Sign In

By signing in or creating an account, you agree with Associated Broadcasting Company's Terms & Conditions and Privacy Policy.

Greenfield Airport: ಶಬರಿಮಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ; ಗ್ರೇಟ್ ನ್ಯೂಸ್ ಎಂದ ಮೋದಿ

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನಕ್ಕೆ ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಹೊಸ 'ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ' ಯೋಜನೆಗೆ ನಾಗರಿಕ ವಿಮಾನಯಾನ ಸಚಿವಾಲಯ (MoCA) ಸೋಮವಾರ ಅನುಮತಿ ನೀಡಿದೆ.

Greenfield Airport: ಶಬರಿಮಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಹಸಿರು ನಿಶಾನೆ; ಗ್ರೇಟ್ ನ್ಯೂಸ್ ಎಂದ ಮೋದಿ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 18, 2023 | 4:09 PM

ಪತ್ತನಂತಿಟ್ಟ: ಅಯ್ಯಪ್ಪ ಭಕ್ತರಿಗೆ ಮೋದಿ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಕೇರಳದ ಪತ್ತನಂತಿಟ್ಟ ಜಿಲ್ಲೆಯ ಶಬರಿಮಲೆ ದೇವಸ್ಥಾನಕ್ಕೆ (Sabarimala temple) ಸಮೀಪವಿರುವ ಕೊಟ್ಟಾಯಂ ಜಿಲ್ಲೆಯಲ್ಲಿ ಹೊಸ ‘ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ(Greenfield Airport) ಯೋಜನೆಗೆ ನಾಗರಿಕ ವಿಮಾನಯಾನ ಸಚಿವಾಲಯ (MoCA) ಸೋಮವಾರ ಅನುಮತಿ ನೀಡಿದೆ. ಈ ಯೋಜನೆಯಿಂದ ಶಬರಿಮಲೆಯ ಅಯ್ಯಪ್ಪನ ದೇಗುಲಕ್ಕೆ ಭೇಟಿ ನೀಡಲು ಕೇರಳಕ್ಕೆ ಬರುವ ಸಾವಿರಾರು ಭಕ್ತರಿಗೆ ಪ್ರಯೋಜನಕಾರಿಯಾಗಲಿದೆ ಎಂದು ಹೇಳಲಾಗಿದೆ. ಸಚಿವಾಲಯ ಮತ್ತು ಯೋಜನಾ ಪ್ರಾಧಿಕಾರ, ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ (KSIDC) ನಡುವಿನ ಬಹು ಸುತ್ತಿನ ಚರ್ಚೆಗಳ ನಂತರ ಯೋಜನೆಗೆ ಅನುಮತಿ ದೊರೆತಿದೆ. ಈ ಯೋಜನೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದ್ದು, ಈ ವಿಮಾನ ನಿಲ್ದಾಣವು ಬೇರೆ ಬೇರೆ ರಾಜ್ಯಗಳಿಗೆ ಹೆಚ್ಚಿನ ಸಂಪರ್ಕವನ್ನು ಸಾಧಿಸುತ್ತದೆ ಮತ್ತು ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಸಚಿವಾಲಯ ಹೇಳಿದೆ.

ಕೊಟ್ಟಾಯಂ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಯೋಜನೆಗೆ 2,250 ಎಕರೆ ಭೂಮಿಯನ್ನು ಈಗಾಗಲೇ ನಿಗದಿ ಮಾಡಿದ್ದು, ಈ ವಿಮಾನ ನಿಲ್ದಾಣಕ್ಕೆ ಅಂದಾಜು 4,000 ಕೋಟಿ ರೂ. ವೆಚ್ಚವಾಗಲಿದೆ ಎಂದು ಹೇಳಲಾಗಿದೆ. ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣದ ಕುರಿತು ಈಗಾಗಲೇ ನಾಗರಿಕ ವಿಮಾನಯಾನ ಸಚಿವಾಲಯದ ಪ್ರಕಟಣೆಯನ್ನು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದು, ಈ ಟ್ವೀಟ್​​ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಏ18)ರೀ ಟ್ವೀಟ್​​ ಮಾಡಿಕೊಂಡಿದ್ದಾರೆ. ಇದು ಪ್ರವಾಸೋದ್ಯಮಕ್ಕೆ, ವಿಶೇಷವಾಗಿ ಶರಿಮಲೆ ಭಕ್ತರಿಗೆ ಹಾಗೂ ದೇವರ ನಾಡಿನ ಬೇರೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರಿಗೆ “ಉತ್ತಮ ಸುದ್ದಿ” ಎಂದು ಮೋದಿ ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sabarimala Ayyappa Swamy Temple: ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಈ ಹಿಂದೆ ಮೋದಿ ಅವರು ಕಾಶಿ ವಿಶ್ವನಾಥ ದೇಗುಲ ಮತ್ತು ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿರುವ ಪುಣ್ಯ ಕ್ಷೇತ್ರಗಳ ಬಗ್ಗೆ ಮತ್ತು ಈ 10 ಕಾರಣಕ್ಕೆ ಕಾಶಿಗೆ ಭೇಟಿ ನೀಡಬೇಕು ಎಂದು ಟ್ವೀಟರ್​​ನಲ್ಲಿ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದರು. ಕಳೆದ ವಾರ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶಬರಿಮಲೆಯಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳಿಗೆ ಅನುಮತಿಗಳನ್ನು ಪಡೆದುಕೊಳ್ಳಲಾಗಿದೆ. ಈಗಾಗಲೇ ಅಡಿಪಾಯವನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಶರಿಮಲೆ ಅಯ್ಯಪ್ಪನ ದೇಗುಲ ಇರುವ ಪತ್ತನಂತಿಟ್ಟ ಜಿಲ್ಲೆಯಲ್ಲಿ ಮಹತ್ವದ ರಸ್ತೆ ಯೋಜನೆಯ ಉದ್ಘಾಟನೆ ಸಂದರ್ಭದಲ್ಲಿ ಅವರು ಈ ಘೋಷಣೆ ಮಾಡಿದರು. ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಅವರು, ಶಬರಿಮಲೆಗೆ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಅದಕ್ಕೆ ಅಗತ್ಯವಾದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಬರಿಮಲೆ ದೇಗುಲಕ್ಕೆ ದೇಶದ ವಿವಿಧ ಭಾಗಗಳಿಂದ ಮತ್ತು ವಿದೇಶಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಬರುತ್ತಾರೆ. 2022ರಲ್ಲಿ ಸುಮಾರು 30 ಲಕ್ಷ ಯಾತ್ರಿಕರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ವರದಿ ಮಾಡಿದೆ.

Published On - 3:59 pm, Tue, 18 April 23