AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಧರ್ಮಶಾಲಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶತ್ರು ರಾಷ್ಟ್ರಗಳಾದ ರಷ್ಯಾ- ಉಕ್ರೇನ್ ವಧು-ವರರು

ರಷ್ಯಾ ಮತ್ತು ಉಕ್ರೇನ್ ನಡುವೆ ದೀರ್ಘ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ ಪ್ರೀತಿಯಿಂದ ಈ ದೇಶಗಳ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಒಟ್ಟಿಗೇ ಬದುಕಲು ನಿರ್ಧರಿಸಿದ್ದಾರೆ.

Big News: ಧರ್ಮಶಾಲಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶತ್ರು ರಾಷ್ಟ್ರಗಳಾದ ರಷ್ಯಾ- ಉಕ್ರೇನ್ ವಧು-ವರರು
ಉಕ್ರೇನ್- ರಷ್ಯಾದ ವಧು- ವರರುImage Credit source: DNA
TV9 Web
| Updated By: ಸುಷ್ಮಾ ಚಕ್ರೆ|

Updated on: Sep 06, 2022 | 11:07 AM

Share

ಹಿಮಾಚಲ ಪ್ರದೇಶ: ಪ್ರೀತಿ ಎಲ್ಲವನ್ನೂ ಗೆಲ್ಲುತ್ತದೆ, ಪ್ರೀತಿಯಿಂದ ಎಲ್ಲರನ್ನೂ ಗೆಲ್ಲಬಹುದು ಎಂಬುದು ಅಕ್ಷರಶಃ ಸತ್ಯ. ರಷ್ಯಾ (Russia) ಮೂಲದ ವರ ಮತ್ತು ಉಕ್ರೇನಿಯನ್ (Ukranian) ಮೂಲದ ವಧು ಸೋಮವಾರ ಧರ್ಮಶಾಲಾದಲ್ಲಿ (Dharmashala) ವಿವಾಹವಾಗಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ದೀರ್ಘ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ ಪ್ರೀತಿಯಿಂದ ಈ ದೇಶಗಳ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಒಟ್ಟಿಗೇ ಬದುಕಲು ನಿರ್ಧರಿಸಿದ್ದಾರೆ. ಅಲ್ಲದೆ, “ಪ್ರೀತಿ ಮಾಡಬೇಕೇ ಹೊರತು ಯುದ್ಧವನ್ನಲ್ಲ” ಎಂದು ಅವರಿಬ್ಬರೂ ಸಂದೇಶ ರವಾನಿಸಿದ್ದಾರೆ.

ತಮ್ಮ ಮದುವೆಯ ಬಗ್ಗೆ ಮಾತನಾಡಿರುವ ವರ ಸೆರ್ಗೆ ನೊವಿಕೋವ್, ನಾವು ಇಸ್ರೇಲ್ ಮತ್ತು ಉಕ್ರೇನ್‌ನಿಂದ ಇಲ್ಲಿಗೆ ಬಂದಿದ್ದೇವೆ. ನಾವು ಕಳೆದ ವರ್ಷ ಭಾರತಕ್ಕೆ ಬಂದಿದ್ದೇವೆ. ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಇದು ವಿಶೇಷ ಸ್ಥಳ ಎಂದು ನಿರ್ಧರಿಸಿದ ನಾವು ಧರ್ಮಶಾಲಾದಲ್ಲಿ ಮದುವೆಯಾಗಿದ್ದೇವೆ. ಹಿಂದೆ ರಷ್ಯಾ ಮತ್ತು ಉಕ್ರೇನ್ ಸಹೋದರರಂತೆ ಇದ್ದವು. ಈಗ ಬದ್ಧ ವೈರಿಗಳಾಗಿವೆ. ನಾವು ಪ್ರೀತಿ ಮಾಡಬೇಕೇ ಹೊರತು ಯುದ್ಧವನ್ನಲ್ಲ ಎಂದಿದ್ದಾರೆ.

ಇದನ್ನೂ ಓದಿ: Kerala: ಕೇರಳದ ಸಿಎಂ ಮುಂದೆ ಮದುವೆಯಾದ ದೇಶದ ಅತ್ಯಂತ ಕಿರಿಯ ಮೇಯರ್, ಕೇರಳದ ಅತ್ಯಂತ ಕಿರಿಯ ಶಾಸಕ

“ನಾನು ಇಸ್ರೇಲ್​ನಲ್ಲಿ ಸೆರ್ಗೆಯನ್ನು ಭೇಟಿಯಾದೆ. ನಾವು ಸುಮಾರು 6 ವರ್ಷಗಳಿಂದ ಒಟ್ಟಿಗೆ ಇದ್ದೇವೆ. ನಾವು ಭಾರತಕ್ಕೆ ಬಂದಾಗ ಇಲ್ಲಿಯೇ ನಾವು ಮದುವೆಯಾಗಲು ನಿರ್ಧರಿಸಿದೆವು. ನಾವು ಭಾರತ ಮತ್ತು ಇಲ್ಲಿನ ಸಂಸ್ಕೃತಿಯನ್ನು ಇಷ್ಟಪಡುತ್ತೇವೆ. ಭಾರತದ ಸಂಸ್ಕೃತಿ ತುಂಬಾ ಸುಂದರವಾಗಿದೆ ಎಂದು ವಧು ಅಲೋನಾ ಬರ್ಮಾಕಾ ಹೇಳಿದ್ದಾರೆ. ವಿಶೇಷ ವಿವಾಹ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಇವರಿಬ್ಬರ ವಿವಾಹವನ್ನು ನೋಂದಾಯಿಸಲಾಗಿದೆ. ವಧು ಉಕ್ರೇನಿಯನ್ ಪ್ರಜೆಯಾಗಿದ್ದು, ವರನು ರಷ್ಯಾ ಮೂಲದ ಇಸ್ರೇಲಿ ಪ್ರಜೆಯಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ