AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

370ನೇ ವಿಧಿ​ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್​ ಪ್ರದರ್ಶನ, ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಹೊಡೆದಾಟ

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟ ನಡೆಯಿತು.

ನಯನಾ ರಾಜೀವ್
|

Updated on:Nov 07, 2024 | 11:11 AM

Share

ಸಂವಿಧಾನದ 370ನೇ ವಿಧಿ ಜಾರಿ ನಿರ್ಣಯ ಬೆಂಬಲಿಸಿ ಬ್ಯಾನರ್ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಟಿಯಾಯಿತು. ಅವಾಮಿ ಇತ್ತೆಹಾದ್ ಪಕ್ಷದ ಶಾಸಕ ಖುರ್ಷಿದ್ ಅಹಮದ್ ಬ್ಯಾನರ್ ಪ್ರದರ್ಶಿಸಿದ್ದರು. ಇದಕ್ಕೆ ಬಿಜೆಪಿ ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್​ ಕಿತ್ತುಕೊಳ್ಳಲು ಮುಂದಾದ ಬಿಜೆಪಿ ಶಾಸಕರು, ಪಿಡಿಪಿ, ಎನ್​ಸಿ ಶಾಸಕರ ನಡುವೆ ಹೊಡೆದಾಟವೇ ನಡೆಯಿತು.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಅಂಗೀಕರಿಸಿದೆ.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದರು.

ವಿಪಕ್ಷ ಬಿಜೆಪಿ ಸದಸ್ಯರು ಗೊತ್ತುವಳಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪದ ಪಟ್ಟಿಯಲ್ಲಿ ಇರದ ವಿಷಯುವನ್ನು ಮಂಡಿಸಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ. ಸಂಸತ್ ಕೈಗೊಂಡ ನಿರ್ಧಾರವನ್ನು ಬದಲಾಯಿಸಲಾಗದು ಎಂದು ಗೊತ್ತಿದ್ದರೂ ಪ್ರಚಾರಕ್ಕಾಗಿ ಸುಮ್ಮನೆ ಗದ್ದಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ವೇಳೆ ಗದ್ದಲ ಉಂಟಾಗಿದೆ.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ಮರು ಸ್ಥಾಪನೆ ನಿರ್ಣಯ ಅಂಗೀಕರಿಸಿದ ಒಮರ್ ಸರ್ಕಾರ

ಇದಾದ ನಂತರ ವಿರೋಧ ಪಕ್ಷದ ನಾಯಕ ಸುನೀಲ್ ಶರ್ಮಾ ಬ್ಯಾನರ್ ತೋರಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಗದ್ದಲದ ನಂತರ ಮಾರ್ಷಲ್‌ಗಳು ಮಧ್ಯಪ್ರವೇಶಿಸಿ ಶಾಸಕರನ್ನು ಪ್ರತ್ಯೇಕಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:10 am, Thu, 7 November 24

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ