AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.19, 20ರಂದು ಲಕ್ನೋದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮನ್ವಯ ಸಭೆ, ಏನೆಲ್ಲಾ ಚರ್ಚೆಯಾಗಲಿದೆ?

ಲಕ್ನೋದ ನಿರಾಲಾ ನಗರದ ಶಿಶು ಮಂದಿರದಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಗವಹಿಸಲಿದ್ದಾರೆ. ಸರ್ಕಾರದ ಪರವಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇಬ್ಬರೂ ಉಪ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸೆ.19, 20ರಂದು ಲಕ್ನೋದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮನ್ವಯ ಸಭೆ, ಏನೆಲ್ಲಾ ಚರ್ಚೆಯಾಗಲಿದೆ?
ರಾಷ್ಟ್ರೀಯ ಸ್ವಯಂಸೇವಕ ಸಂಘ
ರಶ್ಮಿ ಕಲ್ಲಕಟ್ಟ
|

Updated on: Sep 18, 2023 | 4:32 PM

Share

ಲಕ್ನೋ ಸೆಪ್ಟೆಂಬರ್​​ 18: ಮುಂದಿನ ವರ್ಷದ ಲೋಕಸಭೆ ಚುನಾವಣೆಗೂ (Lok Sabha Election 2024)  ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS), ಸಂಘಟನೆಗಳು ಮತ್ತು ಸರ್ಕಾರದ ಸಮನ್ವಯ ಸಭೆ ನಾಳೆಯಿಂದ (ಸೆಪ್ಟೆಂಬರ್ 19-20) ಲಕ್ನೋದಲ್ಲಿ (Lucknow) ನಡೆಯಲಿದೆ. ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಸಂಘ-ಬಿಜೆಪಿ ನಡುವೆ ಸೇತುವೆಯ ಪಾತ್ರ ವಹಿಸಿದ್ದ ಸರಕಾರ್ಯವಾಹ ಅರುಣ್‌ಕುಮಾರ್ ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ.

ಲಕ್ನೋದ ನಿರಾಲಾ ನಗರದ ಶಿಶು ಮಂದಿರದಲ್ಲಿ ನಡೆಯಲಿರುವ ಈ ಮಹತ್ವದ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಗವಹಿಸಲಿದ್ದಾರೆ. ಸರ್ಕಾರದ ಪರವಾಗಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಇಬ್ಬರೂ ಉಪ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಭೆ ಹಲವು ವಿಧಗಳಲ್ಲಿ ಮಹತ್ವದ್ದು

2024ರ ಲೋಕಸಭೆ ಚುನಾವಣೆಗೆ ಮುನ್ನ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಈ ಸಭೆಯನ್ನು ಅತ್ಯಂತ ಮಹತ್ವದ್ದಾಗಿ ಪರಿಗಣಿಸಲಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಹೊಸ ಮತದಾರರ ಸೇರ್ಪಡೆಯಲ್ಲಿ ಆರ್‌ಎಸ್‌ಎಸ್ ಪಾತ್ರ, ದಲಿತ-ಬುಡಕಟ್ಟು ಜನಾಂಗದ ನೆಲೆಗಳ ಮೂಲಕ ಸಾಮಾಜಿಕ ಸೌಹಾರ್ದತೆ ಹೆಚ್ಚಿಸುವ ಪ್ರಯತ್ನ, ಸರ್ಕಾರ ವಾಸ್ತವ ಸ್ಥಿತಿ, ದಲಿತ ಮತದಾರರ ಅಸಮಾಧಾನ ಹೀಗೆ ಪ್ರತಿಯೊಂದು ವಿಷಯದ ಬಗ್ಗೆಯೂ ಆಳವಾದ ಚರ್ಚೆ ನಡೆಯಲಿದೆ.

ಉತ್ತರ ಪ್ರದೇಶದ ಸಂಭವನೀಯ ಕ್ಯಾಬಿನೆಟ್ ಬಗ್ಗೆಯೂ ವಿವರವಾಗಿ ಚರ್ಚಿಸಬಹುದು ಎಂದು ನಂಬಲಾಗಿದೆ. ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಸಂಪುಟ ವಿಸ್ತರಣೆ ಆಗಬೇಕಿದೆ. ಈ ಸಮನ್ವಯ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಬೇಕಿದೆ. 2024ರ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಾದೇಶಿಕ ಮತ್ತು ಜಾತಿ ಸಮೀಕರಣಗಳ ಜೊತೆಗೆ ಯಾವ ನಾಯಕರಿಗೆ ಎಷ್ಟು ಸ್ಥಾನ ನೀಡಬೇಕು ಎಂಬುದನ್ನು ಈ ಸಭೆಯಲ್ಲಿ ನಿರ್ಧರಿಸಬಹುದು.

ಘೋಸಿ ಉಪಚುನಾವಣೆಯಲ್ಲಿ ಸೋಲು ಕಂಡಿರುವ ದಾರಾ ಸಿಂಗ್ ಚೌಹಾಣ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದು ಮತ್ತು ಮಿತ್ರಪಕ್ಷದ ನಾಯಕ ಓಂ ಪ್ರಕಾಶ್ ರಾಜ್‌ಭರ್‌ಗೆ ಸಂಪುಟದಲ್ಲಿ ಸ್ಥಾನ ನೀಡುವುದು ಮಾತ್ರವಲ್ಲದೆ ಸಂಪುಟದಲ್ಲಿ ಹೊಸಬರ ಸೇರ್ಪಡೆ ಬಗ್ಗೆಯೂ ಚರ್ಚೆಯಾಗಲಿದೆ.

ಇದನ್ನೂ ಓದಿ: ನರೇಂದ್ರ ಮೋದಿಯನ್ನು ಚೀನಾದ ಲೆಜೆಂಡ್ ಡೆಂಗ್ ಶಿಯೋಪಿಂಗ್​ಗೆ ಹೋಲಿಸಿದ ಅಮೆರಿಕದ ಇನ್ವೆಸ್ಟರ್ ರೇ ಡೇಲಿಯೋ

ದಲಿತ ಮತದಾರರ ಅಸಮಾಧಾನ ಕುರಿತು ವಿಶೇಷ ಚರ್ಚೆ

ಉತ್ತರ ಪ್ರದೇಶದಲ್ಲಿ ನಡೆದ ಕಳೆದ ಮೂರು ಉಪಚುನಾವಣೆಗಳು ದಲಿತ ಸಮುದಾಯದ ಜನರು ಬಿಜೆಪಿಯಿಂದ ಸಂತೋಷವಾಗಿಲ್ಲ ಮತ್ತು ದಲಿತರು ಕೇಂದ್ರ ಮತ್ತು ರಾಜ್ಯ ಯೋಜನೆಗಳ ದೊಡ್ಡ ಫಲಾನುಭವಿ ವರ್ಗವಾಗಿದೆ. ಸಮನ್ವಯ ಸಭೆಯಲ್ಲೂ ಈ ಬಗ್ಗೆ ಚರ್ಚೆ ಸಾಧ್ಯತೆ ಇದೆ.

ಆರ್‌ಎಸ್‌ಎಸ್‌ ತನ್ನ ಕಡೆಯಿಂದ ಬಿಜೆಪಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಬಹುದು ಎಂದು ನಂಬಲಾಗಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ದಲಿತ-ಬುಡಕಟ್ಟು ಮತದಾರರು ನಿರ್ಣಾಯಕರಾಗಲಿದ್ದಾರೆ ಎಂದು ಸಂಘ ಮನಗಂಡಿದೆ. ಆದ್ದರಿಂದ, ದಲಿತ ಮತ್ತು ಬುಡಕಟ್ಟು ಸಮುದಾಯಗಳ ನಡುವೆ ಸಾಮರಸ್ಯವನ್ನು ಹೆಚ್ಚಿಸಲು ತೀವ್ರವಾದ ಅಭಿಯಾನವನ್ನು ನಡೆಸುವ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ