AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ

ಈ ವಿದ್ಯಾರ್ಥಿಗಳನ್ನು ಭಾರತದ ಮೆಡಿಕಲ್ ಕಾಲೇಜುಗಳಿಗೆ ಸೇರಿಸುವ ಕುರಿತು ಸರಿಯಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದೆ.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ
ಉಕ್ರೇನ್​ನಿಂದ ಹಿಂದಿರುಗುತ್ತಿರುವ ಭಾರತದ ವಿದ್ಯಾರ್ಥಿಗಳು
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 05, 2022 | 7:41 AM

ದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅನಿವಾರ್ಯ ಪರಿಸ್ಥಿತಿಯಲ್ಲಿ ಭಾರತಕ್ಕೆ ಹಿಂದಿರುಗಿರುವ ವಿದ್ಯಾರ್ಥಿಗಳಿಗೆ ಇಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೇ ಪ್ರವೇಶ ಕಲ್ಪಿಸಬೇಕು ಎಂದು ಭಾರತೀಯ ವೈದ್ಯಕೀಯ ಒಕ್ಕೂಟ (Indian Medical Association – IMA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಭಾರತಕ್ಕೆ ಬಂದಿರುವ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆವರಿಸಿರುವ ಕಾರ್ಮೋಡ ಬದಿಗೆ ಸರಿಸಲು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ. ಈ ವಿದ್ಯಾರ್ಥಿಗಳನ್ನು ಭಾರತದ ಮೆಡಿಕಲ್ ಕಾಲೇಜುಗಳಿಗೆ ಸೇರಿಸುವ ಕುರಿತು ಸರಿಯಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದೆ.

ಉಕ್ರೇನ್​ನಲ್ಲಿರುವ ವೈದ್ಯಕೀಯ ಶಿಕ್ಷಣ ವಿಭಾಗದಿಂದ ಈ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಪ್ರಗತಿ ಮತ್ತು ವಿವಿಧ ಹಂತದ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಮಾಹಿತಿ ಪಡೆದುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಭಾರತದ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬೇಕು. ತೇರ್ಗಡೆಯಾದ ನಂತರ ಈ ವಿದ್ಯಾರ್ಥಿಗಳನ್ನು ಭಾರತದಲ್ಲಿಯೇ ವಿದ್ಯಾಭ್ಯಾಸ ಮಾಡಿ, ಪದವಿ ಪಡೆದವರ ಸರಿಸಮನಾಗಿ ಪರಿಗಣಿಸಬೇಕು. ಅವರದು ವಿದೇಶದಲ್ಲಿ ಪಡೆದ ಪದವಿ ಎನಿಸಿಕೊಳ್ಳುವುದಿಲ್ಲ ಎಂದು ಹೇಳಿದೆ.

ಉಕ್ರೇನ್​ನಲ್ಲಿ ಪ್ರವೇಶ ಪಡೆದಿದ್ದ ಭಾರತದ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿದೆ. ವೈದ್ಯಕೀಯ ಪದವಿ ತರಗತಿಗಳ ವಿವಿಧ ಹಂತಗಳಲ್ಲಿ ಇವರು ಅಭ್ಯಾಸ ಮಾಡುತ್ತಿದ್ದವರು. ಉಕ್ರೇನ್​ನ ಸದ್ಯದ ಬಿಕ್ಕಟ್ಟು ಎಂದು ಪರಿಹಾರ ಕಾಣಲಿದೆ ಎಂಬುದು ಅಸ್ಪಷ್ಟವಾಗಿದೆ. ಈ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲು ಬಿಡಬಾರದು ಎಂದು ಐಎಂಎ ಕೋರಿದೆ.

ಚುರುಕಾಯ್ತು ರಕ್ಷಣಾ ಕಾರ್ಯಾಚರಣೆ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಏರ್‌ಲಿಫ್ಟ್ ಕಾರ್ಯಾಚರಣೆ ಚುರುಕುಗೊಂಡಿದೆ. ಇಂದು ಉಕ್ರೇನ್​ನಿಂದ ಭಾರತಕ್ಕೆ 16 ವಿಮಾನಗಳು ಬರುವ ನಿರೀಕ್ಷಿಯಿದೆ. ‘ಆಪರೇಷನ್ ಗಂಗಾ’ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಈವರೆಗೆ 11,000 ಭಾರತೀಯರನ್ನು ಏರ್​ಲಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Russia Ukraine War Live: ಅಮೆರಿಕ ಕಂಪನಿಗಳನ್ನು ನಿರ್ಬಂಧಿಸಿದ ರಷ್ಯಾ, ಉಕ್ರೇನ್​ನಿಂದ ಭಾರತೀಯರನ್ನು ಕರೆತರಲು ಸತತ ಪ್ರಯತ್ನ

ಇದನ್ನೂ ಓದಿ: ಇನ್ನೂ ಖಾರ್ಕಿವ್​ನಲ್ಲಿ ಸಿಲುಕಿರುವವರಿಗೆ ರಷ್ಯಾದ ಮೂಲಕ ಬರುವುದೊಂದೇ ಉಳಿದಿರುವ ದಾರಿ ಎನ್ನುತ್ತಾರೆ ವಾಪಸ್ಸು ಬಂದಿರುವ ವಿದ್ಯಾರ್ಥಿ

Published On - 7:39 am, Sat, 5 March 22

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿಲ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್