AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್

RSS Chief Mohan Bhagwat: OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್
ಮೋಹನ್ ಭಾಗವತ್​
TV9 Web
| Edited By: |

Updated on: Oct 11, 2021 | 11:15 AM

Share

ದೇಶದೆಲ್ಲೆಡೆ ಈಗ ಮತಾಂತರದ್ದೇ ಸುದ್ದಿ. ಎಲ್ಲ ಪಕ್ಷಗಳೂ, ನಾಯಕರೂ ಮತಾಂತರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸರದಿ. ಮತಾಂತರದ ಕುರಿತು ಖಾರದ ಮಾತನ್ನಾಡಿರುವ ಮೋಹನ್ ಭಾಗವತ್ ಮಹಿಳೆಯರು ಮದುವೆಯಾಗಲೆಂದೇ ಇತರ ಧರ್ಮಗಳಿಗೆ ಮತಾಂತರಗೊಳ್ಳುವುದು ತಪ್ಪು ಎಂದಿದ್ದಾರೆ. ತಾಯಂದಿರು ಮಕ್ಕಳಿಗೆ ಹಿಂದೂ ಧರ್ಮದ ಪರಂಪರೆ ಮತ್ತು ಉದಾತ್ತತೆಯನ್ನು ಬಾಲ್ಯದಿಂದಲೇ ಕಲಿಸುತ್ತಿಲ್ಲ. ಹೀಗಾಗಿ ಚಿಕ್ಕ ಪುಟ್ಟ ಸ್ವಹಿತದ ಕಾರಣಗಳಿಗಾಗಿ ಮತಾಂತರ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಅವರ ಕುಟುಂಬಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಮತಾಂತರ ಹೇಗೆ ನಡೆಯುತ್ತದೆ? ಎಂದು ಪ್ರಶ್ನಿಸಿರುವ ಅವರು, ಹಿಂದೂ ಹುಡುಗಿಯರು ಮತ್ತು ಹುಡುಗರು ಇತರ ಧರ್ಮವನ್ನು ಏಕೆ ಸ್ವೀಕರಿಸುತ್ತಾರೆ? ಮದುವೆಯೆಂಬ ಸಣ್ಣ ಸ್ವಾರ್ಥಕ್ಕಾಗಿ. ನಾವು ಮಕ್ಕಳಿಗೆ ಮನೆಯಲ್ಲಿ ನಮ್ಮ ಧರ್ಮದ ಮೌಲ್ಯಗಳನ್ನು ಕಲಿಸಬೇಕಾಗಿದೆ. ನಮ್ಮ ಸ್ವಭಾವ, ನಮ್ಮ ಧರ್ಮ ಮತ್ತು ನಮ್ಮ ಪ್ರಾರ್ಥನಾ ಸಂಪ್ರದಾಯಗಳಲ್ಲಿ ಗೌರವವನ್ನು ಬೆಳೆಸಬೇಕಿದೆ ಎಂದು ಕರೆ ನೀಡಿದ್ದಾರೆ.

ಆರ್‌ಎಸ್‌ಎಸ್‌ನ ಗುರಿ ಹಿಂದೂ ಸಮಾಜವನ್ನು ಸಂಘಟಿಸುವುದು. ಆದರೆ ನಾವು ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಪುರುಷರನ್ನು ಮಾತ್ರ ಈಗ ನಾವು ಇಡೀ ಸಮಾಜವನ್ನು ಸಂಘಟಿಸಲು ಬಯಸಿದರೆ ಅದು ಶೇ 50ರಷ್ಟು ಮಹಿಳೆಯರನ್ನು ಹೊಂದಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತದ ಜನರು ಬಹಳಷ್ಟು ಸಂಪತ್ತನ್ನು ಹೊಂದಿದ್ದರು, ಆದರೆ ಮೊಘಲರ ಆಳ್ವಿಕೆಗೂ ಮುನ್ನವಷ್ಟೇ ಎಂದು ಅವರು ವ್ಯಾಖ್ಯಾನಿಸಿದರು.

ಇದನ್ನೂ ಓದಿ: 

‘ಯೋಚಿಸಬೇಕಾಗಿರುವುದು ಮುಸ್ಲಿಂ ಪ್ರಭುತ್ವದ ಬಗ್ಗೆ ಅಲ್ಲ..ಈ ದೇಶದ ಪ್ರಾಬಲ್ಯದ ಬಗ್ಗೆ’-ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಮರು ಎಂದೂ ಪ್ರತ್ಯೇಕವಾಗಿ ಬದುಕಿಲ್ಲ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಏಕತೆಯ ವ್ಯಾಖ್ಯಾನ

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು