AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಈ ಬಾರಿಯೂ ಇ.ಡಿ. ವಿಚಾರಣೆಗೆ ಹಾಜರಾಗದ ಅಭಿಷೇಕ್ ಬ್ಯಾನರ್ಜಿ ಪತ್ನಿ

ಅಭಿಷೇಕ್​ ಬ್ಯಾನರ್ಜಿಯನ್ನು ಸೋಮವಾರ ಸುಮಾರು 8 ತಾಸುಗಳ ಕಾಲ ಇ.ಡಿ.ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಇ.ಡಿ. ತಮ್ಮನ್ನು ದೆಹಲಿಗೆ ಕರೆಸಿ ವಿಚಾರಣೆ ನಡೆಸುತ್ತಿರುವುದಕ್ಕೆ ಅಭಿಷೇಕ್​ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಈ ಬಾರಿಯೂ ಇ.ಡಿ. ವಿಚಾರಣೆಗೆ ಹಾಜರಾಗದ ಅಭಿಷೇಕ್ ಬ್ಯಾನರ್ಜಿ ಪತ್ನಿ
ಅಭಿಷೇಕ್ ಬ್ಯಾನರ್ಜಿ ಮತ್ತು ರುಜಿರಾ ಬ್ಯಾನರ್ಜಿ
TV9 Web
| Edited By: |

Updated on: Mar 22, 2022 | 3:46 PM

Share

ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ನೋಟಿಸ್ ಪಡೆದಿರುವ ತೃಣಮೂಲ ಕಾಂಗ್ರೆಸ್​ ಸಂಸದ, ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಸಂಬಂಧಿ ಅಭಿಷೇಕ್​ ಬ್ಯಾನರ್ಜಿಯವರ ಪತ್ನಿ ರುಜಿರಾ ಬ್ಯಾನರ್ಜಿ ಈ ಬಾರಿಯೂ ವಿಚಾರಣೆಗೆ ಹಾಜರಾಗಿಲ್ಲ ಎಂಬ ಬಗ್ಗೆ ಮಾಹಿತಿ ಸಿಕ್ಕಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ. ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣದಲ್ಲಿ ಅಭಿಷೇಕ್​ ಬ್ಯಾನರ್ಜಿ ಮತ್ತು ರುಜಿರಾ ಬ್ಯಾನರ್ಜಿ ಇಬ್ಬರಿಗೂ ಇ.ಡಿ. ನೋಟಿಸ್​ ನೀಡಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇ.ಡಿ. ವಿಚಾರಣೆಯಿಂದ ನಮಗೆ ವಿನಾಯಿತಿ ನೀಡಬೇಕು ಎಂದು ದಂಪತಿ ದೆಹಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಯಾವುದೇ ವಿನಾಯಿತಿ ನೀಡದ ಹಿನ್ನೆಲೆಯಲ್ಲಿ ಮಂಗಳವಾರ (ಮಾ.22) ವಿಚಾರಣೆಗೆ ಹಾಜರಾಗುವಂತೆ ರುಜಿರಾಗೆ ಇ.ಡಿ.ನೋಟಿಸ್​ ನೀಡಿತ್ತು. ಹಾಗಿದ್ದಾಗ್ಯೂ ರುಜಿರಾ ಆಗಮಿಸಿಲ್ಲ ಎನ್ನಲಾಗಿದೆ.

ಇನ್ನು ಅಭಿಷೇಕ್​ ಬ್ಯಾನರ್ಜಿಯನ್ನು ಸೋಮವಾರ ಸುಮಾರು 8 ತಾಸುಗಳ ಕಾಲ ಇ.ಡಿ.ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೆ ಇ.ಡಿ. ತಮ್ಮನ್ನು ದೆಹಲಿಗೆ ಕರೆಸಿ ವಿಚಾರಣೆ ನಡೆಸುತ್ತಿರುವುದಕ್ಕೆ ಅಭಿಷೇಕ್​ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇ.ಡಿ. ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುತ್ತಿದೆ. ನನ್ನನ್ನು ಮತ್ತು ನನ್ನ ಪತ್ನಿಯನ್ನು ಅಧಿಕಾರಿಗಳು ಕೋಲ್ಕತ್ತದಲ್ಲೇ ವಿಚಾರಣೆ ನಡೆಸಲಿ, ಅದು ಬಿಟ್ಟು ದೆಹಲಿಗೆ ಯಾಕೆ ಕರೆಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇನ್ನು ರುಜಿರಾ ಬ್ಯಾನರ್ಜಿ ಈ ಹಿಂದೆ 2021ರ ಸೆಪ್ಟೆಂಬರ್​​ನಲ್ಲಿ ಕೂಡ ಇ.ಡಿ.ವಿಚಾರಣೆಯನ್ನು ತಪ್ಪಿಸಿಕೊಂಡಿದ್ದರು. ಕೊವಿಡ್ 19 ಸಾಂಕ್ರಾಮಿಕವಿದೆ. ನಾನೀಗ ದೆಹಲಿಗೆ ಪ್ರಯಾಣ ಮಾಡುವುದು ಅಪಾಯ. ನನಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ. ನನಗೇನಾದರೂ ಆದರೆ, ಅವರಿಗೂ ಅಪಾಯ. ಹೀಗಾಗಿ ದೆಹಲಿಗೆ ಬರುವುದಿಲ್ಲ ಎಂದು ಆಗಸ್ಟ್​ 31ರಂದು ಇ.ಡಿ.ತನಿಖಾಧಿಕಾರಿಗಳಿಗೆ ಪತ್ರ ಬರೆದಿದ್ದರು.

ಭಿಷೇಕ್ ಬ್ಯಾನರ್ಜಿ ಲೋಕಸಭೆಯಲ್ಲಿ ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್ ಸ್ಥಾನವನ್ನು ಪ್ರತಿನಿಧಿಸುತ್ತಿದ್ದು, ತೃಣಮೂಲ ಕಾಂಗ್ರೆಸ್ (TMC) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಅಸನ್ಸೋಲ್ ಮತ್ತು ಸುತ್ತಮುತ್ತಲಿನ ಕುನುಸ್ತೋರಿಯಾ ಮತ್ತು ಕಾಜೋರಾ ಪ್ರದೇಶಗಳಲ್ಲಿನ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಕಳ್ಳತನ ಹಗರಣದ ಆರೋಪದ ಮೇಲೆ ಸಿಬಿಐಯ 2020 ರ ಎಫ್‌ಐಆರ್ ಅನ್ನು ಅಧ್ಯಯನ ಮಾಡಿದ ನಂತರ ಇಡಿ ಪಿಎಂಎಲ್‌ಎ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಅಂದಿನಿಂದಲೂ ತನಿಖೆ ನಡೆಯುತ್ತಿದ್ದು, ಕಳೆದ ವರ್ಷ ಫೆಬ್ರವರಿಯಲ್ಲಿಯೇ ಈ ದಂಪತಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಬಾಯಿಯ ದುರ್ವಾಸನೆಗೆ ಕಾರಣವಾಗುವ ಮತ್ತು ತಡೆಯುವ ಆಹಾರಗಳು ಯಾವುವು? ಇಲ್ಲಿದೆ ಮಾಹಿತಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು