AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಮುಂದೊಂದು ದಿನ ನಾವೇ ಬಲಿಪಶುಗಳಾಗಬಹುದು: ಜೈಶಂಕರ್

ಭಯೋತ್ಪಾದನೆ(Terrorism) ಇತರೆ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮವನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗಬಹುದು ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧ ಮೂರು ವಾರಗಳನ್ನು ಕಳೆದಿದೆ.ಈ ಯುದ್ಧದಲ್ಲಿ ಒಂಬತ್ತೂವರೆ ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹೋರಾಟದಲ್ಲಿ ಬಹುತೇಕ ರಾಷ್ಟ್ರಗಳು ಇಸ್ರೇಲ್ ಬೆಂಬಲಕ್ಕೆ ನಿಂತಿವೆ.

ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ಮುಂದೊಂದು ದಿನ ನಾವೇ ಬಲಿಪಶುಗಳಾಗಬಹುದು: ಜೈಶಂಕರ್
ಎಸ್​ ಜೈಶಂಕರ್
ನಯನಾ ರಾಜೀವ್
|

Updated on:Oct 30, 2023 | 10:28 AM

Share

ಭಯೋತ್ಪಾದನೆ(Terrorism) ಇತರೆ ದೇಶಗಳ ಮೇಲೆ ಬೀರುತ್ತಿರುವ ಪರಿಣಾಮವನ್ನು ನಾವು ಗಂಭೀರವಾಗಿ ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ದೊಡ್ಡ ಸಮಸ್ಯೆಯನ್ನೇ ಎದುರಿಸಬೇಕಾಗಬಹುದು ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್(S Jaishankar) ಹೇಳಿದ್ದಾರೆ. ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧ ಮೂರು ವಾರಗಳನ್ನು ಕಳೆದಿದೆ.ಈ ಯುದ್ಧದಲ್ಲಿ ಒಂಬತ್ತೂವರೆ ಸಾವಿರ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಹೋರಾಟದಲ್ಲಿ ಬಹುತೇಕ ರಾಷ್ಟ್ರಗಳು ಇಸ್ರೇಲ್ ಬೆಂಬಲಕ್ಕೆ ನಿಂತಿವೆ.

ಅದೇ ಸಮಯದಲ್ಲಿ, ಮಾನವೀಯ ಆಧಾರದ ಮೇಲೆ ಇಬ್ಬರ ನಡುವೆ ಕದನ ವಿರಾಮವನ್ನು ತಕ್ಷಣವೇ ಜಾರಿಗೆ ತರಲು ಪ್ರಸ್ತಾವನೆಯನ್ನು ನೀಡಲಾಗಿದೆ. ನಾವು ಭಯೋತ್ಪಾದನೆ ಮೇಲೆ ಕಠಿಣ ನಿಲುವನ್ನು ತೆಗೆದುಕೊಳ್ಳದಿದ್ದರೆ ಮುಂದೊಂದು ದಿನ ನಾವೇ ಬಲಿಪಶುಗಳಾಗುತ್ತೇವೆ ಎಂದಿದ್ದಾರೆ.

ಮತ್ತಷ್ಟು ಓದಿ: Jammu and Kashmir: ಭಯೋತ್ಪಾದಕರು ನಡೆಸಿದ ಬಾಂಬ್​​ ಸ್ಫೋಟದಲ್ಲಿ ಸೇನಾ ಸಿಬ್ಬಂದಿಗಳು ಹುತಾತ್ಮ

ಇಂದು ಉತ್ತಮ ಸರ್ಕಾರ ಮತ್ತು ಬಲಿಷ್ಠ ಆಡಳಿತ ತನ್ನ ಜನರ ಪರ ನಿಂತಿದೆ, ಸ್ವದೇಶದಲ್ಲಿ ಉತ್ತಮ ಆಡಳಿತ ಎಷ್ಟು ಅಗತ್ಯವೋ, ವಿದೇಶದಲ್ಲಿಯೂ ಅದೇ ರೀತಿ ಸರಿಯಾದ ನಿರ್ಧಾರಗಳು ಅಗತ್ಯ. ನಾವು ಭಯೋತ್ಪಾದನೆಯ ಬಗ್ಗೆ ಬಲವಾದ ನಿಲುವು ತೆಗೆದುಕೊಳ್ಳುತ್ತೇವೆ.

ಭಯೋತ್ಪಾದನೆ ನಮ್ಮ ಮೇಲೆ ಪರಿಣಾಮ ಬೀರಿದಾಗ ಮಾತ್ರ ಗಂಭೀರ ವಿಷಯ ಎಂದು ಹೇಳಿದಾಗ ಭಾರತದ ಮೇಲೆ ಬೇರೆ ದೇಶಗಳಿಗಿರುವ ವಿಶ್ವಾಸಾರ್ಹತೆ ಕಡಿಮೆಯಾಗಬಹುದು ಹಾಗಾಗಿ ನಾವು ಸ್ಥಿರ ನಿಲುವು ಕಾಯ್ದುಕೊಳ್ಳಬೇಕು.

ಇಸ್ರೇಲ್-ಹಮಾಸ್ ಯುದ್ಧದ ನಡುವೆ ಗಾಜಾದಲ್ಲಿ ಮಾನವೀಯ ಆಧಾರದ ಮೇಲೆ ಕದನ ವಿರಾಮಕ್ಕಾಗಿ ಜೋರ್ಡಾನ್ ಮಂಡಿಸಿದ ಪ್ರಸ್ತಾವನೆಯನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅಂಗೀಕರಿಸಲಾಗಿದೆ ಎಂಬುದು ಗಮನಾರ್ಹ. ಪ್ರಸ್ತಾವನೆಯ ಪರವಾಗಿ 120 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 14 ಮತಗಳು ಚಲಾವಣೆಯಾದವು. ಆದರೆ 45 ದೇಶಗಳು ತಮ್ಮನ್ನು ಮತದಾನದಿಂದ ದೂರವಿಟ್ಟಿದ್ದವು.

ಉಕ್ರೇನ್-ರಷ್ಯಾ ಯುದ್ಧದ ಸಮಯದಲ್ಲಿ, ಯುರೋಪಿಯನ್ ರಾಷ್ಟ್ರಗಳು ರಷ್ಯಾದ ತೈಲವನ್ನು ಖರೀದಿಸಲು ನಿರ್ಬಂಧವನ್ನು ಹೇರಿದ್ದವು, ಆದರೆ ಭಾರತವು ರಷ್ಯಾದಿಂದ ತೈಲವನ್ನು ಖರೀದಿಸುತ್ತಲೇ ಇತ್ತು. ಈ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವ ಜೈಶಂಕರ್, ಯುರೋಪಿಯನ್ ರಾಷ್ಟ್ರಗಳು ರಷ್ಯಾದಿಂದ ತೈಲವನ್ನು ಖರೀದಿಸಬೇಡಿ ಎಂದು ಹೇಳುತ್ತಿವೆ.

ಪ್ರತಿಯೊಂದು ದೇಶವೂ ತನ್ನ ಜನರ ಕಲ್ಯಾಣ ಮತ್ತು ಆರ್ಥಿಕ ಹಿತಾಸಕ್ತಿಗಳನ್ನು ನೋಡಿಕೊಳ್ಳುವಾಗ, ನಾವೇಕೆ ಹಿಂದುಳಿಯಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:28 am, Mon, 30 October 23

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್