ಗಲ್ವಾನ್ ಕಣಿವೆ ಘರ್ಷಣೆ ಬಳಿಕ ಭಾರತ-ಚೀನಾ ಸಂಬಂಧ ಹಳಸಿದೆ: ಎಸ್​ ಜೈಶಂಕರ್

ಗಲ್ವಾನ್​ ಕಣಿವೆಯಲ್ಲಿ 2020ರಲ್ಲಿ ನಡೆದ ಘರ್ಷಣೆ ಬಳಿಕ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಉತ್ತಮವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ವಿಶ್ವದ ಎರಡು ದೊಡ್ಡ ರಾಷ್ಟ್ರಗಳು ತಮ್ಮ ನಡುವೆ ಆ ಮಟ್ಟದ ಉದ್ವಿಗ್ನತೆಯನ್ನು ಹೊಂದಿದ್ದರೆ, ಅದು ಎಲ್ಲರ ಮೇಲೂ ಪರಿಣಾಮವನ್ನು ಬೀರುತ್ತದೆ. ಚೀನಾ ವ್ಯವಹಾರವೇ ವಿಚಿತ್ರ, ಅವರು ಆ ಕೆಲಸವನ್ನು ಏಕೆ ಮಾಡುತ್ತಾರೆ ಎಂಬುದರ ಬಗ್ಗೆ ಎಂದೂ ಹೇಳುವುದಿಲ್ಲ, ಹಾಗಾಗಿ ಚೀನಾ ನಡವಳಿಕೆಯಲ್ಲಿ ಸದಾ ಅಸ್ಪಷ್ಟತೆ ಎದ್ದು ತೋರುತ್ತಿರುತ್ತದೆ.

ಗಲ್ವಾನ್ ಕಣಿವೆ ಘರ್ಷಣೆ ಬಳಿಕ ಭಾರತ-ಚೀನಾ ಸಂಬಂಧ ಹಳಸಿದೆ: ಎಸ್​ ಜೈಶಂಕರ್
ಜೈಶಂಕರ್Image Credit source: NDTV
Follow us
|

Updated on: Sep 27, 2023 | 9:08 AM

ಗಲ್ವಾನ್​ ಕಣಿವೆಯಲ್ಲಿ 2020ರಲ್ಲಿ ನಡೆದ ಘರ್ಷಣೆ ಬಳಿಕ ಭಾರತ ಹಾಗೂ ಚೀನಾ ನಡುವಿನ ಸಂಬಂಧ ಉತ್ತಮವಾಗಿಲ್ಲ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ವಿಶ್ವದ ಎರಡು ದೊಡ್ಡ ರಾಷ್ಟ್ರಗಳು ತಮ್ಮ ನಡುವೆ ಆ ಮಟ್ಟದ ಉದ್ವಿಗ್ನತೆಯನ್ನು ಹೊಂದಿದ್ದರೆ, ಅದು ಎಲ್ಲರ ಮೇಲೂ ಪರಿಣಾಮವನ್ನು ಬೀರುತ್ತದೆ. ಚೀನಾ ವ್ಯವಹಾರವೇ ವಿಚಿತ್ರ, ಅವರು ಯಾವ ಕೆಲಸವನ್ನು ಏಕೆ ಮಾಡುತ್ತಾರೆ ಎಂಬುದರ ಬಗ್ಗೆ ಎಂದೂ ಹೇಳುವುದಿಲ್ಲ, ಹಾಗಾಗಿ ಚೀನಾ ನಡವಳಿಕೆಯಲ್ಲಿ ಸದಾ ಅಸ್ಪಷ್ಟತೆ ಎದ್ದು ತೋರುತ್ತಿರುತ್ತದೆ.

ಹಿಂದೂ ಮಹಾಸಾಗರದಲ್ಲಿ ಚೀನಾ ನೌಕಾಪಡೆಯ ಉಪಸ್ಥಿತಿಯು ನಿರಂತರವಾಗಿ ಹೆಚ್ಚುತ್ತಿದೆ ಎಂದು ವಿದೇಶಾಂಗ ಸಚಿವರು ಕಳವಳ ವ್ಯಕ್ತಪಡಿಸಿದರು. ಇದಕ್ಕಾಗಿ ಹಿಂದೆಂದಿಗಿಂತಲೂ ಹೆಚ್ಚು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಜೈಶಂಕರ್ ಮಾತನಾಡಿ, ಕಳೆದ 20-25 ವರ್ಷಗಳಲ್ಲಿ ಹಿಂದೂ ಮಹಾಸಾಗರದಲ್ಲಿ ಚೀನಾ ನೌಕಾಪಡೆಯ ಉಪಸ್ಥಿತಿ ಮತ್ತು ಚಟುವಟಿಕೆಯಲ್ಲಿ ಸ್ಥಿರವಾದ ಏರಿಕೆ ಕಂಡುಬಂದಿದೆ. ಚೀನೀ ನೌಕಾಪಡೆಯ ಗಾತ್ರದಲ್ಲಿ ಬಹಳ ವೇಗವಾಗಿ ಹೆಚ್ಚಳವಾಗಿದೆ. ನೀವು ಬಹಳ ದೊಡ್ಡ ನೌಕಾಪಡೆಯನ್ನು ಹೊಂದಿರುವಾಗ, ಆ ನೌಕಾಪಡೆಯು ಅದರ ನಿಯೋಜನೆಯ ವಿಷಯದಲ್ಲಿ ಎಲ್ಲೋ ಗೋಚರಿಸುತ್ತದೆ.

ಶ್ರೀಲಂಕಾಕ್ಕೆ ಪದೇ ಪದೇ ಆಗಮಿಸುವ ಸಂಶೋಧನಾ ಹಡಗು ನಿಲುಗಡೆಗೆ ಈ ಬಾರಿ ಅವಕಾಶ ನೀಡುವುದಿಲ್ಲ ಎಂದು ಶ್ರೀಲಂಕಾ ಸ್ಪಷ್ಟಪಡಿಸಿದೆ, ನಮಗೆ ಭಾರತದ ಕಾಳಜಿಯೇ ಮುಖ್ಯ ಎಂದು ಹೇಳಿದೆ. ಆಗಸ್ಟ್ 23 ರಂದು, ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡುವ ಮೂಲಕ ಇತಿಹಾಸವನ್ನು ಸೃಷ್ಟಿಸಿತು. ಇದರೊಂದಿಗೆ ಇದು ಚಂದ್ರನ ಮೇಲೆ ರೋವರ್ ಅನ್ನು ಇಳಿಸಿದ ದೇಶಗಳ ಗಣ್ಯ ಮತ್ತು ಸಣ್ಣ ಬಾಹ್ಯಾಕಾಶ ಕ್ಲಬ್‌ಗೆ ಸೇರಿಕೊಂಡಿದೆ.

ಮತ್ತಷ್ಟು ಓದಿ: ಯಾವುದೇ ದೇಶದ ಅತಿಕ್ರಮಣವನ್ನು ಭಾರತ ಸಹಿಸುವುದಿಲ್ಲ, ತಕ್ಕ ಉತ್ತರ ನೀಡಲು ನಮ್ಮ ಸೇನೆ ಸಮರ್ಥವಾಗಿದೆ: ರಾಜನಾಥ ಸಿಂಗ್

ರಷ್ಯಾ, ಅಮೆರಿಕ ಮತ್ತು ಚೀನಾ ನಂತರ ಚಂದ್ರನ ಮೇಲ್ಮೈ ಮೇಲೆ ಇಳಿದ ನಾಲ್ಕನೇ ದೇಶ ಭಾರತ. ಆದಾಗ್ಯೂ, ದಕ್ಷಿಣ ಧ್ರುವದಲ್ಲಿ ತನ್ನ ಬಾಹ್ಯಾಕಾಶ ನೌಕೆಯನ್ನು ಇಳಿಸಿದ ಮೊದಲ ದೇಶವಾಗಿದೆ. ಭಾರತವು ಅಮೃತಕಾಲವನ್ನು ಪ್ರವೇಶಿಸಿದೆ ಹೆಚ್ಚಿನ ಪ್ರಗತಿ, ಬದಲಾವಣೆಗಾಗಿ ದೇಶ ಎದುರುನೋಡುತ್ತಿದೆ.

ಸ್ಪಷ್ಟವಾಗಿ ಮುನ್ನೆಲೆಗೆ ಬಂದಿರುವ ನಮ್ಮ ಪ್ರತಿಭೆ ಮತ್ತು ಸೃಜನಶೀಲತೆ ನಮ್ಮನ್ನು ಮುಂದೆ ಕೊಂಡೊಯ್ಯುತ್ತದೆ ಎಂಬ ವಿಶ್ವಾಸ ನಮಗಿದೆ. ಈ ವರ್ಷದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಅಮೃತ ಕಾಲದಲ್ಲಿ ತೆಗೆದುಕೊಂಡ ನಿರ್ಧಾರಗಳು ಮತ್ತು ಕ್ರಮಗಳು ಮುಂದಿನ ಒಂದು ಸಾವಿರ ವರ್ಷಗಳ ಮೇಲೆ ಪರಿಣಾಮ ಬೀರುತ್ತವೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ