ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಓಪನ್​​: 41 ದಿನಗಳ ಕಾಲ ಮಂಡಲ ಪೂಜೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 17, 2023 | 9:49 AM

Sabarimala Ayyappa Swamy Temple: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೇವಾಲಯದ ಬಾಗಿಲನ್ನು ತೆರೆಯಾಗಿತ್ತು. ಇಂದಿನಿಂದ (ನ.17) 41 ದಿನಗಳ ತೀರ್ಥಯಾತ್ರೆ ಆರಂಭವಾಗಲಿದೆ. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ.

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ಓಪನ್​​: 41 ದಿನಗಳ ಕಾಲ ಮಂಡಲ ಪೂಜೆ
ಸಾಂದರ್ಭಿಕ ಚಿತ್ರ
Follow us on

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ (Sabarimala Ayyappa Swamy Temple) ಬಾಗಿಲು ತೆರೆಯಲಾಗಿದೆ. ಮಂಡಳ-ಮಕರವಿಳಕ್ಕು ಯಾತ್ರೆ ಪ್ರಾರಂಭವಾದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ದೇವಾಲಯದ ಬಾಗಿಲನ್ನು ತೆರೆಯಾಗಿತ್ತು. ಇಂದಿನಿಂದ (ನ.17) 41 ದಿನಗಳ ತೀರ್ಥಯಾತ್ರೆ ಆರಂಭವಾಗಲಿದೆ. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ. ಇನ್ನು ಗುರುವಾರ ದೇವಾಲಯದ ‘ತಂತ್ರಿ’ (ಮುಖ್ಯ ಅರ್ಚಕ) ಮಹೇಶ್ ಮೋಹನರು ಅವರ ನೇತೃತ್ವದಲ್ಲಿ ಅಯ್ಯಪ್ಪ ಸನ್ನಿಧಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇದರ ಜತೆಗೆ ಮತ್ತೊಬ್ಬ ಮುಖ್ಯ ಅರ್ಚಕ ಕೆ ಜಯರಾಮನ್ ನಂಬೂತಿರಿ ಅವರ ಸಮ್ಮುಖದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ಈ ಸಮಯದಲ್ಲಿ ಶಬರಿ ಮಲೆಗೆ ಬಂದಿದ್ದ ಅಯ್ಯಪ್ಪ ಭಕ್ತರು ಪಂಪಾ ನದಿಯಲ್ಲಿ ಸಾನ್ನ ಮಾಡಿ, ಹದಿನೆಂಟು ಮೆಟ್ಟಿಲು ಹತ್ತಿ ಅಯ್ಯಪ್ಪನ ನೋಡಲು ಕಾತುರದಿಂದ ಕಾಯುತ್ತಿದ್ದರು. ಇನ್ನು ಮಲಯಾಳಂ ಕ್ಯಾಲೆಂಡರ್​ ಪ್ರಕಾರ 41 ದಿನಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ಆರಂಭವಾಗಲಿದೆ. ಜನವರಿಯಲ್ಲಿ ಮಕರ ಸಂಕ್ರಾತಿಯಂದು ಮಕರವಿಳಕ್ಕು ನೆರವೇರಲಿದ್ದು, ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಅಯ್ಯಪ್ಪನ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ:ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆ ನಿಂತ ಅಯ್ಯಪ್ಪಸ್ವಾಮಿ ಜನ್ಮ ರಹಸ್ಯ

ಈಗಾಗಲೇ ದೇವಾಲಯದಲ್ಲಿ ಎಲ್ಲ ಕಾರ್ಯಕ್ರಮಗಳು ಆರಂಭವಾಗಿದ್ದು, ಆಡಳಿತ ವ್ಯವಸ್ಥೆಯಲ್ಲೂ ಕೂಡ ಬದಲಾವಣೆಗಳು ಆಗಿದೆ. ಶಬರಿಮಲೆ ಮತ್ತು ಮಲಿಕಪ್ಪುರಂ ದೇವಸ್ಥಾನದ ನೂತನ ‘ಮೇಲ್ಶಾಂತಿ’ಗಳಾಗಿ ( ಪ್ರಧಾನ ಅರ್ಚಕ) ಪಿಎನ್ ಮಹೇಶ್ ಮತ್ತು ಪಿಜಿ ಮುರಳಿ ನೇಮಕ ಮಾಡಲಾಗಿದೆ. ಇದರ ಜತೆಗೆ ದೇವಾಲಯಕ್ಕೆ ಬರುವ ಭಕ್ತರಿಗೆ ರಕ್ಷಣೆ ಹಾಗೂ ಮೂಲಸೌಕರ್ಯಗಳನ್ನು ಕೂಡ ಹೆಚ್ಚಿಸಲಾಗಿದೆ. ಆಸ್ಪತ್ರೆ ಹಾಗೂ ಶೌಚಾಲಯ, ಪಾರ್ಕಿಂಗ್​​ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ