AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ.

Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ
ಎಸ್ ಜೈಶಂಕರ್
Follow us
ನಯನಾ ರಾಜೀವ್
|

Updated on:Jul 05, 2023 | 11:36 AM

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ. ಖಲಿಸ್ತಾನಿಗಳ ಮನಸ್ಥಿತಿಯು ಭಾರತ ಹಾಗೂ ಅವರು ವಾಸಿಸುತ್ತಿರುವ ದೇಶಗಳಿಗೆ ಹಾನಿಕಾರಕವಾಗಿದೆ. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿತ್ತು.

ಈ ಪೋಸ್ಟರ್‌ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ ಫ್ರೀಡಂ ರ್ಯಾಲಿಗೆ ಜನರನ್ನು ಆಹ್ವಾನಿಸಲಾಗಿದೆ. ಪೋಸ್ಟರ್ ಪ್ರಕಾರ, ರ್ಯಾಲಿಯು ಗ್ರೇಟ್ ಪಂಜಾಬ್ ಬಿಸಿನೆಸ್ ಸೆಂಟರ್ ಮಾಲ್ಟನ್‌ನಿಂದ ಪ್ರಾರಂಭವಾಗಿ ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೊನೆಗೊಳ್ಳುತ್ತದೆ. ಖಾಲಿಸ್ತಾನ್ ಟೈಗರ್ ಫೋರ್ಸ್‌ನ ಮಾಜಿ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಹತ್ಯೆ ಮಾಡಲಾಗಿದೆ.

ಮತ್ತಷ್ಟು ಓದಿ: Amritpal Singh: ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ಶರಣಾಗುವ ಸಾಧ್ಯತೆ, ಏ.14ರವರೆಗೆ ಪಂಜಾಬ್​ ಪೊಲೀಸರ ರಜೆಗಳು ರದ್ದು

ಕೆನಡಾದಲ್ಲಿ ಭಾರತೀಯ ರಾಯಭಾರಿ, ಹೈಕಮಿಷನರ್ ಸಂಜಯ್ ವರ್ಮಾ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲ್ ಜನರಲ್ ಅಪೂರ್ವ ಶ್ರೀವಾಸ್ತವ ಅವರ ಚಿತ್ರಗಳು ಮತ್ತು ಹೆಸರುಗಳನ್ನು ಹೊಂದಿರುವ ಖಲಿಸ್ತಾನ್ ಪರ ಪೋಸ್ಟರ್ ಕೆನಡಾದಲ್ಲಿ ಹೊರಬಿದ್ದಿದ್ದು, ಖಲಿಸ್ತಾನಿ ಹರ್ದೀಪ್ ನಿಜ್ಜಾರ್ ಹತ್ಯೆಗೆ ಭಾರತವೇ ಕಾರಣ ಎಂದು ಹೇಳಿಕೊಂಡಿದೆ.

2022 ರಲ್ಲಿ, ಜಲಂಧರ್‌ನಲ್ಲಿ ಪಾದ್ರಿಯೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಖಾಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್‌ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಮಾರ್ಚ್‌ನಲ್ಲಿ ಖಲಿಸ್ತಾನ ಬೆಂಬಲಿಗರು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:35 am, Wed, 5 July 23

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ