AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಜ್ಯ ಪ್ರಯಾಣಕ್ಕೆ ಆರ್​ಟಿ-ಪಿಸಿಆರ್​ ರಿಪೋರ್ಟ್ ಕಡ್ಡಾಯವಲ್ಲ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಐಸಿಎಂಆರ್​

ಜ್ವರ, ನೆಗಡಿ, ಕೆಮ್ಮಿನಿಂತ ಲಕ್ಷಣ ಇರುವವರು ಸಾಧ್ಯವಾದಷ್ಟು ಮಟ್ಟಿಗೆ ಪ್ರಯಾಣವನ್ನು ಕಡಿಮೆ ಮಾಡಬೇಕು. ಅನಿವಾರ್ಯ ಇಲ್ಲ ಎಂದರೆ ಒಂದುಕಡೆಯಿಂದ ಇನ್ನೊಂದು ಕಡೆಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು ಎಂದು ಐಸಿಎಂಆರ್​ ತಿಳಿಸಿದೆ.

ಅಂತಾರಾಜ್ಯ ಪ್ರಯಾಣಕ್ಕೆ ಆರ್​ಟಿ-ಪಿಸಿಆರ್​ ರಿಪೋರ್ಟ್ ಕಡ್ಡಾಯವಲ್ಲ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಐಸಿಎಂಆರ್​
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 04, 2021 | 10:01 PM

Share

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚುತ್ತಿರುವ ಬೆನ್ನಲ್ಲೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಆರ್​ಟಿ-ಪಿಸಿಆರ್​ ಪರೀಕ್ಷೆಗೆ ಸಂಬಂಧಪಟ್ಟಂತೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸದ್ಯ ಕೊವಿಡ್​ 19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಲ್ಯಾಬೋರೇಟರಿಗಳಲ್ಲಿ ಆರ್​ಟಿ ಪಿಸಿಆರ್​ ಟೆಸ್ಟ್ ದೊಡ್ಡ ಸವಾಲಾಗಿ ಕಾಡುತ್ತಿದೆ. ಈ ಮಧ್ಯೆ ಅಗತ್ಯ ಇರುವ ಎಲ್ಲ ನಾಗರಿಕರಿಗೆ ಉತ್ತಮವಾಗಿ ಆರ್​ಟಿ-ಪಿಸಿಆರ್ ಟೆಸ್ಟ್ ಮಾಡಿಸಲೇಬೇಕು ಎಂದು ಐಸಿಎಂಆರ್​ ಹೇಳಿದ್ದು, ಅದಕ್ಕೆ ತಕ್ಕಂತೆ ತನ್ನ ಹೊಸ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.

ಐಸಿಎಂಆರ್​ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಅನ್ವಯ ನಿಯಮಗಳು ಹೀಗಿವೆ: 1. ಒಮ್ಮೆ ಒಬ್ಬ ವ್ಯಕ್ತಿಗೆ ಆ್ಯಂಟಿಜೆನ್ ರ್ಯಾಪಿಡ್​ ಟೆಸ್ಟ್ ಅಥವಾ ಆರ್​ಟಿಪಿಸಿಆರ್​ ಟೆಸ್ಟ್ ಮಾಡಿಸಿ ಅದರಲ್ಲಿ ಕೊವಿಡ್ 19 ಪಾಸಿಟಿವ್​ ಎಂದು ವರದಿ ಬಂದರೆ ಮತ್ತೊಮ್ಮೆ ಆರ್​ಟಿ-ಪಿಸಿಆರ್ ತಪಾಸಣೆಗೆ ಒಳಗಾಗುವ ಅಗತ್ಯವಿಲ್ಲ. 2.ಕೊವಿಡ್ 19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ಚೇತರಿಸಿಕೊಂಡು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿಯಮದ ಅನುಸಾರ ಡಿಸ್​ಚಾರ್ಜ್ ಆಗುವ ಹೊತ್ತಲ್ಲಿ ಅವರಿಗೆ ಮತ್ತೆ ಆರ್​ಟಿ-ಪಿಸಿಆರ್​ ಟೆಸ್ಟ್ ಮಾಡಿಸಬೇಕಿಲ್ಲ. 3. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಯಾರಾದರೂ ಪ್ರಯಾಣ ಮಾಡಬೇಕು ಅಂತಿದ್ದು, ಅವರಲ್ಲಿ ಕೊರೊನಾದ ಯಾವುದೇ ಲಕ್ಷಣ ಇಲ್ಲದಿದ್ದರೆ ಅಂಥವರು ಆರ್​ಟಿ-ಪಿಸಿಆರ್ ತಪಾಸಣೆಗೆ ಒಳಗಾಗುವುದು ಬೇಡ. ಆರ್​ಎಟಿ ತಪಾಸಣೆ ಸಾಕು. 4. ಜ್ವರ, ನೆಗಡಿ, ಕೆಮ್ಮಿನಿಂತ ಲಕ್ಷಣ ಇರುವವರು ಸಾಧ್ಯವಾದಷ್ಟು ಮಟ್ಟಿಗೆ ಪ್ರಯಾಣವನ್ನು ಕಡಿಮೆ ಮಾಡಬೇಕು. ಅನಿವಾರ್ಯ ಇಲ್ಲ ಎಂದರೆ ಒಂದುಕಡೆಯಿಂದ ಇನ್ನೊಂದು ಕಡೆಗೆ ಹೋಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು. ಅಂತಾರಾಜ್ಯ ಪ್ರಯಾಣವೂ ಬೇಡ. ಅದಕ್ಕಾಗಿ ಆರ್​ಟಿ-ಪಿಸಿಆರ್ ಟೆಸ್ಟ್​ ಮಾಡಿಸುವುದು ಬೇಡ. 5. ರಾಜ್ಯಸರ್ಕಾರಗಳು ಸಂಚಾರಿ ವ್ಯವಸ್ಥೆಯ ಮೂಲಕ ಉತ್ತಮ ಗುಣಮಟ್ಟದ ಆರ್​ಟಿ-ಪಿಸಿಆರ್​ ಟೆಸ್ಟ್​ನ್ನು ಹೆಚ್ಚಿಸಬೇಕು.

ರ್ಯಾಪಿಡ್​ ಆ್ಯಂಟಿಜೆನ್​ ಟೆಸ್ಟ್​ ಹೆಚ್ಚಿಸಲು ಕ್ರಮಗಳು RAT (Rapid Antigen Test) ತಪಾಸಣೆಯನ್ನು ಎಲ್ಲ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮಾಡಲಾಗುವುದು.

ಹಾಗೇ ಆರ್​ಎಟಿ ತಪಾಸಣೆಗೆಂದೇ ಎಲ್ಲ ನಗರಗಳಲ್ಲಿ, ಪಟ್ಟಣಗಳು, ಹಳ್ಳಿಗಳಲ್ಲಿ ಬೂತ್​​ಗಳನ್ನು ಸ್ಥಾಪಿಸಬೇಕು. ಎಲ್ಲ ರೀತಿಯ ಆರೋಗ್ಯ ವ್ಯವಸ್ಥೆಗಳು, ಆರ್​​ಡಬ್ಲ್ಯೂಎ, ಎಲ್ಲ ಕಚೇರಿಗಳು, ಶಾಲೆ-ಕಾಲೇಜುಗಳು, ಸಮುದಾಯ ಕೇಂದ್ರಗಳಲ್ಲೂ RAT ತಪಾಸಣಾ ಕೇಂದ್ರಗಳನ್ನು ನಿರ್ಮಿಸಬಹುದು.

ಹೀಗೆ ಸ್ಥಾಪಿಸಲಾದ ಬೂತ್​ಗಳಲ್ಲಿ ಸೇವೆ 24ಗಂಟೆಯೂ ಲಭ್ಯ ಇರಬೇಕು. ಅಂದರೆ ಟೆಸ್ಟಿಂಗ್​ ಇಡೀ ದಿನ ನಡೆಯುತ್ತಿರಬೇಕು.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಬಂಧಿತರಾಗಿದ್ದವರಿಗೆ ಜಾಮೀನು

Karnataka Covid 19 update: ರಾಜ್ಯದಲ್ಲಿ ಇಂದು 44,631 ಕೊರೊನಾ ಕೇಸ್​ಗಳು ದಾಖಲು; ಇದರಲ್ಲಿ ಅರ್ಧದಷ್ಟು ಬೆಂಗಳೂರಿನಲ್ಲೇ !

ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮಂಡ್ಯ ರೈತರ ಆಕ್ರೋಶಕ್ಕೆ ಮಣಿದು ತಡರಾತ್ರಿ ನೀರು ಬಿಡುಗಡೆ ಮಾಡಿದ ಸರ್ಕಾರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಹೃದಯ ತಪಾಸಣೆಗೆ ಮುಗಿಬಿದ್ದ ಜನಸಾಗರ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ