AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha poll: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿ 11 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು (ಜುಲೈ 17) ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಸಿದ್ದ ಸ್ಥಾನಗಳಿಗೆ ಎದುರಾಳಿ ಅಭ್ಯರ್ಥಿಗಳೇ ಇಲ್ಲದ ಕಾರಣ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Rajya Sabha poll: ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೇರಿ 11 ಅಭ್ಯರ್ಥಿಗಳು ರಾಜ್ಯಸಭೆಗೆ ಅವಿರೋಧ ಆಯ್ಕೆ
ಎಸ್ ಜೈಶಂಕರ್
ಗಣಪತಿ ಶರ್ಮಾ
|

Updated on: Jul 17, 2023 | 10:51 PM

Share

ನವದೆಹಲಿ, ಜುಲೈ 17: ವಿದೇಶಾಂಗ ಸಚಿವ ಎಸ್ ಜೈಶಂಕರ್ (S Jaishankar) ಸೇರಿದಂತೆ ಗುಜರಾತ್‌ನ ಮೂವರು ಹಾಗೂ ಒಟ್ಟು 11 ಮಂದಿ ಅಭ್ಯರ್ಥಿಗಳು ರಾಜ್ಯಸಭೆಗೆ (Rajya Sabha) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುಜರಾತ್‌ನಿಂದ ಬಿಜೆಪಿ ಅಭ್ಯರ್ಥಿಗಳಾದ ಎಸ್ ಜೈಶಂಕರ್, ಬಾಬುಭಾಯ್ ದೇಸಾಯಿ ಮತ್ತು ಕೇಸರಿದೇವ್ ಸಿಂಗ್ ಝಾಲಾ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಎರಡನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದಂತಾಗಿದೆ.

ಗುಜರಾತ್‌ನ ಮೂರು ಸ್ಥಾನಗಳು, ಗೋವಾದ ಒಂದು ಸ್ಥಾನ ಮತ್ತು ಪಶ್ಚಿಮ ಬಂಗಾಳದ ಆರು ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ ನಡೆಯಬೇಕಿತ್ತು. ಕೇಂದ್ರ ಚುನಾವಣಾ ಆಯೋಗ ಹೊರಡಿಸಿದ ಅಧಿಸೂಚನೆಯ ಪ್ರಕಾರ, ರಾಜ್ಯಸಭಾ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಇಂದು (ಜುಲೈ 17) ಕೊನೆಯ ದಿನಾಂಕವಾಗಿದೆ. ನಾಮಪತ್ರ ಸಲ್ಲಿಸಿದ್ದ ಸ್ಥಾನಗಳಿಗೆ ಎದುರಾಳಿ ಅಭ್ಯರ್ಥಿಗಳೇ ಇಲ್ಲದ ಕಾರಣ ಎಲ್ಲ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಫಲಿತಾಂಶವನ್ನು ಇಂದೇ ಘೋಷಿಸಲಾಗಿದೆ.

ಟಿಎಂಸಿಯ ಆರು ಮಂದಿ ಅಭ್ಯರ್ಥಿಗಳಾದ ಸುಖೇಂದು ಶೇಖರ್ ರಾಯ್, ಡೋಲಾ ಸೋನಾ, ಸಾಕೇತ್ ಗೋಖಲೆ, ಸಮೀರುಲ್ ಇಸ್ಲಾಂ, ಪ್ರಕಾಶ್ ಬಾರಿಕ್, ಡೆರೆಕ್ ಒ’ಬ್ರಯಾನ್​​ ಅವಿರೋಧ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Kishan Reddy: ‘ಧರಣಿ’ ಪೋರ್ಟಲ್​​ನಿಂದ ಹೊಸ ಸಮಸ್ಯೆ; ಬಿಆರ್​​​ಎಸ್ ಸರ್ಕಾರದ ವಿರುದ್ಧ ಕಿಶನ್ ರೆಡ್ಡಿ ಕಿಡಿ

ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಗೋವಾದ ಬಿಜೆಪಿ ಅಭ್ಯರ್ಥಿಯೂ ಸೇರಿದ್ದಾರೆ.

ಐವರು ಸದಸ್ಯರ ಗೆಲುವಿನೊಂದಿಗೆ ಸಂಸತ್ತಿನ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದ ಅಂಕವನ್ನು ತಲುಪುವ ನಿರೀಕ್ಷೆಯಲ್ಲಿದೆ. ಪ್ರಸ್ತುತ, ಎನ್‌ಡಿಎ ಮೈತ್ರಿಕೂಟವು ರಾಜ್ಯಸಭೆಯಲ್ಲಿ ಒಟ್ಟು 105 ಸದಸ್ಯರನ್ನು ಹೊಂದಿದೆ. ಇಬ್ಬರು ಸ್ವತಂತ್ರ ಸದಸ್ಯರು ಮತ್ತು ಐದು ನಾಮನಿರ್ದೇಶಿತ ಸಂಸದರ ಬೆಂಬಲವನ್ನು ಕೋರುತ್ತಿದ್ದು, ನಂತರ ಬಿಜೆಪಿ ಸದಸ್ಯರ ಸಂಖ್ಯೆ 112ಕ್ಕೆ ಏರಿಕೆಯಾಗಲಿದೆ. ಆದರೆ, ಬಹುಮತ ಸಾಧಿಸಲು ಇನ್ನೂ ಎಂಟು ಸದಸ್ಯರ ಅಗತ್ಯವಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?