Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ.

Khalistanis: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಅಮೆರಿಕ ಸೇರಿದಂತೆ ವಿವಿಧ ರಾಷ್ಟ್ರಗಳಿಗೆ ಭಾರತ ಮನವಿ
ಎಸ್ ಜೈಶಂಕರ್

Updated on: Jul 05, 2023 | 11:36 AM

ಖಲಿಸ್ತಾನಿ(Khalistani)ಗಳಿಗೆ ಜಾಗ ನೀಡದಂತೆ ಕೆನಡಾ, ಅಮೆರಿಕ, ಯುಕೆ ಹಾಗೂ ಆಸ್ಟ್ರೇಲಿಯಾ ದೇಶಗಳಿಗೆ ಭಾರತ ಮನವಿ ಮಾಡಿದೆ. ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ. ಖಲಿಸ್ತಾನಿಗಳ ಮನಸ್ಥಿತಿಯು ಭಾರತ ಹಾಗೂ ಅವರು ವಾಸಿಸುತ್ತಿರುವ ದೇಶಗಳಿಗೆ ಹಾನಿಕಾರಕವಾಗಿದೆ. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್‌ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿತ್ತು.

ಈ ಪೋಸ್ಟರ್‌ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ ಫ್ರೀಡಂ ರ್ಯಾಲಿಗೆ ಜನರನ್ನು ಆಹ್ವಾನಿಸಲಾಗಿದೆ. ಪೋಸ್ಟರ್ ಪ್ರಕಾರ, ರ್ಯಾಲಿಯು ಗ್ರೇಟ್ ಪಂಜಾಬ್ ಬಿಸಿನೆಸ್ ಸೆಂಟರ್ ಮಾಲ್ಟನ್‌ನಿಂದ ಪ್ರಾರಂಭವಾಗಿ ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ಕೊನೆಗೊಳ್ಳುತ್ತದೆ. ಖಾಲಿಸ್ತಾನ್ ಟೈಗರ್ ಫೋರ್ಸ್‌ನ ಮಾಜಿ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಹತ್ಯೆ ಮಾಡಲಾಗಿದೆ.

ಮತ್ತಷ್ಟು ಓದಿ: Amritpal Singh: ಖಲಿಸ್ತಾನಿ ಬೆಂಬಲಿಗ ಅಮೃತ್​ಪಾಲ್ ಸಿಂಗ್ ಶರಣಾಗುವ ಸಾಧ್ಯತೆ, ಏ.14ರವರೆಗೆ ಪಂಜಾಬ್​ ಪೊಲೀಸರ ರಜೆಗಳು ರದ್ದು

ಕೆನಡಾದಲ್ಲಿ ಭಾರತೀಯ ರಾಯಭಾರಿ, ಹೈಕಮಿಷನರ್ ಸಂಜಯ್ ವರ್ಮಾ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲ್ ಜನರಲ್ ಅಪೂರ್ವ ಶ್ರೀವಾಸ್ತವ ಅವರ ಚಿತ್ರಗಳು ಮತ್ತು ಹೆಸರುಗಳನ್ನು ಹೊಂದಿರುವ ಖಲಿಸ್ತಾನ್ ಪರ ಪೋಸ್ಟರ್ ಕೆನಡಾದಲ್ಲಿ ಹೊರಬಿದ್ದಿದ್ದು, ಖಲಿಸ್ತಾನಿ ಹರ್ದೀಪ್ ನಿಜ್ಜಾರ್ ಹತ್ಯೆಗೆ ಭಾರತವೇ ಕಾರಣ ಎಂದು ಹೇಳಿಕೊಂಡಿದೆ.

2022 ರಲ್ಲಿ, ಜಲಂಧರ್‌ನಲ್ಲಿ ಪಾದ್ರಿಯೊಬ್ಬರನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಖಾಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್‌ಗೆ 10 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು.

ಮಾರ್ಚ್‌ನಲ್ಲಿ ಖಲಿಸ್ತಾನ ಬೆಂಬಲಿಗರು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:35 am, Wed, 5 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us