AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಷ್ಯಾದ ಸ್ಪುಟ್ನಿಕ್ ಕೊವಿಡ್ ಲಸಿಕೆ ಮುಂದಿನ ವಾರ ಲಭ್ಯ ಸಾಧ್ಯತೆ: ಕೇಂದ್ರ ಸರ್ಕಾರ

Sputnik V Covid19 Vaccine: ಕಳೆದ ವರ್ಷ ಆಗಸ್ಟ್ 11 ರಂದು ರಷ್ಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಮೊದಲು ಅನುಮೋದನೆ ನೀಡಲಾಯಿತು. ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದಂತೆ ಇದು ಶೇ 91.6 ನಷ್ಟು ಪರಿಣಾಮಕಾರಿತ್ವ ಹೊಂದಿದೆ. 50 ಕ್ಕೂ ಹೆಚ್ಚು ದೇಶಗಳಲ್ಲಿ ಸಾಮೂಹಿಕ ಬಳಕೆಗಾಗಿ ಅನುಮೋದಿಸಲಾಗಿದೆ.

ರಷ್ಯಾದ ಸ್ಪುಟ್ನಿಕ್ ಕೊವಿಡ್ ಲಸಿಕೆ ಮುಂದಿನ ವಾರ ಲಭ್ಯ ಸಾಧ್ಯತೆ: ಕೇಂದ್ರ ಸರ್ಕಾರ
ಸ್ಪುಟ್ನಿಕ್​ ವಿ ಲಸಿಕೆ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2021 | 6:55 PM

Share

ದೆಹಲಿ:  ರಷ್ಯಾದ ಗಮಲೇಯ ರಾಷ್ಟ್ರೀಯ ಕೇಂದ್ರವು ಅಭಿವೃದ್ಧಿಪಡಿಸಿದ ಕೊವಿಡ್19 ವಿರುದ್ಧದ ಲಸಿಕೆ ಸ್ಪುಟ್ನಿಕ್ V ಮುಂದಿನ ವಾರದ ಆರಂಭದಲ್ಲಿ ದೇಶದಾದ್ಯಂತ ಮಾರುಕಟ್ಟೆಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.  ದೇಶದ ಕೋವಿಡ್ -19 ಪರಿಸ್ಥಿತಿ ಕುರಿತು ಗುರುವಾರ ಆರೋಗ್ಯ ಸಚಿವಾಲಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪೌಲ್, ಸಾಂಕ್ರಾಮಿಕ ರೋಗ ವಿರುದ್ಧ ಹೋರಾಡುವ ವಿಶ್ವದ ಮೊದಲ ಲಸಿಕೆ ಎಂದು ಕರೆಯಲ್ಪಡುವ ಸ್ಪುಟ್ನಿಕ್ ವಿ ಯ ಸ್ಥಳೀಯ ಉತ್ಪಾದನೆ ಪ್ರಾರಂಭವಾಗಲಿದೆ ಎಂದು ಹೇಳಿದರು. ಜುಲೈನಲ್ಲಿ ಹೈದರಾಬಾದ್ ಮೂಲದ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ಭಾರತದಲ್ಲಿ ಲಸಿಕೆ ತಯಾರಿಸಲಿದೆ. ದೇಶದ ಹೊಸ ಕೊವಿಡ್ -19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹೊತ್ತಲ್ಲಿ ಸ್ಪುಟ್ನಿಕ್ ವಿಗೆ ಏಪ್ರಿಲ್‌ನಲ್ಲಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ತುರ್ತು ಬಳಕೆಯ ಅಧಿಕಾರವನ್ನು (ಇಯುಎ) ನೀಡಿತ್ತು. ಭಾರತದಲ್ಲಿ ನೀಡಲಿರುವ ಮೂರನೇ ಲಸಿಕೆ ಇದಿದೆ. ಇತರ ಎರಡು ಲಸಿಕೆಗಳು ಕೋವಿಶೀಲ್ಡ್ ಮತ್ತು ಕೊವಾಕ್ಸಿನ್. ಪುಣೆ ಮೂಲದ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಆಕ್ಸ್‌ಫರ್ಡ್ ಯೂನಿವರ್ಸಿಟಿ-ಅಸ್ಟ್ರಾಜೆನೆಕಾ ಲಸಿಕೆ ಕೋವಿಶೀಲ್ಡ್ ಅನ್ನು ತಯಾರಿಸುತ್ತದೆ. ಹೈದರಾಬಾದ್‌ನಲ್ಲಿರುವ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದೆ.

ಕಳೆದ ವರ್ಷ ಆಗಸ್ಟ್ 11 ರಂದು ರಷ್ಯಾದಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಮೊದಲು ಅನುಮೋದನೆ ನೀಡಲಾಯಿತು. ಲ್ಯಾನ್ಸೆಟ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದಂತೆ ಇದು ಶೇ 91.6 ನಷ್ಟು ಪರಿಣಾಮಕಾರಿತ್ವ ಹೊಂದಿದೆ. 50 ಕ್ಕೂ ಹೆಚ್ಚು ದೇಶಗಳಲ್ಲಿ ಸಾಮೂಹಿಕ ಬಳಕೆಗಾಗಿ ಅನುಮೋದಿಸಲಾಗಿದೆ. ರಷ್ಯಾದ ನೇರ ಹೂಡಿಕೆ ನಿಧಿ (ಆರ್‌ಡಿಐಎಫ್) ಭಾರತದಲ್ಲಿ 750 ದಶಲಕ್ಷ ಡೋಸ್ ಸ್ಪುಟ್ನಿಕ್ ವಿ ಉತ್ಪಾದಿಸುವ ಒಪ್ಪಂದಕ್ಕೆ ಸಹಿ ಹಾಕಿದೆ.

ಡಿಸಿಜಿಐ ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ಎರಡಕ್ಕೂ ಅನುಮತಿ ಘೋಷಿಸಿದ ಎರಡು ವಾರಗಳ ನಂತರ ಕೋವಿಡ್ -19 ವಿರುದ್ಧ ಭಾರತದ ವ್ಯಾಕ್ಸಿನೇಷನ್ ಡ್ರೈವ್ ಜನವರಿ 16 ರಂದು ಪ್ರಾರಂಭವಾಯಿತು, ಪ್ರಸ್ತುತ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬ ನಾಗರಿಕರು ಮೇ 1 ರಿಂದ ಲಸಿಕೆಗೆ ಅರ್ಹರಾಗಿದ್ದರಿಂದ ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಚಾಲನೆಯ ಮೂರನೇ ಹಂತವು ನಡೆಯುತ್ತಿದೆ. ಆರೋಗ್ಯ ಸಚಿವಾಲಯದ ಪ್ರಕಾರ ಗುರುವಾರ ಬೆಳಿಗ್ಗೆ, ದೇಶಾದ್ಯಂತ ಇಲ್ಲಿಯವರೆಗೆ 177,214,256 ಡೋಸ್ ಲಸಿಕೆ ಪ್ರಮಾಣವನ್ನು ನೀಡಲಾಗಿದೆ.ಕಳೆದ 24 ಗಂಟೆಗಳಲ್ಲಿ 1,894,991 ಡೋಸ್ ಲಸಿಕೆ ವಿತರಣೆ ಆಗಿದೆ.

ಇದನ್ನೂ ಓದಿ: ಕಳೆದ ಎರಡು ವಾರಗಳಲ್ಲಿ 187 ಜಿಲ್ಲೆಗಳಲ್ಲಿ ಕೊರೊನಾವೈರಸ್ ಸೋಂಕು ಪ್ರಕರಣ ಇಳಿಮುಖ: ಕೇಂದ್ರ ಆರೋಗ್ಯ ಸಚಿವಾಲಯ

ಮೇ ತಿಂಗಳಿಂದ ದೊರೆಯಲಿರುವ ಸ್ಪುಟ್ನಿಕ್ ವಿ ಲಸಿಕೆ ಭಾರತದ ಪಾಲಿಗೆ ಗೇಮ್ ಚೇಂಜರ್ ಆಗಲಿದೆಯೇ?

(Russia Sputnik V Covid-19 vaccine to be available in markets across the country from early next week)

Published On - 6:54 pm, Thu, 13 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!