AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಯಾರ್ಕ್​ನಲ್ಲಿ ಆಗಸ್ಟ್ 29ರಂದು ಏಕತಾ ಆಚರಣೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿ

ಅಮೆರಿಕ ಪ್ರವಾಸದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಆಗಸ್ಟ್ 29ರಂದು ನ್ಯೂಯಾರ್ಕ್‌ನಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. 2014ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೂ ನ್ಯೂಯಾರ್ಕ್​ನಲ್ಲಿ ಹೌಡಿ ಮೋದಿ ಎಂಬ ಅದ್ದೂರಿ ಕಾರ್ಯಕ್ರಮವನ್ನು ಅನಿವಾಸಿ ಭಾರತೀಯರು ಆಯೋಜಿಸಿದ್ದರು. ಇದೀಗ ಮೋಹನ್ ಭಾಗವತ್ ಕೂಡ 5000ಕ್ಕೂ ಹೆಚ್ಚು ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ನ್ಯೂಯಾರ್ಕ್​ನಲ್ಲಿ ಆಗಸ್ಟ್ 29ರಂದು ಏಕತಾ ಆಚರಣೆಯಲ್ಲಿ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಭಾಗಿ
Mohan Bhagwat Image Credit source: TV9
ಸುಷ್ಮಾ ಚಕ್ರೆ
|

Updated on: Aug 26, 2026 | 10:39 PM

Share

ನವದೆಹಲಿ, ಆಗಸ್ಟ್ 26: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ತಮ್ಮ 3 ರಾಷ್ಟ್ರಗಳ ಪ್ರವಾಸದ ಭಾಗವಾಗಿ ಆಗಸ್ಟ್ 29ರಂದು ಅಮೆರಿಕದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ನ್ಯೂಯಾರ್ಕ್ ನಗರದ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಅವರಿಗೆ 5,000 ಜನರನ್ನು ಭೇಟಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ಆರ್‌ಎಸ್‌ಎಸ್ ಶತಾಬ್ದಿ ಗ್ಲೋಬಲ್ ಔಟ್ರೀಚ್‌ನ ಭಾಗವಾಗಿ ಸಾರ್ವತ್ರಿಕ ಏಕತೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಪ್ರಚಾರ ಮುಖ್ಯಸ್ಥ ಸುನಿಲ್ ಅಂಬೇಕರ್ ಮೋಹನ್ ಭಾಗವತ್ ಅವರ ಈ ಕಾರ್ಯಕ್ರಮದ ಉದ್ದೇಶವನ್ನು ಸ್ಪಷ್ಟಪಡಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾಧ್ಯವಾದಷ್ಟು ಜನರು ಭಾಗವಹಿಸುವಂತೆ ಅವರು ಮನವಿ ಮಾಡಿದ್ದಾರೆ. ಈ ಬಗ್ಗೆ ಸುನಿಲ್ ಅಂಬೇಕರ್ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಮೋಹನ್ ಭಾಗವತ್ ಅವರ ಕಾರ್ಯಕ್ರಮ ನ್ಯೂಯಾರ್ಕ್‌ನಲ್ಲಿ ಏಕೆ ನಡೆಯುತ್ತಿದೆ? ಇದರ ಹಿಂದಿನ ಉದ್ದೇಶವೇನು? ಎಂಬುದನ್ನು ವಿವರಿಸಲಾಗಿದೆ. ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವ ಏಕತಾವತ್ವ ಸಮಾರಂಭವು ಸರ್ವಧರ್ಮೀಯ ಸಭೆಗೆ ಸಾಕ್ಷಿಯಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಅಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಅವರು ವೈವಿಧ್ಯಮಯ, ಬಹುಸಂಸ್ಕೃತಿ ಮತ್ತು ಬಹುಧರ್ಮೀಯ ಪ್ರೇಕ್ಷಕರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿಕ ಭೇಟಿ; ನ್ಯೂಯಾರ್ಕ್​ನಲ್ಲಿ ಸಾಂಪ್ರದಾಯಿಕ ಸ್ವಾಗತ

ಸಾರ್ವತ್ರಿಕ ಏಕತೆಯ ಆಚರಣೆಯು ನ್ಯೂಯಾರ್ಕ್‌ನಲ್ಲಿ ಆಯೋಜಿಸಲಾದ ಅಂತರ್ ಧರ್ಮೀಯ ಕಾರ್ಯಕ್ರಮವಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇದು ವಿವಿಧ ಸಂಸ್ಕೃತಿಗಳು, ಸಮುದಾಯಗಳು ಮತ್ತು ಧರ್ಮಗಳ ಜನರನ್ನು ಒಟ್ಟುಗೂಡಿಸುವ ಒಂದು ಉಪಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸರಸಂಘಚಾಲಕ್ ಡಾ. ಮೋಹನ್ ಭಾಗವತ್ ಅವರು ವಿವಿಧ ಧರ್ಮಗಳು ಮತ್ತು ಸಂಸ್ಕೃತಿಗಳ ಪಾಲ್ಗೊಳ್ಳುವವರೊಂದಿಗೆ ಸಂವಹನ ನಡೆಸಲಿದ್ದಾರೆ ಎಂದು ಸುನಿಲ್ ಅಂಬೇಕರ್ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಈ ಕಾರ್ಯಕ್ರಮವನ್ನು ಮುಕ್ತ ಸಂವಾದ ಮತ್ತು ಪರಸ್ಪರ ಗೌರವದ ಮನೋಭಾವದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಭಾರತೀಯ ಸಂಸ್ಕೃತಿಯ ಸಮಗ್ರ ಮತ್ತು ಸ್ವಾಗತಾರ್ಹ ವಿಚಾರಗಳ ಪ್ರತಿಬಿಂಬವಾಗಿದೆ. ಈ ಉಪಕ್ರಮವು ಭಾರತ ಮತ್ತು ಪ್ರಪಂಚದಾದ್ಯಂತದ ರಾಷ್ಟ್ರೀಯ ಸ್ವಯಂಸೇವಕ ಸಂಘದ ದೀರ್ಘಕಾಲೀನ ಸಂಪ್ರದಾಯವನ್ನು ಮುಂದಕ್ಕೆ ಕೊಂಡೊಯ್ಯುತ್ತಿದೆ, ವಿವಿಧ ಸಮುದಾಯಗಳೊಂದಿಗೆ ಸಂವಹನ ನಡೆಸುವ ಮೂಲಕ ಪರಸ್ಪರ ತಿಳುವಳಿಕೆ, ಸಹಕಾರವನ್ನು ಸೃಷ್ಟಿಸುತ್ತಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
125 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಿದ ಶಾಸಕ
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ನಾಳೆ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಸಂಪುಟಕ್ಕೆ ಸಣ್ಣ ಸರ್ಜರಿ ಆಗುತ್ತಾ?
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಹೆಲ್ಮೆಟ್ ಧರಿಸದೆ ಬೈಕ್ ಓಡಿಸಿದ ಶಾಸಕ ಪ್ರಕಾಶ್ ಕೋಳಿವಾಡಗೆ ಪೊಲೀಸರಿಂದ ದಂಡ
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಉಡುಪಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಬಲೆಗೆ ಬಿದ್ದ ಕ್ರಿಮಿನಲ್!
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ
ಈದ್ ಮಿಲಾದ್​ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ