AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ

ಈ ವಿದ್ಯಾರ್ಥಿಗಳನ್ನು ಭಾರತದ ಮೆಡಿಕಲ್ ಕಾಲೇಜುಗಳಿಗೆ ಸೇರಿಸುವ ಕುರಿತು ಸರಿಯಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದೆ.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಇಲ್ಲಿನ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಕೊಡಿ: ಐಎಂಎ ಸಲಹೆ
ಉಕ್ರೇನ್​ನಿಂದ ಹಿಂದಿರುಗುತ್ತಿರುವ ಭಾರತದ ವಿದ್ಯಾರ್ಥಿಗಳು
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 05, 2022 | 7:41 AM

Share

ದೆಹಲಿ: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅನಿವಾರ್ಯ ಪರಿಸ್ಥಿತಿಯಲ್ಲಿ ಭಾರತಕ್ಕೆ ಹಿಂದಿರುಗಿರುವ ವಿದ್ಯಾರ್ಥಿಗಳಿಗೆ ಇಲ್ಲಿನ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿಯೇ ಪ್ರವೇಶ ಕಲ್ಪಿಸಬೇಕು ಎಂದು ಭಾರತೀಯ ವೈದ್ಯಕೀಯ ಒಕ್ಕೂಟ (Indian Medical Association – IMA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಭಾರತಕ್ಕೆ ಬಂದಿರುವ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಆವರಿಸಿರುವ ಕಾರ್ಮೋಡ ಬದಿಗೆ ಸರಿಸಲು ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ. ಈ ವಿದ್ಯಾರ್ಥಿಗಳನ್ನು ಭಾರತದ ಮೆಡಿಕಲ್ ಕಾಲೇಜುಗಳಿಗೆ ಸೇರಿಸುವ ಕುರಿತು ಸರಿಯಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಿದೆ ಎಂದು ಹೇಳಿದೆ.

ಉಕ್ರೇನ್​ನಲ್ಲಿರುವ ವೈದ್ಯಕೀಯ ಶಿಕ್ಷಣ ವಿಭಾಗದಿಂದ ಈ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಪ್ರಗತಿ ಮತ್ತು ವಿವಿಧ ಹಂತದ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಮಾಹಿತಿ ಪಡೆದುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಭಾರತದ ವೈದ್ಯಕೀಯ ಶಿಕ್ಷಣ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳಿಗೆ ಅವಕಾಶ ಕೊಡಬೇಕು. ತೇರ್ಗಡೆಯಾದ ನಂತರ ಈ ವಿದ್ಯಾರ್ಥಿಗಳನ್ನು ಭಾರತದಲ್ಲಿಯೇ ವಿದ್ಯಾಭ್ಯಾಸ ಮಾಡಿ, ಪದವಿ ಪಡೆದವರ ಸರಿಸಮನಾಗಿ ಪರಿಗಣಿಸಬೇಕು. ಅವರದು ವಿದೇಶದಲ್ಲಿ ಪಡೆದ ಪದವಿ ಎನಿಸಿಕೊಳ್ಳುವುದಿಲ್ಲ ಎಂದು ಹೇಳಿದೆ.

ಉಕ್ರೇನ್​ನಲ್ಲಿ ಪ್ರವೇಶ ಪಡೆದಿದ್ದ ಭಾರತದ ವೈದ್ಯಕೀಯ ವಿದ್ಯಾರ್ಥಿಗಳ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿದೆ. ವೈದ್ಯಕೀಯ ಪದವಿ ತರಗತಿಗಳ ವಿವಿಧ ಹಂತಗಳಲ್ಲಿ ಇವರು ಅಭ್ಯಾಸ ಮಾಡುತ್ತಿದ್ದವರು. ಉಕ್ರೇನ್​ನ ಸದ್ಯದ ಬಿಕ್ಕಟ್ಟು ಎಂದು ಪರಿಹಾರ ಕಾಣಲಿದೆ ಎಂಬುದು ಅಸ್ಪಷ್ಟವಾಗಿದೆ. ಈ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಲು ಬಿಡಬಾರದು ಎಂದು ಐಎಂಎ ಕೋರಿದೆ.

ಚುರುಕಾಯ್ತು ರಕ್ಷಣಾ ಕಾರ್ಯಾಚರಣೆ

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ಏರ್‌ಲಿಫ್ಟ್ ಕಾರ್ಯಾಚರಣೆ ಚುರುಕುಗೊಂಡಿದೆ. ಇಂದು ಉಕ್ರೇನ್​ನಿಂದ ಭಾರತಕ್ಕೆ 16 ವಿಮಾನಗಳು ಬರುವ ನಿರೀಕ್ಷಿಯಿದೆ. ‘ಆಪರೇಷನ್ ಗಂಗಾ’ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಈವರೆಗೆ 11,000 ಭಾರತೀಯರನ್ನು ಏರ್​ಲಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ: Russia Ukraine War Live: ಅಮೆರಿಕ ಕಂಪನಿಗಳನ್ನು ನಿರ್ಬಂಧಿಸಿದ ರಷ್ಯಾ, ಉಕ್ರೇನ್​ನಿಂದ ಭಾರತೀಯರನ್ನು ಕರೆತರಲು ಸತತ ಪ್ರಯತ್ನ

ಇದನ್ನೂ ಓದಿ: ಇನ್ನೂ ಖಾರ್ಕಿವ್​ನಲ್ಲಿ ಸಿಲುಕಿರುವವರಿಗೆ ರಷ್ಯಾದ ಮೂಲಕ ಬರುವುದೊಂದೇ ಉಳಿದಿರುವ ದಾರಿ ಎನ್ನುತ್ತಾರೆ ವಾಪಸ್ಸು ಬಂದಿರುವ ವಿದ್ಯಾರ್ಥಿ

Published On - 7:39 am, Sat, 5 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?