟಿಸಲು ಬಯಸಿದರೆ ಅದು ಶೇ 50ರಷ್ಟು ಮಹಿಳೆಯರನ್ನು ಹೊಂದಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತದ ಜನರು ಬಹಳಷ್ಟು ಸಂಪತ್ತನ್ನು ಹೊಂದಿದ್ದರು, ಆದರೆ ಮೊಘಲರ ಆಳ್ವಿಕೆಗೂ ಮುನ್ನವಷ್ಟೇ ಎಂದು ಅವರು ವ್ಯಾಖ್ಯಾನಿಸಿದರು.

ಇದನ್ನೂ ಓದಿ: 

‘ಯೋಚಿಸಬೇಕಾಗಿರುವುದು ಮುಸ್ಲಿಂ ಪ್ರಭುತ್ವದ ಬಗ್ಗೆ ಅಲ್ಲ..ಈ ದೇಶದ ಪ್ರಾಬಲ್ಯದ ಬಗ್ಗೆ’-ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಮರು ಎಂದೂ ಪ್ರತ್ಯೇಕವಾಗಿ ಬದುಕಿಲ್ಲ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಏಕತೆಯ ವ್ಯಾಖ್ಯಾನ

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು