AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MiG 21: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿದ ವಾಯುಪಡೆ

ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಭಾರತೀಯ ವಾಯುಪಡೆಯು ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ.

MiG 21: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ನಿರ್ಬಂಧ ಹೇರಿದ ವಾಯುಪಡೆ
ಮಿಗ್​-21 ಯುದ್ಧ ವಿಮಾನ
ಆಯೇಷಾ ಬಾನು
|

Updated on: May 21, 2023 | 6:45 AM

Share

ದೆಹಲಿ: ರಷ್ಯಾ ನಿರ್ಮಿತ ಮಿಗ್​-21 ಯುದ್ಧ ವಿಮಾನ(Mikoyan-Gurevich MiG 21) ಹಾರಾಟಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ. ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆ ಭಾರತೀಯ ವಾಯುಪಡೆಯು(Indian Air Force) ಮಿಗ್​-21 ಯುದ್ಧ ವಿಮಾನ ಹಾರಾಟಕ್ಕೆ ತಾತ್ಕಾಲಿಕ ನಿರ್ಬಂಧ ಹೇರಿದೆ. ಇತ್ತೀಚೆಗಷ್ಟೇ ರಾಜಸ್ಥಾನದಲ್ಲಿ ಮಿಗ್ 21 ವಿಮಾನ ಪತನಗೊಂಡು ಮೂವರು ಸಾವನ್ನಪ್ಪಿದ್ದರು. ಹೀಗಾಗಿ ಮಿಗ್ -21 ವಿಮಾನ ಹಾರಾಟವನ್ನು ಸದ್ಯಕ್ಕೆ ನಿಲ್ಲಿಸುವ ನಿರ್ಧಾರವನ್ನ ಭಾರತೀಯ ವಾಯುಪಡೆ ತೆಗೆದುಕೊಂಡಿದೆ.

ಹೀಗೆ ಮಿಗ್-21 ವಿಮಾನ ಪದೇಪದೆ ಅಪಘಾತಗಳಿಗೆ ಗುರಿಯಾಗುತ್ತಿದೆ. ಹೀಗಾಗಿ ಸಂಪೂರ್ಣ ತನಿಖೆ ನಡೆಸುವವರೆಗೆ ಮತ್ತು ರಾಜಸ್ಥಾನದಲ್ಲಿ ಸಂಭವಿಸಿದ ಅಪಘಾತದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುವವರೆಗೆ ತಾತ್ಕಾಲಿಕವಾಗಿ ಐಎಎಫ್, ಮಿಗ್-21 ವಿಮಾನಗಳ ಹಾರಾಟ ನಿಷೇಧಿಸಲಾಗಿದೆ ಎಂದು ವಾಯುಪಡೆಯಿಂದ ಮಾಹಿತಿ ಸಿಕ್ಕಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಮತ್ತು ಅಪಘಾತಕ್ಕೆ ಕಾರಣಗಳನ್ನು ಕಂಡುಹಿಡಿಯುವವರೆಗೆ MiG-21 ಹಾರಾಟ ನಿಷೇಧಿಸಲಾಗಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: IAF Fighter Aircraft Crash: ಭಾರತೀಯ ವಾಯು ಸೇನೆಯ ಮಿಗ್-21 ಯುದ್ಧ ವಿಮಾನ ಪತನ, ಮೂವರು ಸಾವು

ಇನ್ನು MiG ರೂಪಾಂತರಗಳ ಮೊದಲ ಫ್ಲೀಟ್ ಅನ್ನು 1963 ರಲ್ಲಿ ಭಾರತೀಯ ವಾಯುಪಡೆಗೆ ಸೇರಿಸಲಾಯಿತು. ನಂತರದ ದಶಕಗಳಲ್ಲಿ ಭಾರತವು 700 ಮಿಗ್-ವೇರಿಯಂಟ್ ವಿಮಾನಗಳನ್ನ ಖರೀದಿಸಿತು. IAF ತನ್ನ ವಯಸ್ಸಾದ ಫೈಟರ್ ಫ್ಲೀಟ್ ಅನ್ನು ಬದಲಿಸಲು ಸಹಾಯ ಮಾಡಲು, ಕಳೆದ ವರ್ಷ ಫೆಬ್ರವರಿಯಲ್ಲಿ ರಕ್ಷಣಾ ಸಚಿವಾಲಯವು 83 ತೇಜಸ್ ಯುದ್ಧ ವಿಮಾನಗಳ ಖರೀದಿಗಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ನೊಂದಿಗೆ ₹48,000-ಕೋಟಿ ಒಪ್ಪಂದಕ್ಕೆ ಸಹಿ ಹಾಕಿತು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ