AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 150 ಕೋಟಿ ವೆಚ್ಚದ ಆರ್​ಎಸ್​ಎಸ್​ ನೂತನ ಕಚೇರಿ ಉದ್ಘಾಟನೆ; ಮೋಹನ್ ಭಾಗವತ್, ಪಿಎಂ ಮೋದಿ, ಅಮಿತ್ ಶಾ ಭಾಗಿ

ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಆರ್​ಎಸ್​ಎಸ್​ ಕಚೇರಿ 'ಕೇಶವ್ ಕುಂಜ್' ನ ವೆಚ್ಚ ಸುಮಾರು 150 ಕೋಟಿ ರೂ.ಗಳಷ್ಟಿದೆ. ಈ ವೆಚ್ಚವನ್ನು ಹಿಂದುತ್ವ ಸಿದ್ಧಾಂತಕ್ಕೆ ಸಂಬಂಧಿಸಿದ 75,000ಕ್ಕೂ ಹೆಚ್ಚು ಜನರ ದೇಣಿಗೆಯಿಂದ ಸಂಗ್ರಹಿಸಲಾಗಿದೆ. ಈ ಯೋಜನೆಯು 8 ವರ್ಷಗಳಿಗೂ ಹೆಚ್ಚು ಕಾಲ ನಡೆದಿದೆ. ಆದರೆ ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಈ ಕಟ್ಟಡದ ನಿರ್ಮಾಣ ವಿಳಂಬವಾಯಿತು. ಹೊಸ ಕಟ್ಟಡವು ಹಿಂದಿನ 2 ಅಂತಸ್ತಿನ ಕಟ್ಟಡಕ್ಕಿಂತ ಸಾಕಷ್ಟು ಭಿನ್ನವಾಗಿದೆ. ಇದು ಆಧುನಿಕ ತಂತ್ರಜ್ಞಾನ ಮತ್ತು ಸಾಂಪ್ರದಾಯಿಕ ವಾಸ್ತುಶಿಲ್ಪದ ಸಂಯೋಜನೆಯನ್ನು ಹೊಂದಿದೆ.

ದೆಹಲಿಯಲ್ಲಿ 150 ಕೋಟಿ ವೆಚ್ಚದ ಆರ್​ಎಸ್​ಎಸ್​ ನೂತನ ಕಚೇರಿ ಉದ್ಘಾಟನೆ; ಮೋಹನ್ ಭಾಗವತ್, ಪಿಎಂ ಮೋದಿ, ಅಮಿತ್ ಶಾ ಭಾಗಿ
Rss Office Inauguration
ಸುಷ್ಮಾ ಚಕ್ರೆ
|

Updated on:Feb 19, 2025 | 10:09 PM

Share

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ನೂತನ ಕಚೇರಿ ‘ಕೇಶವ್ ಕುಂಜ್’ ಅನ್ನು ಇಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ‘ಆರ್‌ಎಸ್‌ಎಸ್ ಕೆಲಸವು ದೇಶಾದ್ಯಂತ ವೇಗವನ್ನು ಪಡೆಯುತ್ತಿದೆ ಮತ್ತು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ನಮ್ಮ ಕೆಲಸವು ಈ ಕಟ್ಟಡದಂತೆಯೇ ಭವ್ಯವಾಗಿರಬೇಕು. ನಮ್ಮ ಕೆಲಸವು ಆ ಭವ್ಯತೆಯನ್ನು ಪ್ರತಿಬಿಂಬಿಸಬೇಕು. ಈ ಕೆಲಸವು ಭಾರತವನ್ನು ಮತ್ತೆ ವಿಶ್ವಗುರುವಿನ ಸ್ಥಾನಕ್ಕೆ ಕೊಂಡೊಯ್ಯುತ್ತದೆ ಎಂಬ ನಂಬಿಕೆ ನಮಗಿದೆ. ಭಾರತ ಶೀಘ್ರದಲ್ಲೇ ವಿಶ್ವಗುರುವಾಗುತ್ತದೆ. ನಾವು ಇದನ್ನು ನಮ್ಮ ಜೀವಿತಾವಧಿಯಲ್ಲಿ ನೋಡುತ್ತೇವೆ ಎಂಬ ವಿಶ್ವಾಸ ನಮಗಿದೆ’ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಶ್ರೀ ರಾಮ ಜನ್ಮಭೂಮಿ ನ್ಯಾಸ್ ಖಜಾಂಚಿ ಪೂಜ್ಯ ಗೋವಿಂದದೇವ್ ಗಿರಿ ಜೀ ಮಹಾರಾಜ್ ಅವರು ತಮ್ಮ ಆಶೀರ್ವಚನದಲ್ಲಿ, ‘ಇಂದು ಪವಿತ್ರ ದಿನವಾಗಿದೆ. ಏಕೆಂದರೆ ಇದು ಶ್ರೀ ಗುರೂಜಿ ಮತ್ತು ಸಂಘದ ಸೈದ್ಧಾಂತಿಕ ಶಕ್ತಿಯನ್ನು ಪ್ರತಿನಿಧಿಸುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಾಗಿದೆ. ನಾವು ಹಿಂದೂ ಭೂಮಿಯ ಮಕ್ಕಳು. ಆರ್​ಎಸ್​ಎಸ್​ ಯಾವಾಗಲೂ ಭಾರತದ ಸಂಪ್ರದಾಯದ ಮಾರ್ಗದಲ್ಲಿ ದೇಶದ ಪ್ರಗತಿಯ ಬಗ್ಗೆ ಮಾತನಾಡುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಆರ್​ಎಸ್​ಎಸ್​ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ; ಸಿಎಂ ಸಿದ್ದರಾಮಯ್ಯ ಆರೋಪ

ಕೇಶವ ಕುಂಜ್ ಉದ್ಘಾಟನಾ ಸಮಾರಂಭದಲ್ಲಿ ಕೇಶವ ಸ್ಮಾರಕ ಸಮಿತಿಯ ಅಧ್ಯಕ್ಷ ಅಲೋಕ್ ಕುಮಾರ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಪಸ್ಥಿತರಿದ್ದರು.

ಹೊಸ ಆರ್‌ಎಸ್‌ಎಸ್ ಕಚೇರಿಯ ವಿಶೇಷತೆ:

ಹೊಸ ಆರ್‌ಎಸ್‌ಎಸ್ ಕಚೇರಿಯು ಸಾಂಪ್ರದಾಯಿಕ ಭಾರತೀಯ ವಾಸ್ತುಶಿಲ್ಪವನ್ನು ಆಧುನಿಕ ಸೌಲಭ್ಯಗಳೊಂದಿಗೆ ಸಂಯೋಜಿಸುತ್ತದೆ. ಈ ಕಟ್ಟಡವು ಸುಮಾರು 5 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಹರಡಿಕೊಂಡಿದ್ದು, ಗೋಪುರ, ಸಭಾಂಗಣ, ಗ್ರಂಥಾಲಯ, ಆಸ್ಪತ್ರೆ ಮತ್ತು ಹನುಮಾನ್ ದೇವಾಲಯವನ್ನು ಒಳಗೊಂಡಿದೆ. ಈ ಬೃಹತ್ ಕಟ್ಟಡವನ್ನು ಸಾರ್ವಜನಿಕ ದೇಣಿಗೆಯಿಂದ ನಿರ್ಮಿಸಲಾಗಿದ್ದು, ಇದಕ್ಕೆ 75,000ಕ್ಕೂ ಹೆಚ್ಚು ಜನರು ದೇಣಿಗೆ ನೀಡಿದ್ದಾರೆ. ಇದರ ನಿರ್ಮಾಣ ಕಾರ್ಯಕ್ಕೆ ಸುಮಾರು 8 ವರ್ಷಗಳು ಬೇಕಾಯಿತು. ಈ ಕಟ್ಟಡದ ಒಟ್ಟು ವೆಚ್ಚ ಸುಮಾರು 150 ಕೋಟಿ ರೂ.

ಈ ಹೊಸ ಆರ್‌ಎಸ್‌ಎಸ್ ಕಚೇರಿಯನ್ನು ಗುಜರಾತ್‌ನ ಪ್ರಸಿದ್ಧ ವಾಸ್ತುಶಿಲ್ಪಿ ಅನೂಪ್ ದೇವ್ ವಿನ್ಯಾಸಗೊಳಿಸಿದ್ದಾರೆ. ಇದು ಉತ್ತಮ ಗಾಳಿ ಮತ್ತು ನೈಸರ್ಗಿಕ ಬೆಳಕನ್ನು ನೀಡುತ್ತದೆ. ಮೂರು ಗೋಪುರಗಳಿಗೆ ‘ಸಾಧನಾ’, ‘ಪ್ರೇರಣ’ ಮತ್ತು ‘ಅರ್ಚನಾ’ ಎಂದು ಹೆಸರಿಡಲಾಗಿದೆ. ಆರ್‌ಎಸ್‌ಎಸ್ ಕಚೇರಿಯನ್ನು ಪ್ರವೇಶಿಸಿದ ತಕ್ಷಣ, ‘ಸಾಧನಾ’ ಗೋಪುರ ಮೊದಲು ಬರುತ್ತದೆ, ನಂತರ ‘ಪ್ರೇರಣ’ ಗೋಪುರ ಮತ್ತು ಅಂತಿಮವಾಗಿ ‘ಅರ್ಚನಾ’ ಗೋಪುರ ಸಿಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 pm, Wed, 19 February 25

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..