AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Jaishankar Russia Visit: ವಿದೇಶಾಂಗ ಸಚಿವ ಎಸ್ ಜೈಶಂಕರ್ ನವೆಂಬರ್ 8ರಂದು ರಷ್ಯಾಗೆ ಭೇಟಿ

ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ನವೆಂಬರ್ 8 ರಂದು ಮಾಸ್ಕೋಗೆ ಭೇಟಿ ನೀಡಲಿದ್ದಾರೆ. ರಷ್ಯಾದ ಜೊತೆಗೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

S Jaishankar Russia Visit: ವಿದೇಶಾಂಗ ಸಚಿವ ಎಸ್ ಜೈಶಂಕರ್ ನವೆಂಬರ್ 8ರಂದು ರಷ್ಯಾಗೆ ಭೇಟಿ
ವಿದೇಶಾಂಗ ಸಚಿವ ಎಸ್ ಜೈಶಂಕರ್
TV9 Web
| Edited By: |

Updated on:Oct 27, 2022 | 6:42 PM

Share

ದೆಹಲಿ: ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ನವೆಂಬರ್ 8 ರಂದು ರಷ್ಯಾಕ್ಕೆ ಭೇಟಿ ನೀಡಲಿದ್ದು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಘೋಷಣೆ ಮಾಡಿದ ರಷ್ಯಾ, ದ್ವಿಪಕ್ಷೀಯ ಸಂಬಂಧಗಳು ಮತ್ತು ಅಂತರರಾಷ್ಟ್ರೀಯ ಬೆಳವಣಿಗೆಗಳ ಬಗ್ಗೆ ಇವರಿಬ್ಬರು ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.  ಈ ಭೇಟಿಯು ನಡೆಯುತ್ತಿರುವ ಉಕ್ರೇನ್ ಯುದ್ಧದಲ್ಲಿ ನಿರ್ಣಾಯಕ ಹಂತದಲ್ಲಿ ಬರುತ್ತದೆ. ಅಲ್ಲಿ ಮಾಸ್ಕೋ ಮತ್ತು ಕೈವ್, ರೇಡಿಯೊ ಆಕ್ಟಿವ್ ಡರ್ಟಿ ಬಾಂಬ್ ಅನ್ನು ಬಳಸಲು ಯೋಜಿಸುತ್ತಿದೆ ಎಂದು ಪರಸ್ಪರ ಆರೋಪಿಸಿವೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಆಡಳಿತವು ರೇಡಿಯೊ ಆಕ್ಟಿವ್ ಡರ್ಟಿ ಬಾಂಬ್ ಅನ್ನು ಅಭಿವೃದ್ಧಿಪಡಿಸಲು ಆದೇಶಿಸಿದೆ ಎಂದು ಆರೋಪಿಸಿದ ಸ್ವಲ್ಪ ಸಮಯದ ನಂತರ ಮಾಸ್ಕೋ ತನ್ನ ಪರಮಾಣು ಪಡೆಗಳ ವಾರ್ಷಿಕ ಅಭ್ಯಾಸ ಕೈಗೊಳ್ಳಲು ಯೋಜಿಸಿದೆ ಎಂದು ಹೇಳಿದೆ. ಅವರು ಉಕ್ರೇನ್‌ನ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಬೆಂಬಲವನ್ನು ಹೊಂದಿರಬಹುದು ಎಂದು ಅದು ಹೇಳಿದೆ.

ಭಾನುವಾರ ರಷ್ಯಾದ ರಕ್ಷಣಾ ಸಚಿವರು ಈ ವಿಷಯವನ್ನು ಚರ್ಚಿಸಲು NATO ನಲ್ಲಿರುವ ತಮ್ಮ ಸಹವರ್ತಿಗಳನ್ನು ಕರೆದಿದ್ದಾರೆ. ಉಕ್ರೇನ್ ಅನ್ನು ಬೆಂಬಲಿಸುವ ಪಾಶ್ಚಿಮಾತ್ಯ ರಾಷ್ಟ್ರಗಳು ಈ ಹೇಳಿಕೆಯನ್ನು ತಳ್ಳಿಹಾಕಿದ್ದು ರಷ್ಯಾ ಭಯ ಉಂಟು ಮಾಡುತ್ತಿದೆ ಎಂದಿವೆ.

ಯುದ್ಧವನ್ನು ಉಲ್ಬಣಗೊಳಿಸಲು ರಷ್ಯಾದ ನೆಪ ಇದು ಎಂದು ಉಕ್ರೇನ್ ಹೇಳಿದೆ.

ಉಕ್ರೇನ್ ಯುದ್ಧದಲ್ಲಿ ಯಾವುದೇ ಕಡೆಯಿಂದ ಪರಮಾಣು ಶಸ್ತ್ರಾಸ್ತ್ರಗಳನ್ನು ಬಳಸಬಾರದು ಎಂದು ನಿನ್ನೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಷ್ಯಾದ ಸಹವರ್ತಿ ಸರ್ಗೆಯ್ ಶೋಯಿಗು ಅವರಿಗೆ ಹೇಳಿದ್ದಾರೆ.

Published On - 6:15 pm, Thu, 27 October 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ