AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಜೋಧಪುರದ ಆಸ್ಪತ್ರೆಗೆ ದಾಖಲು

ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಇಂದು ಮಧ್ಯಾಹ್ನ ಜೋಧ್‌ಪುರದ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾರೆ. ದತ್ತಾತ್ರೇಯ ಹೊಸಬಾಳೆ ಈಗ ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ ಎಂದು ಆರ್‌ಎಸ್‌ಎಸ್ ರಾಷ್ಟ್ರೀಯ ಪ್ರಚಾರ ಮತ್ತು ಮಾಧ್ಯಮ ವಿಭಾಗದ ಮುಖ್ಯಸ್ಥ ಸುನಿಲ್ ಅಂಬೇಕರ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಅನಾರೋಗ್ಯದಿಂದ ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಜೋಧಪುರದ ಆಸ್ಪತ್ರೆಗೆ ದಾಖಲು
Dattatreya Hosabale
ಸುಷ್ಮಾ ಚಕ್ರೆ
|

Updated on: Sep 08, 2025 | 9:30 PM

Share

ಜೋಧ್​​ಪುರ, ಸೆಪ್ಟೆಂಬರ್ 8: ಇಂದು ಮಧ್ಯಾಹ್ನ ಜೋಧಪುರದಲ್ಲಿ ಆರ್‌ಎಸ್‌ಎಸ್ (RSS) ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ (Dattatreya Hosabale) ಅವರ ಆರೋಗ್ಯ ಹದಗೆಟ್ಟಿತು. ಹೀಗಾಗಿ ಅವರನ್ನು ಜೋಧಪುರದ ಏಮ್ಸ್‌ಗೆ ದಾಖಲಿಸಲಾಯಿತು. ಆರಂಭದಲ್ಲಿ ಅವರ ರಕ್ತದೊತ್ತಡ ಹೆಚ್ಚಾಗಿತ್ತು ಎಂದು ಆರ್‌ಎಸ್‌ಎಸ್ ಮೂಲಗಳು ತಿಳಿಸಿವೆ. ಅವರು ಅಪಾಯದಿಂದ ಪಾರಾಗಿದ್ದಾರೆ ಮತ್ತು ಅವರ ಸ್ಥಿತಿ ಈಗ ಉತ್ತಮವಾಗಿದೆ. ಅವರನ್ನು ಏಮ್ಸ್‌ನಲ್ಲಿ 24 ಗಂಟೆಗಳ ಕಾಲ ವೀಕ್ಷಣೆಯಲ್ಲಿ ಇರಿಸಲಾಗುತ್ತದೆ. ಈ ಸಮಯದಲ್ಲಿ, ಅವರನ್ನು ಸಂಪೂರ್ಣವಾಗಿ ಪರೀಕ್ಷಿಸಲಾಗುತ್ತದೆ.

ಇತ್ತೀಚೆಗೆ, ಆರ್‌ಎಸ್‌ಎಸ್ ಜೋಧ್‌ಪುರದಲ್ಲಿ 3 ದಿನಗಳ ಕಾರ್ಯಕ್ರಮವನ್ನು ನಡೆಸಿತ್ತು. ಸೆಪ್ಟೆಂಬರ್ 5ರಿಂದ 7ರವರೆಗೆ ನಡೆದ ಆರ್‌ಎಸ್‌ಎಸ್‌ನ ಅಖಿಲ ಭಾರತ ಸಮನ್ವಯ ಸಭೆಯಲ್ಲಿ ಅನೇಕ ವಿಷಯಗಳನ್ನು ಚರ್ಚಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್‌ಎಸ್‌ಎಸ್‌ನ ಎಲ್ಲಾ 32 ವಿವಿಧ ಸಂಘಟನೆಗಳು ಈ ಸಭೆಯಲ್ಲಿ ಉಪಸ್ಥಿತರಿದ್ದರು. ಸೆಪ್ಟೆಂಬರ್ 7 ಈ ಸಭೆಯ ಕೊನೆಯ ದಿನವಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಸುನಿಲ್ ಅಂಬೇಕರ್ ಅನೇಕ ವಿಷಯಗಳನ್ನು ಪ್ರಸ್ತಾಪಿಸಿದರು.

ಇದನ್ನೂ ಓದಿ: ಭಿನ್ನಾಭಿಪ್ರಾಯ, ಜಗಳವಿಲ್ಲ; ಬಿಜೆಪಿ ಜೊತೆಗಿನ ಸಂಬಂಧದ ಬಗ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸ್ಪಷ್ಟನೆ

ಪಂಜಾಬ್, ಪಶ್ಚಿಮ ಬಂಗಾಳ ಮತ್ತು ಮಣಿಪುರದ ಬಗ್ಗೆ ಸಂಘದ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸುನಿಲ್ ಅಂಬೇಕರ್ ಹೇಳಿದರು. ಪಂಜಾಬ್‌ನಲ್ಲಿ ಮಾದಕ ದ್ರವ್ಯ ಮತ್ತು ಧಾರ್ಮಿಕ ಮತಾಂತರದ ಬಗ್ಗೆ ಸಭೆಯಲ್ಲಿ ಕಳವಳ ವ್ಯಕ್ತವಾಗಿದೆ ಎಂದು ಅವರು ಹೇಳಿದರು. ಪಂಜಾಬ್‌ನಲ್ಲಿ ಧಾರ್ಮಿಕ ಮತಾಂತರ ಮತ್ತು ಯುವಕರಲ್ಲಿ ಹೆಚ್ಚುತ್ತಿರುವ ಮಾದಕ ವ್ಯಸನದ ವಿಷಯದ ಬಗ್ಗೆ ಸಂಘವು ಸಭೆಯಲ್ಲಿ ವಿವರವಾದ ಚರ್ಚೆ ನಡೆಸಿತು. ರಾಜ್ಯದ ಹಿಂದುಳಿದ ವರ್ಗಗಳ ಜನರನ್ನು ಕರೆದುಕೊಂಡು ಹೋಗುವ ಮೂಲಕ ಧಾರ್ಮಿಕ ಮತಾಂತರವನ್ನು ನಿಲ್ಲಿಸಲು ಸಂಘವು ಕೆಲಸ ಮಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ