AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S20-G20 Summit: ಇಶಾ ಯೋಗ ಕೇಂದ್ರವು ಭಾರತದ ಹೊಸ ಗುರುತು: ಜಿ20 ಪ್ರತಿನಿಧಿಗಳ ಮೆಚ್ಚುಗೆ

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ ಜಿ20ಯ ಎಸ್-20 (ವಿಜ್ಞಾನ-20) ಶೃಂಗಸಭೆ ನಡೆಯಿತು.

S20-G20 Summit: ಇಶಾ ಯೋಗ ಕೇಂದ್ರವು ಭಾರತದ ಹೊಸ ಗುರುತು: ಜಿ20 ಪ್ರತಿನಿಧಿಗಳ ಮೆಚ್ಚುಗೆ
ಜಿ20 ಗಣ್ಯರುImage Credit source: ANI
ನಯನಾ ರಾಜೀವ್
|

Updated on: Jul 24, 2023 | 9:45 AM

Share

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದಲ್ಲಿ ಜಿ20ಯ ಎಸ್-20 (ವಿಜ್ಞಾನ-20) ಶೃಂಗಸಭೆ ನಡೆಯಿತು. ಅದರಲ್ಲಿ ಪಾಲ್ಗೊಂಡಿದ್ದ 100ಕ್ಕೂ ಅಧಿಕ ಗಣ್ಯರು, ಇಶಾ ಯೋಗ ಕೇಂದ್ರ ಭಾರತದ ಹೊಸ ಗುರುತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸದ್ಗುರು ಅವರು ಇನ್ನರ್ ಎಂಜಿನಿಯರಿಂಗ್ ಟೆಕ್ನಾಲಜೀಸ್ ಫಾರ್ ವೆಲ್ ಬೀಯಿಂಗ್ ವಿಷಯದ ಕುರಿತು ಸಂವಾದ ನಡೆಸಿದರು.

ನಾವು ನಮ್ಮನ್ನು ಉತ್ತಮವಾಗಿ ರೂಪಿಸಿಕೊಳ್ಳುವುದು ಮತ್ತು ವೈಜ್ಞಾನಿಕ ಹಾಗೂ ತಾಂತ್ರಿಕ ಪ್ರಗತಿ ನಮ್ಮ ಬದ್ಧತೆಯಾಗಿದೆ. ಇದು ಮಾತ್ರ ನಮ್ಮ ಜೀವನಶೈಲಿಯನ್ನು ಬದಲಾಯಿಸಬಹುದು ಎಂದು ಸದ್ಗುರು ಅವರು ಹೇಳಿದರು.

ಈ ಸಮಾವೇಶದಲ್ಲಿ ವಿವಿಧ ದೇಶಗಳ ವಿಜ್ಞಾನಿಗಳು, ಶಿಕ್ಷಣ ತಜ್ಞರು ಸೇರಿದಂತೆ 35 ಮಂದಿ ವಿದೇಶಿ ಗಣ್ಯರು ಹಾಗೂ 65 ಮಂದಿ ಭಾರತೀಯ ಗಣ್ಯರು ಭಾಗಿಯಾಗಿದ್ದರು. ಈ ಸಭೆಯಲ್ಲಿ ಹಸಿರು ಇಂಧನ, ಯುನಿವರ್ಸಲ್ ಹೋಲಿಸ್ಟಿಕ್ ಹೆಲ್ತ್, ವಿಜ್ಞಾನವನ್ನು ಸಮಾಜ ಮತ್ತು ಸಂಸ್ಕೃತಿಗೆ ಜೋಡಿಸುವ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಇಶಾ ಯೋಗ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ವಿಶ್ವದ ವಿಜ್ಞಾನಿಗಳು, ಶಿಕ್ಷಣ ತಜ್ಞರು ಸೇರಿದಂತೆ ಹಲವು ಮಂದಿ ಪಾಲ್ಗೊಂಡಿದ್ದರು. ಇಶಾ ಯೋಗ ಕೇಂದ್ರಕ್ಕೆ ಭೇಟಿ ನೀಡಿದ ಜಿ20 ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳಿಗೆ ಭಾರತೀಯ ಸಂಸ್ಕೃತಿ ಮತ್ತು ಯೋಗ ಸಂಪ್ರದಾಯವನ್ನು ಪ್ರದರ್ಶಿಸಲಾಯಿತು . ಈ ವೇಳೆ ಆದಿಯೋಗಿ ಶಿವನ ಪ್ರತಿಮೆಯ ಮುಂದೆ ಪ್ರತಿನಿಧಿಗಳು ಚಿತ್ರಗಳನ್ನು ತೆಗೆಸಿಕೊಂಡರು.

ಸಂವಾದದ ಬಳಿಕ  ಗಣ್ಯರು ಮಾತನಾಡಿ, ಹಳೆಯ ವಿಜ್ಞಾನದ ಪರಿಭಾಷೆಗಳು ಈಗ ಅರ್ಥಕಳೆದುಕೊಂಡಿವೆ. ಜೀವನಾಧಾರಿತ ವಿಜ್ಞಾನದ ಬಗ್ಗೆ ಚರ್ಚೆ ನಡೆಸಲು ಫೌಂಡೇಶನ್ ಮಾಡಿಕೊಂಡಿರುವುದು ಉತ್ತಮವಾಗಿದೆ. ವಸುಧೈವ ಕುಟುಂಬಕಂ ಪರಿಕಲ್ಪನೆಯಲ್ಲಿ ಭಾರತ ಜಿ 20 ಶೃಂಗಸಭೆಯ ಅಧ್ಯಕ್ಷತೆ ವಹಿಸಿರುವುದು ಬಹಳ ಅರ್ಥಪೂರ್ಣವಾಗಿದೆ.

ಈ ಕಾರ್ಯಕ್ರಮವನ್ನು ಯಾವುದೇ 5 ಹೋಟೆಲ್‌ನಲ್ಲಿ ನಡೆಸಬಹುದಾಗಿತ್ತು. ಆದರೆ ಇಶಾದಲ್ಲಿ ಆಯೋಜನೆ ಮಾಡಿರುವುದು ಉತ್ತಮ ವಿಚಾರ ಎಂದಿದ್ದಾರೆ. ಜಿ 20 ಸಭೆ ಜುಲೈ 21 ರಿಂದ ಜುಲೈ 22 ರವರೆಗೆ ನಡೆಯಿತು. ಇದು ಹಸಿರು ಭವಿಷ್ಯಕ್ಕಾಗಿ ಶುದ್ಧ ಇಂಧನ, ಸಾರ್ವತ್ರಿಕ ಸಮಗ್ರ ಆರೋಗ್ಯ ಮತ್ತು ಸಮಾಜ ಮತ್ತು ಸಂಸ್ಕೃತಿಯೊಂದಿಗೆ ವಿಜ್ಞಾನವನ್ನು ಸಂಪರ್ಕಿಸುವ ವಿಷಯಗಳ ಕುರಿತು ಚರ್ಚಿಸಲು ಸುಮಾರು 35 ವಿದೇಶಿ ಪ್ರತಿನಿಧಿಗಳು ಮತ್ತು ಪ್ರಪಂಚದಾದ್ಯಂತದ ಪ್ರತಿಷ್ಠಿತ ಸಂಸ್ಥೆಗಳಿಂದ 65 ಭಾರತೀಯ ಪ್ರತಿನಿಧಿಗಳನ್ನು ಒಟ್ಟುಗೂಡಿಸಿತು.

ಪ್ರತಿನಿಧಿಗಳಲ್ಲಿ ರಾಯಲ್ ಸೊಸೈಟಿ (ಯುನೈಟೆಡ್ ಕಿಂಗ್‌ಡಮ್), ನ್ಯಾಷನಲ್ ಅಕಾಡೆಮಿ ಆಫ್ ಸೈನ್ಸಸ್ (ಯುಎಸ್‌ಎ), ಇಂಟರ್‌ನ್ಯಾಶನಲ್ ಕೌನ್ಸಿಲ್ ಆಫ್ ಸೈನ್ಸ್, (ಫ್ರಾನ್ಸ್), ಸಿಇಆರ್‌ಎನ್ (ಸ್ವಿಟ್ಜರ್ಲೆಂಡ್), ಇಂಡಿಯನ್ ನ್ಯಾಷನಲ್ ಸೈನ್ಸ್ ಅಕಾಡೆಮಿಯ ತಜ್ಞರು ಸೇರಿದ್ದಾರೆ. ಮಾರ್ಷಲ್ ಆರ್ಟ್ ಕಲರಿಪಯಟ್ಟು, ಭರತನಾಟ್ಯವನ್ನು ಇಶಾ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ