AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jaishankar: ಜಾರ್ಜ್ ಸೊರೊಸ್​ಗೆ 4 ಪದಗಳಲ್ಲಿ ಕುಟುಕಿದ ಕೇಂದ್ರ ಸಚಿವ ಜೈಶಂಕರ್

George Soros Attacked: ಅವರಿಚ್ಛೆಯ ವ್ಯಕ್ತಿಗಳು ಗೆದ್ದರೆ ಮಾತ್ರ ಚುನಾವಣೆ ಉತ್ತಮ ಎಂದು ಭಾವಿಸುತ್ತಾರೆ. ಆದರೆ, ಚುನಾವಣೆ ಫಲಿತಾಂಶ ಬೇರೆಯೇ ಬಂದರೆ ಅದು ಪ್ರಜಾತಂತ್ರದ ದೌರ್ಬಲ್ಯವೆಂಬಂತೆ ಅವರಿಗೆ ಬಾಸವಾಗುತ್ತದೆ. ಹೀಗೆಂದು ಜಾರ್ಜ್ ಸೊರೊಸ್ ವಿರುದ್ಧ ಕೇಂದ್ರ ಸಚಿವ ಜೈಶಂಕರ್ ವಾಕ್ ಪ್ರಹಾರ ನಡೆಸಿದ್ದಾರೆ.

Jaishankar: ಜಾರ್ಜ್ ಸೊರೊಸ್​ಗೆ 4 ಪದಗಳಲ್ಲಿ ಕುಟುಕಿದ ಕೇಂದ್ರ ಸಚಿವ ಜೈಶಂಕರ್
ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್.ಜೈಶಂಕರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 18, 2023 | 2:13 PM

Share

ನವದೆಹಲಿ: ಅದಾನಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ್ದ ಜಾರ್ಜ್ ಸೊರೊಸ್ (George Soros) ವಿರುದ್ಧ ಕೇಂದ್ರ ಸರ್ಕಾರದ ಮತ್ತೊಬ್ಬ ಸಚಿವರು ಸಿಡಿಗುಟ್ಟಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಪ್ರತಿಕ್ರಿಯಿಸಿದ್ದು, ಜಾರ್ಜ್ ಸೊರೊಸ್​ರನ್ನು ಅಪಾಯಕಾರಿ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಮೊನ್ನೆ ಜಾರ್ಜ್ ಸೊರೊಸ್ ವಿರುದ್ಧ ವಾಗ್ದಾಳಿ ಮಾಡಿದ್ದರು. ಅದರ ಬೆನ್ನಲ್ಲೇ ಎಸ್ ಜೈಶಂಕರ್ ಕೂಡ ಪ್ರತಿಕ್ರಿಯಿಸಿದ್ದಾರೆ.

ಸೊರೊಸ್ ಒಬ್ಬ ವೃದ್ಧ, ಶ್ರೀಮಂತ, ಪೂರ್ವಗ್ರಹ ಪೀಡಿತ ಮತ್ತು ಅಪಾಯಕಾರಿ ವ್ಯಕ್ತಿಯಾಗಿದ್ದಾರೆ. ತಮ್ಮ ಧೋರಣೆಯಂತೆ ಇಡೀ ವಿಶ್ವ ನಡೆಯಬೇಕೆಂದು ಭಾವಿಸುತ್ತಾರೆಎಂದು ವಿದೇಶಾಂಗ ಸಚಿವರು ಕುಟುಕಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದ ರೈಸಿನಾ ಸಂವಾದಲ್ಲಿ ಅಲ್ಲಿನ ಸಚಿವ ಕ್ರಿಸ್ ಬ್ರೌನ್ ಜೊತೆಗಿನ ಅಧಿವೇಶನದಲ್ಲಿ ಮಾತನಾಡುತ್ತಿದ್ದ ಎಸ್ ಜೈಶಂಕರ್, “ಜಾರ್ಜ್ ಸೊರೊಸ್​ರಂಥ ವ್ಯಕ್ತಿಗಳು ಜಾಗತಿಕ ವ್ಯಾಖ್ಯಾನವನ್ನು ಬದಲಿಸಲು ಬಂಡವಾಳ ಹಾಕುತ್ತಾರೆಎಂದು ಆರೋಪಿಸಿದ್ದಾರೆ.

ಅವರಂಥ ಜನರಿಗೆ ಅವರಿಚ್ಛೆಯ ವ್ಯಕ್ತಿಗಳು ಗೆದ್ದರೆ ಮಾತ್ರ ಚುನಾವಣೆ ಉತ್ತಮ ಎಂದು ಭಾವಿಸುತ್ತಾರೆ. ಆದರೆ, ಚುನಾವಣೆ ಫಲಿತಾಂಶ ಬೇರೆಯೇ ಬಂದರೆ ಅದು ಪ್ರಜಾತಂತ್ರದ ದೌರ್ಬಲ್ಯವೆಂಬಂತೆ ಅವರಿಗೆ ಬಾಸವಾಗುತ್ತದೆ. ಸೋಜಿಗದ ಸಂಗತಿ ಎಂದರೆ ಮುಕ್ತ ಸಮಾಜದ ಸೋಗಿನಲ್ಲಿ ಇವೆಲ್ಲವನ್ನೂ ಅವರು ಮಾಡುತ್ತಾರೆಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬಹಳ ಕಠೋರ ವಾಗ್ದಾಳಿಮಾಡಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬರ್ಥದಲ್ಲಿ ಜಾರ್ಜ್ ಸೊರೊಸ್ ಮಾಡಿರುವ ಟೀಕೆಗೆ ಈ ಸಂದರ್ಭದಲ್ಲಿ ಜೈಶಂಕರ್ ತಿರುಗೇಟು ನೀಡಿದ್ದಾರೆ. 140 ಕೋಟಿ ಜನರು ಇರುವ ಈ ದೇಶ ಹೇಗೆ ಮುನ್ನಡೆಯಬೇಕೆಂದು ಮತದಾರರು ನಿರ್ಧರಿಸುತ್ತಾರೆಂಬುದು ಜಾರ್ಜ್ ಸೊರೊಸ್​ಗೆ ಬೇಕಿಲ್ಲ. ಇದು ಚಿಂತೆ ಪಡುವ ಸಂಗತಿ. ವಸಾಹತುಶಾಹಿ ಆಡಳಿತದ ನರಕ ಕಂಡ ದೇಶದ ನಮ್ಮದು. ಹೊರಗಿನವರು ಮಧ್ಯಪ್ರವೇಶಿಸಿದರೆ ಏನು ಅಪಾಯ ಆಗುತ್ತದೆ ಎಂಬುದು ನಮಗೆ ಗೊತ್ತು ಎಂದು ಜೈಶಂಕರ್ ಎಚ್ಚರಿಕೆ ನೀಡಿದ್ದಾರೆ.

ಸೊರೊಸ್​ಗೆ ಭಾರತ ಒಂದು ಪ್ರಜಾಪ್ರಭುತ್ವ ದೇಶ ಎಂದು ಒಪ್ಪುತ್ತಾರೆ. ಆದರೆ, ಆ ದೇಶದ ಪ್ರಧಾನಿ ಪ್ರಜಾಪ್ರಭುತ್ವವಾದಿಯಲ್ಲ ಎನ್ನುತ್ತಾರೆ. ಈ ಹಿಂದೆ ಅವರು ಕೋಟ್ಯಂತರ ಭಾರತೀಯ ಮುಸ್ಲಿಮರ ಪೌರತ್ವ ಕಿತ್ತುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಅದೆಲ್ಲವೂ ಸುಳ್ಳೆಂಬುದು ಸಾಬೀತಾಗಿದೆ ಎಂದು ವಿದೇಶಾಂಗ ಸಚಿವರು ಆಸ್ಟ್ರೇಲಿಯಾದಲ್ಲಿ ನಡೆದ ರೈಸಿನಾ ಡೈಲಾಗ್ ವೇಳೆ ಹೇಳಿದ್ದಾರೆ.

ಜಾರ್ಜ್ ಸೊರೊಸ್ ಹೇಳಿದ್ದೇನು?

ಮೊನ್ನೆ ಗುರುವಾರ ಜರ್ಮನಿಯ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫೆರೆನ್ಸ್ ವೇಳೆ ಭಾಷಣ ಮಾಡುತ್ತಿದ್ದ ವೇಳೆ ಉದ್ಯಮಿ ಜಾರ್ಜ್ ಸೊರೊಸ್ ಭಾರತದ ವಿದ್ಯಮಾನಗಳ ಬಗ್ಗೆ ಮಾತನಾಡಿದ್ದರು. ಅದಾನಿ ಪ್ರಕರಣದ ಬಗ್ಗೆ ಪ್ರಧಾನಿ ಮೌನವಾಗಿದ್ದಾರೆ. ಅದಾನಿ ಹಿನ್ನಡೆಯಿಂದ ಪ್ರಧಾನಿ ದುರ್ಬಲಗೊಳ್ಳಲಿದ್ದಾರೆ. ಅದಾನಿ ಪ್ರಕರಣದಲ್ಲಿ ಪ್ರಧಾನಿಗಳು ದೇಶದ ಸಂಸತ್ತು ಮತ್ತು ವಿದೇಶೀ ಹೂಡಿಕೆದಾರರಿಗೆ ಉತ್ತರ ಕೊಡಬೇಕಾಗುತ್ತದೆ ಎಂದು ಟೀಕಿಸಿದ್ದರು.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ