AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಾರ ಗೌರವ ಪಡೆದ ನಾಯಕ; ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪುಟಿನ್, ಟ್ರಂಪ್

ಪ್ರಧಾನಿ ನರೇಂದ್ರ ಮೋದಿ ತಮ್ಮ 76ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಜನ್ಮದಿನದ ಶುಭಾಶಯಗಳನ್ನು ಸ್ವೀಕರಿಸಿದ್ದಾರೆ. ಈ ಸಂದೇಶಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಪಾತ್ರ ಮತ್ತು ಮಸ್ಕೋ ಹಾಗೂ ವಾಷಿಂಗ್ಟನ್ ಜೊತೆಗಿನ ಭಾರತದ ದ್ವಿಪಕ್ಷೀಯ ಸಂಬಂಧಗಳ ಮಹತ್ವವನ್ನು ಎತ್ತಿಹಿಡಿದಿವೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಸಂದೇಶದಲ್ಲಿ, "ನರೇಂದ್ರ ಮೋದಿ ಅವರು ಭಾರತೀಯರಲ್ಲಿ ತೀವ್ರ ಗೌರವಕ್ಕೆ ಪಾತ್ರರಾಗಿದ್ದಾರೆ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಪ್ರಭಾವ ಹೊಂದಿದ್ದಾರೆ" ಎಂದು ಬಣ್ಣಿಸಿದ್ದಾರೆ.

ಅಪಾರ ಗೌರವ ಪಡೆದ ನಾಯಕ; ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪುಟಿನ್, ಟ್ರಂಪ್
ಪುಟಿನ್-ಮೋದಿ-ಟ್ರಂಪ್ Image Credit source: AP
ಸುಷ್ಮಾ ಚಕ್ರೆ
|

Updated on: Sep 17, 2026 | 3:55 PM

Share

ನವದೆಹಲಿ, ಸೆಪ್ಟೆಂಬರ್ 17: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಮ್ಮ 76ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತದಲ್ಲಿರುವ ರಷ್ಯಾ ಮತ್ತು ಅಮೆರಿಕ ರಾಯಭಾರ ಕಚೇರಿಗಳು ಈ ಇಬ್ಬರೂ ನಾಯಕರ ಶುಭಾಶಯ ಸಂದೇಶಗಳನ್ನು ಹಂಚಿಕೊಂಡಿವೆ.

ಪ್ರಧಾನಿ ಮೋದಿಯವರನ್ನು ಶ್ಲಾಘಿಸಿರುವ ರಷ್ಯಾ ಅಧ್ಯಕ್ಷ ಪುಟಿನ್, “ನಿಮ್ಮ ದೇಶವಾಸಿಗಳಿಂದ ನೀವು ಅಪಾರ ಗೌರವವನ್ನು ಗಳಿಸಿದ್ದೀರಿ ಹಾಗೂ ಜಾಗತಿಕ ಮಟ್ಟದಲ್ಲಿ ದೊಡ್ಡ ಪ್ರಭಾವ ಹೊಂದಿದ್ದೀರಿ. ಭಾರತ ಮತ್ತು ರಷ್ಯಾದ ನಡುವಿನ ವಿಶೇಷ ಹಾಗೂ ಸಾಂಸ್ಥಿಕ ಕಾರ್ಯತಂತ್ರದ ಸಹಭಾಗಿತ್ವವನ್ನು ಬಲಪಡಿಸುವಲ್ಲಿ ನಿಮ್ಮ ವೈಯಕ್ತಿಕ ಕೊಡುಗೆಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇನ್ನೊಂದೆಡೆ, ಅಮೆರಿಕ ರಾಯಭಾರ ಕಚೇರಿಯು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ, “ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪರವಾಗಿ ನಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತಿದ್ದೇವೆ. ಮುಂಬರುವ ವರ್ಷದಲ್ಲಿಯೂ ನಿಮಗೆ ಉತ್ತಮ ಆರೋಗ್ಯ ಮತ್ತು ಸಂತೋಷ ಸಿಗಲಿ” ಎಂದು ಹಾರೈಸಿದೆ.

ಇದನ್ನೂ ಓದಿ: ಚುನಾವಣೆಯಲ್ಲೇ ಸ್ಪರ್ಧಿಸದ ನರೇಂದ್ರ ಮೋದಿಗೆ ಗುಜರಾತ್​ ಸಿಎಂ ಪಟ್ಟ ಒಲಿದಿದ್ದು ಹೇಗೆ?

ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುವ ದೇಶಗಳ ಮೇಲೆ ಚಾಟಿ ಬೀಸಲು ಅಧ್ಯಕ್ಷ ಟ್ರಂಪ್‌ಗೆ ಹೊಸ ಅಧಿಕಾರ ನೀಡುವ ನಿರ್ಬಂಧಗಳ ಮಸೂದೆಗೆ ಅಮೆರಿಕ ಕಾಂಗ್ರೆಸ್ ಅನುಮೋದನೆ ನೀಡಿ, ಎರಡೂ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ ಈ ನಾಯಕರ ಶುಭಾಶಯಗಳು ಬಂದಿವೆ.

ಭಾರತ-ರಷ್ಯಾ ಸಂಬಂಧವನ್ನು ಶ್ಲಾಘಿಸಿದ ಪುಟಿನ್:

ಈ ತಿಂಗಳ ಆರಂಭದಲ್ಲಿ ಬ್ರಿಕ್ಸ್ ಶೃಂಗಸಭೆಗಾಗಿ ನವದೆಹಲಿಗೆ ಆಗಮಿಸಿದ್ದ ರಷ್ಯಾ ಅಧ್ಯಕ್ಷ ಪುಟಿನ್, ತಮಗೆ ಮತ್ತು ರಷ್ಯಾದ ನಿಯೋಗಕ್ಕೆ ನೀಡಿದ ಆತಿಥ್ಯಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ತಿಳಿಸಿದ್ದಾರೆ. “ನಮ್ಮ ನಡುವೆ ನಡೆದ ಚರ್ಚೆಗಳು ಅತ್ಯಂತ ಅರ್ಥಪೂರ್ಣ ಹಾಗೂ ಫಲಪ್ರದವಾಗಿದ್ದವು. ನಿಮ್ಮೊಂದಿಗೆ ಮಾತನಾಡುವುದು ಯಾವಾಗಲೂ ಅತ್ಯಂತ ಸಂತಸದ ವಿಷಯ. ಈ ಭೇಟಿಯು ನಿಮ್ಮ ಅಸಾಧಾರಣ ರಾಜಕೀಯ ಪ್ರಜ್ಞೆ ಮತ್ತು ದೂರದೃಷ್ಟಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ 76ನೇ ಜನ್ಮದಿನ: ಯೂಟ್ಯೂಬ್‌ನಲ್ಲಿ 3 ಕೋಟಿ, ಇನ್‌ಸ್ಟಾಗ್ರಾಮ್‌ನಲ್ಲಿ 10 ಕೋಟಿ; ವಿಶ್ವದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ನಾಯಕ ನರೇಂದ್ರ ಮೋದಿ

ಪ್ರಧಾನಿ ಮೋದಿಯ ಹುಟ್ಟುಹಬ್ಬ:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 1950ರಲ್ಲಿ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ವಾಡ್‌ನಗರದಲ್ಲಿ ಹೀರಾಸೌ ಹಾಗೂ ದಾಮೋದರ್‌ದಾಸ್ ಮೋದಿ ದಂಪತಿಗೆ ಜನಿಸಿದರು. ಇಂದು ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಬಿಜೆಪಿ ದೇಶಾದ್ಯಂತ ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ವನ್ನು ಆಯೋಜಿಸಿದ್ದು, ಬೃಹತ್ ಮಟ್ಟದ ಸೇವಾ ಕಾರ್ಯಕ್ರಮಗಳು ಮತ್ತು ಸಾರ್ವಜನಿಕ ಸಂಪರ್ಕ ಅಭಿಯಾನಗಳನ್ನು ಹಮ್ಮಿಕೊಂಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ