AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಮತ್ತು ಜಪಾನಿನ ಪಾರಂಪರಿಕ ಮತ್ತು ಸಾಂಸ್ಕೃತಿಕ ಅಭಿರುಚಿಗಳ ಸಂಕೇತವಾಗಿದೆ ಈ ರುದ್ರಾಕ್ಷ್ ಸಮಾವೇಶ ಕೇಂದ್ರ

ಎರಡು ಅಂತಸ್ತಿನ ಕಟ್ಟಡವಾಗಿರುವ ರುದ್ರಾಕ್ಷ್​ನ ಮುಖ್ಯ ಹಾಲ್ ಗೋಪುರವನ್ನೊಳಗೊಂಡಿದ್ದು ಅಲ್ಲಿ 1,200 ಜನರು ಆಸೀನರಾಬಹುದು. ಗ್ಯಾಲರಿ, ಸಭೆ ನಡೆಸಲ‘ಲು ರೂಮುಗಳು ಮತ್ತು ಸುಮಾರ 120 ಕಾರುಗಳನ್ನು ಪಾರ್ಕ್ ಮಾಡುವಷ್ಟು ಸ್ಥಳಾವಕಾಶ ಇಲ್ಲಿದೆ.

ಭಾರತ ಮತ್ತು ಜಪಾನಿನ ಪಾರಂಪರಿಕ ಮತ್ತು ಸಾಂಸ್ಕೃತಿಕ ಅಭಿರುಚಿಗಳ ಸಂಕೇತವಾಗಿದೆ ಈ ರುದ್ರಾಕ್ಷ್ ಸಮಾವೇಶ ಕೇಂದ್ರ
ರುದ್ರಾಕ್ಷ್ ಸಮಾವೇಶ ಕೇಂದ್ರ, ವಾರಣಾಸಿ
TV9 Web
| Edited By: |

Updated on: Jul 16, 2021 | 7:48 AM

Share

ವಾರಣಾಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ವಾರಣಾಸಿಯಲ್ಲಿ ರುದ್ರಾಕ್ಷ್​ ಎಂದು ಕರೆಸಿಕೊಳ್ಳುವ ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಜಪಾನ್ ಮತ್ತು ಭಾರತದ ನಾಗರಿಕತೆ ಹಾಗೂ ಎರಡು ರಾಷ್ಟ್ರಗಳ ನಡುವಿನ ಪಾರಂಪರಿಕ ಮತ್ತು ಸಾಂಸ್ಕೃತಿಕ ಹೋಲಿಕೆಗಳ ಆಧಾರದಲ್ಲಿ ನಿರ್ಮಿಸಲಾಗಿರುವ ರುದ್ರಾಕ್ಷ್ ಕಟ್ಟಡವು ಸುಮಾರು 2.87 ಭೂಪ್ರದೇಶವನ್ನು ಆವರಿಸಿದೆ. ಆರಂಭದಿಂದಲೂ ಮಿತ್ರರಾಷ್ಟ್ರಗಳಾಗಿರುವ ಭಾರತ ಮತ್ತು ಜಪಾನ್ ನಡುವಿನ ಸ್ನೇಹವನ್ನು ಮತ್ತಷ್ಟು ಬಲಪಡಿಸಿದ್ದು ಪ್ರಧಾನಿ ಮೋದಿ ಮತ್ತು ಜಪಾನಿನ ಹಿಂದಿನ ಪ್ರಧಾನ ಮಂತ್ರಿ ಶಿಂಜೊ ಅಬಿ ಅವರು. ನಾಯಕರು ಪರಸ್ಪರರ ದೇಶಗಳಿಗೆ ಭೇಟಿ ನೀಡಿ ಎರಡು ದೇಶಗಳ ನಡುವಿನ ಪರಂಪರೆ, ಸಂಪ್ರದಾಯ ಮತ್ತು ಸಾಂಸ್ಕೃತಿಕ ಅಭಿರುಚಿಗಳು ಒಂದೇ ತೆರನಾಗಿರುವದನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಇದರ ಫಲಶೃತಿಯೇ ಭವ್ಯವಾಗಿ ಎದ್ದು ನಿಂತಿರುವ ರುದ್ರಾಕ್ಷ್ ಕಟ್ಟಡ. ಜಪಾನಿನ ಕ್ಯುಟೋ ಎಂಬ ಪ್ರದೇಶ ಮತ್ತು ಕಾಶಿ ನಡುವಿನ ಸಾಂಪ್ರದಾಯಿಕ ಮತ್ತು ಪಾರಂಪರಿಕ ಅಂಶಗಳಲ್ಲಿ ಕಂಡುಬರುವ ಸಮಾನತೆಗಳು ಈ ಕಟ್ಟಡದಲ್ಲಿ ಸಮ್ಮಿಳಿತಗೊಂಡಿವೆ.

ಎರಡು ಅಂತಸ್ತಿನ ಕಟ್ಟಡವಾಗಿರುವ ರುದ್ರಾಕ್ಷ್​ನ ಮುಖ್ಯ ಹಾಲ್ ಗೋಪುರವನ್ನೊಳಗೊಂಡಿದ್ದು ಅಲ್ಲಿ 1,200 ಜನರು ಆಸೀನರಾಬಹುದು. ಗ್ಯಾಲರಿ, ಸಭೆ ನಡೆಸಲ‘ಲು ರೂಮುಗಳು ಮತ್ತು ಸುಮಾರ 120 ಕಾರುಗಳನ್ನು ಪಾರ್ಕ್ ಮಾಡುವಷ್ಟು ಸ್ಥಳಾವಕಾಶ ಇಲ್ಲಿದೆ.

ಕಟ್ಟಡದ ಸಮಾವೇಶ ಕೇಂದ್ರದಲ್ಲಿ 108 ರುದ್ರಾಕ್ಷಗಳನ್ನು ಅಳವಡಿಸಲಾಗಿದೆ ಮತ್ತ ಅದರ ಮೇಲ್ಛಾವಣಿಯನ್ನು ಶಿವ ಲಿಂಗದ ಆಕಾರದಲ್ಲಿ ವಿನ್ಯಾಸಗೊಳಿಸಲಾಗಿದೆ.

https://drive.google.com/file/d/16mAazwZJmEI0eRFqUPsHXRb9qlUL1Dtb/view

ಜನರು ಸಾಮಾಜಿಕ ಮತ್ತು ಸಾಂಸ್ಕೃತಿಕ ಸಮಾಲೋಚನೆಗಳನ್ನು ನಡೆಸಲು ಅನುಕೂಲವಾಗುವುದಕ್ಕೋಸ್ಕರ ಅಂತರರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರವನ್ನು ನಿರ್ಮಿಸಲಾಗಿದೆ ಎಂದು ಮೂಲಗಳು ತಿಳಿಸುತ್ತವೆ.

ಅಂತರಾಷ್ಟ್ರೀಯ ಸಮಾವೇಶಗಳು, ವಸ್ತು ಮತ್ತು ಕಲಾ ಪ್ರದರ್ಶನಗಳು, ಸಂಗೀತ ಕಛೇರಿ ಮತ್ತು ಸಂಗೀತ ಸಂಜೆ ಸೇರಿದಂತೆ ಇನ್ನೂ ಅನೇಕ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲು ರುದ್ರಾಕ್ಷ್ ಅತ್ಯಂತ ಸೂಕ್ತ ಸ್ಥಳವಾಗಿದೆ. ಇಲ್ಲಿನ ಗ್ಯಾಲರಿಯನ್ನು ವಾರಣಾಸಿಯ ಕಲೆ, ಸಂಸ್ಕೃತಿ ಮತ್ತು ಸಂಗೀತವನ್ನು ಬಿಂಬಿಸುವಂತೆ ನಿರ್ಮಿಸಲಾಗಿದೆ ಎಂದು ಮೂಲಗಳು ಹೇಳಿವೆ.

ಮಾಹಿತಿಯೊಂದರ ಪ್ರಕಾರ ರುದ್ರಾಕ್ಷ್ ಕಟ್ಟಡವು ಸಂಪೂರ್ಣವಾಗಿ ಪರಿಸರ ಸ್ನೇಹಿಯಾಗಿದೆ ಮತ್ತು ಗ್ರೀನ್ ರೇಟಿಂಗ್ ಫಾರ್ ಇಂಟಿಗ್ರೇಟೆಡ್ ಹ್ಯಾಬಿಟಾಟ್ ಅಸ್ಸೆಸ್​ಮೆಂಟ್ (ಜಿಆರ್​ಐಎಚ್​ಎ)ನ ಮೂರನೇ ಹಂತಕ್ಕೆ ಆರ್ಹವಾಗಿದೆ

ವಾರಾಣಾಸಿಗೆ ತಮ್ಮ ಭೇಟಿಯ ಅವಧಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸುಮಾರು 1,500 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಗೆ ಶಂಕಸ್ಥಾಪನೆ ನೆರವೇರಿಸಲಿದ್ದಾರೆ.

ಇದನ್ನೂ ಓದಿ: PM Modi Varanasi Visit: ಕಾಶಿ ಮೆಡಿಕಲ್​ ಹಬ್​ ಆಗಿ ಬದಲಾಗುತ್ತಿದೆ..ಯೋಗಿ ಜೀ ಅವರಿಂದ ಉತ್ತರಪ್ರದೇಶ ಅಭಿವೃದ್ಧಿಯಾಗುತ್ತಿದೆ: ಪ್ರಧಾನಿ ಮೋದಿ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ