AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

All Party Meeting: ಹಸೀನಾ ಮೊದಲು ಚೇತರಿಸಿಕೊಳ್ಳಲಿ, ಸರ್ವಪಕ್ಷಗಳ ಸಭೆಯಲ್ಲಿ ಜೈಶಂಕರ್ ಮಾತು

Bangladesh Protest: ಬಾಂಗ್ಲಾದೇಶದಲ್ಲಿನ ಪ್ರಸ್ತುತ ಪರಿಸ್ಥಿತಿ ಹಾಗೂ ಶೇಖ್ ಹಸೀನಾ ಭಾರತಕ್ಕೆ ಆಗಮಿಸಿರುವ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಅಲ್ಲಿರುವ ಭಾರತೀಯರ ಬಗ್ಗೆ ಮಾತನಾಡಿದ್ದು, ಸ್ಥಳಾಂತರಿಸುವಷ್ಟು ಕೆಟ್ಟದ್ದಿಲ್ಲ, ಆದರೆ ಎಚ್ಚರದಿಂದಿರಬೇಕು ಎಂದು ಹೇಳಿದರು.

All Party Meeting: ಹಸೀನಾ ಮೊದಲು ಚೇತರಿಸಿಕೊಳ್ಳಲಿ, ಸರ್ವಪಕ್ಷಗಳ ಸಭೆಯಲ್ಲಿ ಜೈಶಂಕರ್ ಮಾತು
ಸರ್ವಪಕ್ಷಗಳ ಸಭೆ
ನಯನಾ ರಾಜೀವ್
|

Updated on: Aug 06, 2024 | 12:02 PM

Share

ಬಾಂಗ್ಲಾದೇಶದಲ್ಲಿ ಉದ್ಭವಿಸಿರುವ ಅಶಾಂತಿ ಹಾಗೂ ಭಾರತಕ್ಕೆ ಬಂದು ಆಶ್ರಯ ಪಡೆದಿರುವ ಪ್ರಧಾನಿ ಶೇಖ್ ಹಸೀನಾ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸರ್ವಪಕ್ಷಗಳ ಸಭೆ ಕರೆದಿದ್ದರು. ಶೇಖ್​ ಹಸೀನಾ ಮೊದಲು ಚೇತರಿಸಿಕೊಳ್ಳಲಿ ಒಂದೆಡೆ ನೆಲೆಯೂರಲಿ ಬಳಿಕ ಈ ವಿಚಾರದ ಕುರಿತು ಅವರ ಬಳಿ ಮಾತನಾಡೋಣ ಎಂದು ಜೈಶಂಕರ್ ಹೇಳಿದ್ದಾರೆ.

ಕೆಲವು ದೇವಾಲಯಗಳ ಮೇಲೆ ದಾಳಿಗಳು ನಡೆದಿರುವುದರಿಂದ ಸರ್ಕಾರವು ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿದರು. ಸರ್ಕಾರ ಕಾದು ನೋಡುವ ಕ್ರಮದಲ್ಲಿದೆ, ಆದರೆ ಬಾಂಗ್ಲಾದೇಶದ ಸೇನೆಯೊಂದಿಗೆ ಸಂಪರ್ಕದಲ್ಲಿದೆ. ಶೇಖ್ ಹಸೀನಾ ಭಾರತಕ್ಕೆ ಬಂದಿರುವ ವಿಚಾರವನ್ನು ವಿದೇಶಾಂಗ ವ್ಯಹಾರಗಳ ಸಚಿವಾಲಯ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಬಾಂಗ್ಲಾದೇಶದಲ್ಲಿರುವ ರಾಯಭಾರಿ ಅಧಿಕಾರಿಗಳು ಮತ್ತು ಭಾರತೀಯ ಪ್ರಜೆಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಚಿವರು ಹೇಳಿದರು. ಆದರೆ, ಪರಿಸ್ಥಿತಿಯು ಸ್ಥಳಾಂತರಿಸುವಷ್ಟು ಕೆಟ್ಟದ್ದಲ್ಲ ಆದರೆ ಎಚ್ಚರಿಕೆಯನ್ನು ತೆಗೆದುಕೊಳ್ಳುವಷ್ಟು ಆತಂಕಕಾರಿಯಾಗಿದೆ ಎಂದು ಅವರು ಹೇಳಿದರು. ಬಾಂಗ್ಲಾದೇಶದಲ್ಲಿ ಕನಿಷ್ಠ 20 ಸಾವಿರ ಮಂದಿ ಭಾರತೀಯರಿದ್ದಾರೆ. ಅವರಲ್ಲಿ 8 ಸಾವಿರ ಮಂದಿ ಹಿಂದಿರುಗಿದ್ದಾರೆ.

ಮತ್ತಷ್ಟು ಓದಿ: Sheikh Hasina: ಹಿಂಡನ್ ವಾಯುನೆಲೆಯಲ್ಲಿ ಶೇಖ್ ಹಸೀನಾ ಭೇಟಿಯಾದ ಅಜಿತ್ ದೋವಲ್; ಮೇಘಾಲಯದ ಗಡಿಯಲ್ಲಿ ರಾತ್ರಿ ಕರ್ಫ್ಯೂ ಜಾರಿ

ಬಾಂಗ್ಲಾದೇಶದಲ್ಲಿ ಪ್ರತಿಭಟನೆ ನಡೆಯಲು ಕಾರಣವೇನು? ಉದ್ಯೋಗ ಕೋಟಾ ಮರುಜಾರಿ ಕುರಿತು ಪ್ರತಿಭಟನೆ ಶುರುವಾಗಿತ್ತು. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಉನ್ನತ ನ್ಯಾಯಾಲಯ ಈಗಾಗಲೇ ಹಿಂಪಡೆದಿದೆ. ಉದ್ಯೋಗ ಕೋಟಾ ಮರುಜಾರಿ ಆದೇಶವನ್ನು ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿತ್ತು.

ಪೊಲೀಸರು ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ನಡುವೆ ರಾಷ್ಟ್ರವ್ಯಾಪಿ ನಡೆದ ಘರ್ಷಣೆಯಲ್ಲಿ 151ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಗಲಭೆಯನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗದಿದ್ದಾಗ ಸೈನಿಕರು ಬಾಂಗ್ಲಾದೇಶದಾದ್ಯಂತ ನಗರಗಳಲ್ಲಿ ಗಸ್ತು ತಿರುಗಿದರು. ರಾಷ್ಟ್ರವ್ಯಾಪಿ ಇಂಟರ್ನೆಟ್ ಬಂದ್​ ಮಾಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!