AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು. 

Bihar: ಸರ್ಕಾರಿ ಭೂಮಿ ಒತ್ತುವರಿ ಮಾಹಿತಿ ಕೇಳಿದ್ದ ಆರ್​ಟಿಐ ಕಾರ್ಯಕರ್ತನ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Sep 24, 2021 | 5:04 PM

Share

ಸರ್ಕಾರಿ ಭೂಮಿ ಅತಿಕ್ರಮಣದ ಬಗ್ಗೆ ಸವಿಸ್ತೃತ ಮಾಹಿತಿ ಕೋರಿ ಸುಮಾರು 90 ಅರ್ಜಿ ಸಲ್ಲಿಸಿದ್ದ ಆರ್​ಟಿಐ ಕಾರ್ಯಕರ್ತ ಇಂದು ಹತ್ಯೆಗೀಡಾಗಿದ್ದಾನೆ. ಈ ಘಟನೆ ನಡೆದಿದ್ದು ಬಿಹಾರದ ಪೂರ್ವ ಚಂಪಾರಣ್​​ನ ಹರ್ಸಿದ್ದಿ ಎಂಬಲ್ಲಿ.  ಇಂದು ಬೆಳಗ್ಗೆ 11.30ರ ಹೊತ್ತಿಗೆ ಈ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಆರ್​ಟಿಐ ಕಾರ್ಯಕರ್ತನನ್ನು ಬಿಪಿನ್​ ಅಗರ್​ವಾಲ್​ (45)  ಎಂದು ಗುರುತಿಸಲಾಗಿದೆ. ಮೋಟಾರ್​ಬೈಕ್​​ನಲ್ಲಿ ಬಂದ ಅಪರಿಚಿತ ದುರ್ಷರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಮಾಹಿತಿ ಸಿಕ್ಕಿದೆ.  

ಬಿಪಿನ್​ ಅಗರ್​ವಾಲ್ ಸರ್ಕಾರಿ ಭೂಮಿಯ ಒತ್ತುವರಿ ಬಗ್ಗೆ ಮಾಹಿತಿ ಕೇಳಿದ್ದರು. ಇವರ ಮೇಲೆ ಹಿಂದೆಯೂ ಒಮ್ಮೆ ದಾಳಿ ನಡೆದಿತ್ತು. ಇತ್ತೀಚೆಗಷ್ಟೇ ಪೊಲೀಸ್​ ರಕ್ಷಣೆ ಕೇಳಿದ್ದರು.  ಇನ್ನು ಅಗರ್​ವಾಲ್​ ಮೇಲೆ ನಡೆದ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಇನ್ನೊಬ್ಬ ಆರ್​ಟಿಐ ಕಾರ್ಯಕರ್ತ ಶಿವ್​ ಪ್ರಕಾಶ್​ ರಾಯ್​, ಸರ್ಕಾರಿ ಭೂಮಿ ಒತ್ತುವರಿಗೆ ಸಂಬಂಧಪಟ್ಟಂತೆ ಬಿಪಿನ್​ ಅಗರ್​ವಾಲ್​ ಹಲವು ಅರ್ಜಿ ಸಲ್ಲಿಸಿದ್ದರು. ಆದರೆ ಈ ರಾಜ್ಯದಲ್ಲಿ ಆರ್​ಟಿಐ ಕಾರ್ಯಕರ್ತರನ್ನು ಟಾರ್ಗೆಟ್​ ಮಾಡಲಾಗುತ್ತದೆ ಎಂಬುದಕ್ಕೆ ಈ ದಾಳಿಯೇ ಸಾಕ್ಷಿ ಎಂದು ಆರೋಪಿಸಿದ್ದಾರೆ.

Video: ಹೆಣ್ಣುಮಕ್ಕಳ ಶಿಕ್ಷಣದ ಬಗ್ಗೆ ಗಟ್ಟಿಯಾಗಿ ಮಾತನಾಡಿದ ಅಫ್ಘಾನ್​ ಬಾಲಕಿ; ತಾಲಿಬಾನಿಗಳೆದುರು ಹುಡುಗಿಯ ದಿಟ್ಟತನ

ಬೆಂಗಳೂರಿನಲ್ಲಿ ತುಪ್ಪ ಮಾರಾಟದ ನೆಪದಲ್ಲಿ ದರೋಡೆ ಮಾಡುತ್ತಿದ್ದ ತಂಡ ಬಂಧನ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ