AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ತಿನ ಒಳಗೆ ವಿದ್ಯಾರ್ಥಿಗಳ ಭವಿಷ್ಯದ ಚರ್ಚೆ, ಹೊರಗೆ ಸಂಸದೆಯ ರೀಲ್ಸ್: “ಇದಕ್ಕಾ ವೋಟ್ ಹಾಕಿದ್ದು?” ಎಂದು ಸಿಡಿದೆದ್ದ ನೆಟ್ಟಿಗರು

ನೀಟ್ ಪರೀಕ್ಷಾ ಅಕ್ರಮದ ಕುರಿತು ಸಂಸತ್ತಿನಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಾಗ, ಜಾದವ್‌ಪುರ ಸಂಸದೆ ಸಾಯನಿ ಘೋಷ್ ಸಂಸತ್ ಆವರಣದಲ್ಲಿ ಮಳೆಯಲ್ಲಿ ರೀಲ್ಸ್ ಮಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. 'ತಾಲ್' ಹಾಡಿಗೆ ಮಾಡಿದ ಈ 20 ಸೆಕೆಂಡ್‌ಗಳ ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆದು ವೈರಲ್ ಆಗಿದೆ. ದೇಶದ ಸಮಸ್ಯೆಗಳಿಗೆ ಧ್ವನಿ ಎತ್ತಲು ಕಳುಹಿಸಿದ ಸಂಸದೆ ರೀಲ್ಸ್ ಮಾಡಿದ್ದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಸತ್ತಿನ ಒಳಗೆ ವಿದ್ಯಾರ್ಥಿಗಳ ಭವಿಷ್ಯದ ಚರ್ಚೆ, ಹೊರಗೆ ಸಂಸದೆಯ ರೀಲ್ಸ್: ಇದಕ್ಕಾ ವೋಟ್ ಹಾಕಿದ್ದು? ಎಂದು ಸಿಡಿದೆದ್ದ ನೆಟ್ಟಿಗರು
ಸಂಸದೆ ಸಾಯನಿ ಘೋಷ್
ಅಕ್ಷಯ್​ ಪಲ್ಲಮಜಲು​​
|

Updated on: Jul 29, 2026 | 4:24 PM

Share

ದೆಹಲಿ, ಜು.29: ಒಂದೆಡೆ ‘ನೀಟ್’ (NEET) ಪಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲ, ಕಲಾಪ ಮುಂದೂಡಿಕೆ ಮತ್ತು ತೀವ್ರ ವಾಗ್ದಾಳಿಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಜಾದವ್‌ಪುರ ಲೋಕಸಭಾ ಕ್ಷೇತ್ರದ ಸಂಸದೆ ಸಾಯನಿ ಘೋಷ್ (Saayoni Ghosh) ಸಂಸತ್ ಭವನದ ಆವರಣದಲ್ಲಿ ರೀಲ್ಸ್ (Reels) ಮಾಡಿ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ತೃಣಮೂಲ ಕಾಂಗ್ರೆಸ್  ನಿಂದ ಬಂಡಾಯವೆದ್ದು ಬಂದಿರುವ NCPI ಸಂಸದರೂ ಸಹ ಮುಂಗಾರು ಕಲಾಪದಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ ನಟಿ ಹಾಗೂ ಸಂಸದೆಯಾಗಿರುವ ಸಾಯನಿ ಘೋಷ್ ಅವರು ಸಂಸತ್ತಿನ ಮಧ್ಯಾಹ್ನ ಭೋಜನದ ವಿರಾಮದ ವೇಳೆಯಲ್ಲಿ ಸಂಸತ್ ಭವನದ ಆವರಣದಲ್ಲಿ ಮಳೆಯನ್ನು ಆನಂದಿಸುತ್ತಾ ಮಾಡಿದ ವೀಡಿಯೊ ಈಗ ವೈರಲ್ ಆಗಿದೆ.

ಇಲ್ಲಿದೆ ನೋಡಿ ವಿಡಿಯೋ;

View this post on Instagram

A post shared by Saayoni Ghosh (@sayanigh)

‘ತಾಲ್’  ಚಲನಚಿತ್ರದ ‘ನೆಹಿ ಸಮ್ನೆ ತು’ ಜನಪ್ರಿಯ ಹಾಡಿಗೆ ಸಾಯನಿ ಘೋಷ್ ಮಾಡಿರುವ 20 ಸೆಕೆಂಡ್‌ಗಳ ಈ ರೀಲ್ಸ್ ಮಂಗಳವಾರ ಪೋಸ್ಟ್ ಆಗಿದ್ದು, ಇಂಟರ್ನೆಟ್‌ನಲ್ಲಿ ತೀವ್ರ ವೈರಲ್ ಆಗಿದೆ. ಈ ವೀಡಿಯೊ ಈಗಾಗಲೇ 87 ಲಕ್ಷಕ್ಕಿಂತಲ್ಲೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದ್ದು, 5,000ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ.

ಇದನ್ನೂ ಓದಿ: ಇನ್ಮುಂದೆ ನೋಟುಗಳು ಹರಿಯಲ್ಲ, ನೀರಿಗೆ ನೆನೆಯಲ್ಲ: 200 ಕೋಟಿ ಪ್ಲಾಸ್ಟಿಕ್ ನೋಟು ಮುದ್ರಣ; ಕಾಗದದ ನೋಟುಗಳು ಬಂದ್ ಆಗುತ್ತಾ?

ಸಾಯನಿ ಘೋಷ್ ಅವರ ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿತವಾದ ಟೀಕೆಗಳಿಗೆ ಕಾರಣವಾಗಿದೆ. ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ‘ನೀಟ್’ ಪರೀಕ್ಷೆಯ ಅಕ್ರಮದ ಕುರಿತು ಸಂಸತ್ತಿನ ಒಳಗೆ ತೀವ್ರ ಚರ್ಚೆ ಮತ್ತು ಆಕ್ರೋಶ ವ್ಯಕ್ತವಾಗುತ್ತಿರುವಾಗ, ಹೊರಗಡೆ ಸಂಸದೆಯೊಬ್ಬರು ಮಳೆಗೆ ರೀಲ್ಸ್ ಮಾಡುತ್ತಿರುವುದನ್ನು ನೆಟ್ಟಿಗರು ಪ್ರಶ್ನಿಸಿದ್ದಾರೆ. “ಜನರು ನಿಮ್ಮನ್ನು ದೇಶದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ಸಂಸತ್ತಿಗೆ ಕಳುಹಿಸಿದ್ದಾರೆಯೇ ಹೊರತು ರೀಲ್ಸ್ ಮಾಡಲು ಅಲ್ಲ” ಎಂದು ಹಲವರು ಕಾಮೆಂಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ರಾಷ್ಟ್ರದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!