AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohan Bhagwat: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ

ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆಗಸ್ಟ್ 29 ರಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ನಡೆಯಲಿರುವ 'ಯುನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮದಲ್ಲಿ 5,000 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಭಾಗವಹಿಸಲಿದ್ದು, ರಕ್ಷಾಬಂಧನದ ಹಿನ್ನೆಲೆಯಲ್ಲಿ ಜಾಗತಿಕ ಏಕತೆ ಮತ್ತು 'ವಸುಧೈವ ಕುಟುಂಬಕಂ' ಸಂದೇಶವನ್ನು ಸಾರಲಾಗುತ್ತದೆ.

Mohan Bhagwat: ಆಗಸ್ಟ್ 29ರಂದು ಅಮೆರಿಕದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ
ಮೋಹನ್ ಭಾಗವತ್Image Credit source: PTI
ಭಾವನಾ ಹೆಗಡೆ
|

Updated on: Aug 11, 2026 | 9:55 AM

Share

ಮುಖ್ಯಾಂಶಗಳು

  • ಆಗಸ್ಟ್ 29 ರಂದು ಅಮೆರಿಕದ ನ್ಯೂಯಾರ್ಕ್‌ನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ.
  • ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ 5 ಸಾವಿರಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಭಾಗಿ.
  • ಆರ್‌ಎಸ್‌ಎಸ್ ಶತಮಾನೋತ್ಸವ ವರ್ಷದ ಹಿನ್ನೆಲೆಯಲ್ಲಿ ಜಾಗತಿಕ ಸಂಪರ್ಕ ಅಭಿಯಾನ ಚುರುಕು.

ನವದೆಹಲಿ, ಆಗಸ್ಟ್ 11: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೂರು ವರ್ಷದ ಜಾಗತಿಕ ಸಂಪರ್ಕ ಅಭಿಯಾನದ ಭಾಗವಾಗಿ, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ತಿಂಗಳ ಕೊನೆಯಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸದ ಪ್ರಮುಖ ಕಾರ್ಯಕ್ರಮವಾಗಿ ಆಗಸ್ಟ್ 29 ರಂದು ನ್ಯೂಯಾರ್ಕ್‌ನ ಪ್ರತಿಷ್ಠಿತ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.’ಅಮೆರಿಕನ್ ಹಿಂದೂಸ್ ಫಾರ್ ಎಂಗೇಜ್‌ಮೆಂಟ್ ಅಂಡ್ ಡೈಲಾಗ್’ (AHEAD) ಫೋರಂ ಮತ್ತು ನೂರಾರು ಹಿಂದೂ ಸಾಂಸ್ಕೃತಿಕ, ಧಾರ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

‘ಯುನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್’ ಮತ್ತು ರಕ್ಷಾಬಂಧನದ ಸಂದೇಶ

ಆಗಸ್ಟ್ 29 ರಂದು ನಡೆಯಲಿರುವ ಈ ಬೃಹತ್ ಸಮಾವೇಶಕ್ಕೆ ‘ಯುನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್’ಎಂದು ಹೆಸರಿಸಲಾಗಿದೆ. ಹಿಂದೂ ಹಬ್ಬವಾದ ರಕ್ಷಾಬಂಧನದ ಸಂದರ್ಭದಲ್ಲೇ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ವಿಶೇಷವಾಗಿದೆ. ಈ ಸಮಾವೇಶವು ಪ್ರಮುಖವಾಗಿ ವಸುಧೈವ ಕುಟುಂಬಕಂ, ಅಂದರೆ “ಇಡೀ ಜಗತ್ತೇ ಒಂದು ಕುಟುಂಬ” ಎಂಬ ಭಾರತೀಯ ಸನಾತನ ತತ್ವದ ಆಧಾರದ ಮೇಲೆ ಜಾಗತಿಕ ಸಾಮರಸ್ಯ, ನಾಗರಿಕ ಜವಾಬ್ದಾರಿ ಮತ್ತು ಪರಸ್ಪರ ಗೌರವದ ಸಂದೇಶವನ್ನು ಸಾರಲಾಗುತ್ತದೆ. ಸಹೋದರ-ಸಹೋದರಿಯರ ಬಾಂಧವ್ಯದ ಹಬ್ಬವಾದ ರಕ್ಷಾಬಂಧನವನ್ನು ಇಡೀ ಜಗತ್ತು, ಮಾನವೀಯತೆ ಮತ್ತು ಪ್ರಕೃತಿಯ ನಡುವಿನ ಜವಾಬ್ದಾರಿಯ ಸಂಕೇತವಾಗಿ ಇಲ್ಲಿ ಪ್ರಸ್ತುತಪಡಿಸಲಾಗುತ್ತಿದೆ.

ಮ್ಯಾಡಿಸನ್ ಸ್ಕ್ವೇರ್‌ನಲ್ಲಿ 5 ಸಾವಿರಕ್ಕೂ ಅಧಿಕ ಭಾರತೀಯರ ಜಮಾವಣೆ

ಮೋಹನ್ ಭಾಗವತ್ ಅವರ ಈ ಅಪರೂಪದ ಅಮೆರಿಕ ಸಾರ್ವಜನಿಕ ಭಾಷಣವನ್ನು ಕೇಳಲು ಅಮೆರಿಕದ ವಿವಿಧ ರಾಜ್ಯಗಳಿಂದ 5,000ಕ್ಕೂ ಹೆಚ್ಚು ಪ್ರಮುಖ ಭಾರತೀಯ ಮೂಲದ ಅಮೆರಿಕನ್ನರು ಭಾಗವಹಿಸುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಭಾಷಾ, ಪ್ರಾದೇಶಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ಉದ್ಯಮಿಗಳು, ವೈದ್ಯರು, ಶಿಕ್ಷಣ ತಜ್ಞರು, ಯುವ ಮುಖಂಡರು ಮತ್ತು ಧಾರ್ಮಿಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.

ನ್ಯೂಯಾರ್ಕ್‌ನಲ್ಲಿ ಕನಿಷ್ಠ ಎರಡು ಖಾಸಗಿ ಕಾರ್ಯಕ್ರಮಗಳಲ್ಲೂ ಭಾಗವಹಿಸಲಿರುವ ಮೋಹನ್ ಭಾಗವತ್ ಅವರು, ಅಮೆರಿಕದ ಪ್ರವಾಸ ಮುಗಿದ ನಂತರ ಕೆನಡಾಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ. ಆರ್‌ಎಸ್‌ಎಸ್ ಜಗತ್ತಿನಾದ್ಯಂತ ತನ್ನ ಒಡನಾಟವನ್ನು ವೃದ್ಧಿಸಿಕೊಳ್ಳಲು ಹಮ್ಮಿಕೊಂಡಿರುವ ಶತಮಾನೋತ್ಸವದ ಜಾಗತಿಕ ಕಾರ್ಯತಂತ್ರದ ಭಾಗವಾಗಿ ಈ ವಿದೇಶಿ ಪ್ರವಾಸಗಳು ಅತ್ಯಂತ ಮಹತ್ವ ಪಡೆದುಕೊಂಡಿವೆ.

ಇನ್ನಷ್ಟು  ರಾಷ್ಟ್ರೀಯ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ