AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್

RSS Chief Mohan Bhagwat: OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಮದುವೆಯಾಗಲೆಂದೇ ಮತಾಂತರಗೊಳ್ಳುವುದು ತಪ್ಪು: ಮೋಹನ್ ಭಾಗವತ್
ಮೋಹನ್ ಭಾಗವತ್​
TV9 Web
| Edited By: |

Updated on: Oct 11, 2021 | 11:15 AM

Share

ದೇಶದೆಲ್ಲೆಡೆ ಈಗ ಮತಾಂತರದ್ದೇ ಸುದ್ದಿ. ಎಲ್ಲ ಪಕ್ಷಗಳೂ, ನಾಯಕರೂ ಮತಾಂತರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಲೇ ಇದ್ದಾರೆ. ಇದೀಗ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸರದಿ. ಮತಾಂತರದ ಕುರಿತು ಖಾರದ ಮಾತನ್ನಾಡಿರುವ ಮೋಹನ್ ಭಾಗವತ್ ಮಹಿಳೆಯರು ಮದುವೆಯಾಗಲೆಂದೇ ಇತರ ಧರ್ಮಗಳಿಗೆ ಮತಾಂತರಗೊಳ್ಳುವುದು ತಪ್ಪು ಎಂದಿದ್ದಾರೆ. ತಾಯಂದಿರು ಮಕ್ಕಳಿಗೆ ಹಿಂದೂ ಧರ್ಮದ ಪರಂಪರೆ ಮತ್ತು ಉದಾತ್ತತೆಯನ್ನು ಬಾಲ್ಯದಿಂದಲೇ ಕಲಿಸುತ್ತಿಲ್ಲ. ಹೀಗಾಗಿ ಚಿಕ್ಕ ಪುಟ್ಟ ಸ್ವಹಿತದ ಕಾರಣಗಳಿಗಾಗಿ ಮತಾಂತರ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

OTT ಪ್ಲಾಟ್‌ಫಾರ್ಮ್‌ಗಳು ಎಲ್ಲಾ ರೀತಿಯ ವಿಷಯಗಳನ್ನು ತೋರಿಸುತ್ತವೆ. ನಾವು ನಮ್ಮ ಮಕ್ಕಳಿಗೆ ಮನೆಯಲ್ಲಿ ಏನು ನೋಡಬೇಕು ಮತ್ತು ಏನನ್ನು ನೊಡಬಾರದು ಎಂಬುದನ್ನು ಕಲಿಸಬೇಕು ಎಂದು ಭಾಗವತ್ ಹೇಳಿದರು.

ಆರ್‌ಎಸ್‌ಎಸ್ ಕಾರ್ಯಕರ್ತರು ಮತ್ತು ಅವರ ಕುಟುಂಬಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಮತಾಂತರ ಹೇಗೆ ನಡೆಯುತ್ತದೆ? ಎಂದು ಪ್ರಶ್ನಿಸಿರುವ ಅವರು, ಹಿಂದೂ ಹುಡುಗಿಯರು ಮತ್ತು ಹುಡುಗರು ಇತರ ಧರ್ಮವನ್ನು ಏಕೆ ಸ್ವೀಕರಿಸುತ್ತಾರೆ? ಮದುವೆಯೆಂಬ ಸಣ್ಣ ಸ್ವಾರ್ಥಕ್ಕಾಗಿ. ನಾವು ಮಕ್ಕಳಿಗೆ ಮನೆಯಲ್ಲಿ ನಮ್ಮ ಧರ್ಮದ ಮೌಲ್ಯಗಳನ್ನು ಕಲಿಸಬೇಕಾಗಿದೆ. ನಮ್ಮ ಸ್ವಭಾವ, ನಮ್ಮ ಧರ್ಮ ಮತ್ತು ನಮ್ಮ ಪ್ರಾರ್ಥನಾ ಸಂಪ್ರದಾಯಗಳಲ್ಲಿ ಗೌರವವನ್ನು ಬೆಳೆಸಬೇಕಿದೆ ಎಂದು ಕರೆ ನೀಡಿದ್ದಾರೆ.

ಆರ್‌ಎಸ್‌ಎಸ್‌ನ ಗುರಿ ಹಿಂದೂ ಸಮಾಜವನ್ನು ಸಂಘಟಿಸುವುದು. ಆದರೆ ನಾವು ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಪುರುಷರನ್ನು ಮಾತ್ರ ಈಗ ನಾವು ಇಡೀ ಸಮಾಜವನ್ನು ಸಂಘಟಿಸಲು ಬಯಸಿದರೆ ಅದು ಶೇ 50ರಷ್ಟು ಮಹಿಳೆಯರನ್ನು ಹೊಂದಬೇಕಾಗುತ್ತದೆ ಎಂದು ಅವರು ಹೇಳಿದರು. ಭಾರತದ ಜನರು ಬಹಳಷ್ಟು ಸಂಪತ್ತನ್ನು ಹೊಂದಿದ್ದರು, ಆದರೆ ಮೊಘಲರ ಆಳ್ವಿಕೆಗೂ ಮುನ್ನವಷ್ಟೇ ಎಂದು ಅವರು ವ್ಯಾಖ್ಯಾನಿಸಿದರು.

ಇದನ್ನೂ ಓದಿ: 

‘ಯೋಚಿಸಬೇಕಾಗಿರುವುದು ಮುಸ್ಲಿಂ ಪ್ರಭುತ್ವದ ಬಗ್ಗೆ ಅಲ್ಲ..ಈ ದೇಶದ ಪ್ರಾಬಲ್ಯದ ಬಗ್ಗೆ’-ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​

ಭಾರತದಲ್ಲಿ ಹಿಂದೂ ಮತ್ತು ಮುಸ್ಲಿಮರು ಎಂದೂ ಪ್ರತ್ಯೇಕವಾಗಿ ಬದುಕಿಲ್ಲ: ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಏಕತೆಯ ವ್ಯಾಖ್ಯಾನ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ